Friday 20 December 2019

ಹರಿದಿನ ಪಾತಕ ಪರಿಹಾರ ದನುಜರ ankita shree krishna

ಹರಿದಿನ ಪಾತಕ ಪರಿಹಾರ ದನುಜರ
ಕರುಣಕ್ಕೆ ಕಾರಣ ನಂಬೆಲೊ ಮನುಜ ||pa||

ಗಂಗೆ ಮೊದಲಾದ ತೀರ್ಥಂಗಳೆಣೆಯ ಶ್ರೀ-ರಂಗ ಮೊದಲಾದ ಕ್ಷೇತ್ರವು ಸರಿಯೆ
ಉ-ತ್ತುಂಗ ಜಪತಪÀ ಹೋಮಂಗಳೆದುರೆ ಶ್ರೀ-ರಂಗನಾಥನ ದಿನದೊಂದುಪವಾಸಕೆ ||1||

ಹಿಂದೆ ಮಾಡಿದ ಪಾಪ ಪರಿಹಾರವು ನೀ-ನಿಂದು ಮಾಡುವ ಸುಕೃತ ಬೆಳಸು
ಮುಂದಣ ಮುಕುತಿಗೆ ಕಲ್ಪ ಲತಾಂಕುರಇಂದಿರೇಶನ ದಿನದೊಂದುಪವಾಸಕೆ ||2||

ರುಕುಮಾಂಗದ ಮೊದಲಾದ ಭಕುತರೆಲ್ಲಸಕಲವ ಬಿಟ್ಟು ಏಕಾದಶಿ ವ್ರತವ
ಭಕುತಿಯಿಂ ಕೂಡಿ ಶ್ರೀಕೃಷ್ಣನ ಮೆಚ್ಚಿಸಿಮುಕುತಿ ಸೂರೆಯಗೊಂಡರೆಂಬುದನರಿಯ ||3||
*******

No comments:

Post a Comment