Wednesday 16 October 2019

ಏನು ಪೇಳಲಿ ತೀರ್ಥಪತಿಯ ಮಹಿಮೆ ankita vijaya vittala

ಏನು ಪೇಳಲಿ ತೀರ್ಥಪತಿಯ ಮಹಿಮೆ
ಮಾನವರಿಗೆ ಯಿಲ್ಲಿ ಮುಕ್ತಿ ಏಳಲವಯ್ಯಾ ಪ

ಕಾಸಿಯೊಳು ಮರಣ ಮುಕ್ತಿಯೆಂದು ಪೇಳುವದು
ದೇಶದೊಳು ಪುಸಿಯಲ್ಲ ಸಿದ್ಧವೆನ್ನಿ
ಈಶನುಪದೇಶದಿಂದಲಿ ವಿಗತ ಜನನಾಗಿ
ಶ್ರೀ ಶಕ್ತಿ ವೇಣಿಮಾಧವನ ಸನ್ನಿಧಿ ಗೈಯ್ವಾ 1

ನಿರುತ ವ್ಯಭಿಚಾರಿ ವಿಪ್ರನ ಕೆಡಿಸಿ ಕಾಸಿಯಲಿ
ಪರಮಭೀತಿಯಿಂದ ಅವಳ ವಸನವ ತಂದು
ವರ ತ್ರಿವೇಣಿಯೊಳಗೆ ತೊಯಿಸಲು ಗತಿಸಾರ್ದರು 2

ಇಲ್ಲಿಗೆ ನಡೆತಂದು ಸ್ನಾನವಂದೆ ಮಾಡಲು
ನಿಲ್ಲದೆ ಸನ್ಮುಕ್ತಿ ಧರನಾಗುವಾ
ಬಲ್ಲಿದಾ ವಿಜಯವಿಠ್ಠಲವೇಣಿ ಮಾಧವನ
ಸಲ್ಲಲಿತ ಪಾದವನು ಕಾಂಬ ಪ್ರಾಣೇಂದ್ರಿಯದಲಿ 3
**********

No comments:

Post a Comment