Thursday 17 October 2019

ಹರಿಯೇ ಸ್ವತಂತ್ರ ಚತುರದಶ ಭುವನಕೆ ಪರಮೇಷ್ಠಿ ಶಿವಾದ್ಯರಾತಗೆ ankita vijaya vittala

ವಿಜಯದಾಸ
ಹರಿಯೆ ಸ್ವತಂತ್ರ ಚತುರದಶ ಭುವನಕೆ |
ಪರಮೇಷ್ಠಿ ಶಿವಾದ್ಯರಾತಗೆ ದಾಸರೆನ್ನು ಪ

ಹರಿಹರರ ಒಂದೇ ಸ್ಥಾನದಲಿ ಕಾಣುವೆನೆಂದು |
ಪರಮ ಭಕುತಿಯಿಂದ ಕ್ರೋಧಮುನಿಪ ||
ಧರಣಿಯೆಲ್ಲ ತಿರುಗಿ ಶುಕ್ಲವತೀ ತೀರಕೆ ಬರಲು |
ವಸಂತ ಕಾಲದಂತೆ ಪೊಳಿಯೇ1

ತಪಸಿ ತಪವನೆ ಮಾಡುತಿರಲು ಖರಾಟಖಳ |
ಉಪಹತಿ ಕೊಡುತಿಪ್ಪ ವರಬಲದಿ ||
ವಿಪುಳದೊಳಗಿವಗೆಲ್ಲಿ ಎದುರಾರು ಇಲ್ಲದಿರೆ |
ಸುಪರ್ಣಾದಿ ಮೊರೆ ಇಡಲು ಬೊಮ್ಮಗೆ2

ಪರಮೇಷ್ಠಿ ಹರಿಯ ಬಳಿಗೆ ಬಂದು |
ಖಳನ ಕೋಲಾಹಲವ ಬಿನ್ನೈಸಲು ||
ಪುಲಿತೊಗಲಾಂಬರನ ಸಹಿತ ಸರ್ವೋತ್ತಮನ |
ಒಲಿಮೆಯಿಂದ ಬಂದು ಸುಳಿದರಾಗಂದು 3

ದಾನವನ ಕೊಂದು ದೇವತೆಗಳ ಸುಖಬಡಿಸಿ |
e್ಞÁನಕ್ರೋಢಮುನಿ ಮನಕೆ ಪೊಳೆದು ||
ಆನಂದದಿಂದಲಿ ನಿಂದು ಮೆರೆದ ಲೀಲೆ |
ಏನೆಂಬೆನಯ್ಯ ಹರಿಹರ ವಿಚಿತ್ರಾ 4

ಪ್ರವಿಷ್ಠ ಕೇ|
ಶವನು ತಾನೆ ಕಾಣೊ ಸ್ವಾತಂತ್ರನು ||
ಇವರು ಶಂಕರನಾರಾಯಣನೆಂಬೊ ಪೆಸರಿನಲಿ |
ಅವನಿಯೊಳು ಪ್ರಖ್ಯಾತರಾಗಿ ನಿಂದಿಹರೋ 5

ಎರಡು ಮೂರುತಿಗಳು ನೋಳ್ಪರಿಗೆ |
ಶ್ರೀ ನಾರಾಯಣಗೆ ಈಶ ಸಮನೇ 6

ಚಕ್ರ ಶಂಖ ಗದೆ ಪದುಮ ಹರಿಗೆ ನೋಡು |
ಮುಕ್ಕಣ್ಣಗೆ ಡಮರುಗ ತ್ರಿಶೂಲವು ||
ಮುಖ್ಯ ದೇವತಿ ಹರಿ ಅವಾಂತರ ಶಿವನು |
ಶಕ್ರಾದ್ಯರೊಲಿದು ಭೇದವನು ಪೇಳುವರು 7

ಸತ್ಯಂ ವದವೆಂಬ ಶ್ರುತಿವರದು ಪೇಳುತಿದೆ |
ಭೃತ್ಯ ರುದ್ರನು ಕಾಣೊ ಲಕುಮಿವರಗೆ ||
ಸತ್ಯದಲಿ ಸಿದ್ಧವಯ್ಯ ಎಂದು ತಿಳಿದು |
ಸ್ತೌತ್ಯ ಮಾಡಿದವಗೆ ವೈಕುಂಠ ಪದವಿ 8

ಕ್ರೋಢ ಪರ್ವತವಿದೆ ತೀರ್ಥ ಪಾವನಕರ |
ನಾಡೊಳಗೆ ಕ್ಷೇತ್ರ ಉತ್ತಮ ಮಾನವಾ ||
ಪಾಡಿದರೆ ವಿಜಯವಿಠ್ಠಲರೇಯ ಒಲಿದು |
ಕೂಡಾಡುವನು ದೃಢ ಭಕುತಿಯಿತ್ತು ಅನುದಿನಾ 9
***********

No comments:

Post a Comment