Wednesday 16 October 2019

ನೊಂದು ಸಂಸಾರದೊಳಗೊಂದಿಸುವೆನೋ ಇಂದು ankita vijaya vittala

ವಿಜಯದಾಸ
ನೊಂದು ಸಂಸಾರದೊಳಗೊಂದಿಸುವೆನೋ ಇಂದು
ಮಾಧವ ಯಾದವ ಪ

ಕರುಣಬಾರದೆ ನಿನಗೆ ಅಕಟಕಟ ಅಕಟಕಟ
ಶರಣ ನಾ ನಿನಗಲ್ಲವೇ ಸ್ವಾಮಿ ನಿನ್ನ
ಮೊರೆಹೊಕ್ಕೆ ಸರ್ವಾಂತರ್ಯಾಮಿ-ಎನ್ನ
ಎರವು ಮಾಡುವರೇನೋ ಪ್ರೇಮಿ-ಇನ್ನು
ಪರಿಹರಿಸು ಸಂಚಿತಾಗಾಮಿ-ಇದೇ
ಸರಿಯೇನೊ ಜಗದೊಳಗೆ ಭಕುತವತ್ಸಲನೆಂಬ
ಬಿರುದು ಪೊಳ್ಳಾಗದೇನೊ ನಿರುತ ಖ್ಯಾತ1

ಸತತ ಸುಖವುಳ್ಳರೆ ಬಾಯ್ದೆರೆದು ಪಲ್ಗಿರಿದು
ನುತಿಸಿ ಬೇಡಿಕೊಂಬೆನೇ ನಿನ್ನ- ಮುಂದೆ
ಗತಿಯ ಕಾಣದಲೆ ಚಾಲ್ವರಿದೆ ಭೇದ-
ಮತಿ ಕೊಡದೆ ನೋಡುವುದು ಬರಿದೆ-ಸರ್ವ
ಕ್ಷಿತಿಯೊಳಗೆ ನೀನೆಂದು ಅರಿದೆ-ವರ-
ತತುವ ನಿಯ್ಯಾಮಕರ ಬಳಿ ಪಿಡಿದು ನಿನ್ನಂಘ್ರಿ
ಶತಪತ್ರ ತೋರಿಸೈಯ್ಯಾ ಜೀಯಾ 2

ಶೃತಿಶಾಸ್ತ್ರ ಪೌರಾಣ ಭಾರತ ರಾಮಾಯಣ
ಇತಿಹಾಸ ಪಾಂಚರಾತ್ರ ನಿಗಮ-ನಿನ್ನ
ತುತಿಪ ಭಕುತರಿಗೆ ತಲೆಬಾಗಿ-ಕೊಂಡು
ಪ್ರತಿದಿವಸದಲಿ ಚೆನ್ನಾಗಿ-ವಲಿದು
ಅತಿಶಯವ ಕೊಡುತ ಲೇಸಾಗಿ-ವಿಘ್ನ
ತತಿಕಳೆದು ನೀ ಬಂದು ಸಾರೆ ಬೆರಗಾಗುತಿದೆ
ಪತಿತಿ ಪಾವನ ಮೋಹನ-ಚೆನ್ನ3

ತಡವ್ಯಾಕೆ ಗುಣಕಾಲ ಕರ್ಮದೇಶಗಳೆಲ್ಲ
ವಡೆಯ ಎನ್ನಾಧೀನವೇ ಪೇಳೊ-ದು:ಖ
ಬಿಡಿಸುವುದು ನಿನಗುಚಿತವಲ್ಲ-ಪಾಟು
ಸಿರಿ ಲಕುಮಿನಲ್ಲ-ಒಂದು
ನುಡಿವೆ ನಾನಾಂತರ್ಯ ಸೊಲ್ಲ-ಇಂತು
ಕಡೆಮಾಡಿ ನೋಡದಿರು ದಿವಸ ಹಿಂದಾಗುತಿದೆ
ಬಡವರಾಧಾರಿ ಕರುಣೀ-ದಾನಿ4

ಧ್ರುವನು ನಭದೊಳು ಇಲ್ಲಿ ರಾವಣಾನುಜ ಅಧೋ
ಭುವನದಲಿ ಬಲಿರಾಯನ ನೋಡಿ, ನಾನು
ತವಪಾದ ಗತಿಯೆಂದು ಬಂದೆ-ಮಹಾ
ಭವಣೆ ಬಟ್ಟೆನೊ ಕೇಳು ಹಿಂದೆ-ಜಗದಿ
ತ್ರಿವಿಧ ತಾಪಗಳಿಂದ ನೊಂದೆ-ಈ
ಅವಸರಕೆ ಬಂದೊದಗಿ ನಿನ್ನ ನಾಮಾಮೃತದ
ಸವಿದೋರೊ ದ್ವಾರಾವತಿಯ-ಜೀಯ 5

ಅಂಧಕೂಪದಲಿ ಬಿದ್ದವನ ನೋಡಿ ನಿನಗೆ ಚ
ಕ್ಕಂದವಾಗಿದೆಯೊ ಕಾಣೆ-ನಾನು
ಸಂದೇಹ ದ್ವೇಷದವನಲ್ಲ-ಇದು
ಎಂದೆಂದಿಗೂ ಪುಸಿಯು ಅಲ್ಲ-ಹೃದಯ-
ಮಂದಿರದೊಳು ಬಲ್ಲೆಯೆಲ್ಲ-ಸ್ವಾಮಿ
ನೊಂದು ಕೂಗಿದರೆ ಎಳೆಗಂದಿಯೆಂಬಾ ಮಾತು
ಇಂದು ಎತ್ತಲಿ ಪೋಯಿತೋ ತಾತ-ನೀತ 6

ಗುಣವಂತ ಬಲವಂತ ಜಯವಂತ ಸಿರಿವಂತ
ಘನವಂತ ಧೈರ್ಯವಂತ ಶ್ರೀಕಾಂತ-ಎನ್ನ
ಮನದ ದುಮ್ಮಾನವನೆ ಬಿಡಿಸೊ-ನಿನ್ನ
ಅನವರತ ನಾಮವನು ನುಡಿಸೊ-ಮಧ್ವ
ಮುನಿ ಕರುಣ ಕವಚವನು ತೊಡಿಸೊ-ಇದೇ
ಜನುಮ ಜನುಮಕೆ ಬೇಡಿಕೊಂಬೆ-ಶರಣೆಂಬೆ
ಪ್ರಣತ ಹೃದಯಾಬ್ಜ ತುಂಬೆ-ಕಾಂಬೆ 7

ಮಾನಸ್ನಾನವನುಂಡು ಮತಿಗೆಟ್ಟ ಪೂರ್ಣ ವಿ
e್ಞÁನಮಯನೆ ನಿನ್ನ ಮರೆದೆ-ಕರ್ಮ
ಪ್ರಾಣೇಂದ್ರಿಯಂಗಳು ನಿನ್ನ ವಶವೊ-ಇಂಥ
ಜಾಣತನ ಬಹಳ ಸಂತಸವೊ-ಹೀಗೆ
ಮಾಣದಲೆ ಇಪ್ಪ ಸಾಹಸವೋ ಚನ್ನ
e್ಞÁನ ಭಕುತಿ ವಿರಕುತಿ ಕೊಟ್ಟು
ನಿನ್ನವರೊಳಾನಂದದಲಿ ನಿಲ್ಲಿಸೈಯ್ಯ ಜೀಯ 8

ಶಂಖ ಚಕ್ರ ವರಾಭಯ ಹಸ್ತದಲಿ ನಿಂದ
ವೆಂಕಟಾಚಲ ನಿವಾಸ ಶ್ರೀಶ-ನಿನ್ನ
ಕಿಂಕರನ ಕಿಂಕರನೊ ನಾನು-ಅಕ-
ಳಂಕ ಮನುಜನ ಮಾಡೊ ನೀನು-ಭವ
ಸಂಕಟವ ಕಳೆಯಾ ಸುರಧೇನು-ಬೊಮ್ಮ
ವಿನುತ ವಿಜಯವಿಠ್ಠಲ ಹರಿ-
ಣಾಂಕ ಸೌವರ್ಣ ಪೂರ್ಣ ಸಂಪೂರ್ಣ 9
*********

No comments:

Post a Comment