Saturday 25 December 2021

ಸಾಧನಕ್ಕೆ ಬಗೆಗಾಣೆನೆನ್ನಬಹುದೆ ಸಾದರದಿ ankita vijaya vittala SAADHANAKKE BAGEGAANENENNABAHUDE SAADARADI

Nagaratnamma Madam
vijayadasara aradhane celebrations in Mysuru Karteeka Masa 2018
 

ಸಾಧನಕ್ಕೆ ಬಗೆಗಾಣೆನೆನ್ನಬಹುದೆ
ಸಾದರದಿ ಗುರುಕರುಣ ತಾ ಪಡೆದ ಬಳಿಕ ಪ

ಕಂಡಕಂಡದ್ದೆಲ್ಲ ಕಮಲನಾಭನ ಮೂರ್ತಿ
ಉಂಡು ಉಟ್ಟದ್ದೆಲ್ಲ ವಿಷ್ಣು ಪೂಜೆ
ತಂಡತಂಡದ ವಾರ್ತೆ ವಾರಿಜಾಕ್ಷನ ಕೀರ್ತಿ
ಹಿಂಡು ಮಾತುಗಳೆಲ್ಲ ಹರಿಯ ನಾಮ 1

ವಾಗತ್ಯಪಡುವದೆ ವಿಧಿನಿಷೇಧಾರಚರಣೆ
ರೋಗಾನುಭವವೆಲ್ಲ ಉಗ್ರತಪವು
ಆಗದವರಾಡಿಕೊಂಬುವುದೆ ಆರ್ಶೀವಾದ
ಬೀಗುರುಪಚಾರವೇ ಭೂತದಯವು 2

ಮೈಮರೆತು ಮಲಗುವುದೆ ಧರಣಿ ನಮಸ್ಕಾರ
ಕೈಮೀರಿ ಹೋದದ್ದೆ ಕೃಷ್ಣಾರ್ಪಣ
ಮೈ ಮನೋವೃತ್ತಿಗಳೆ ವಿಷಯದಲಿ ವೈರಾಗ್ಯ
ಹೋಯ್ಯಾಲಿತನವೆಲ್ಲ ಹರಿಯ ವಿಹಾರ 3

ಹಿಡಿದ ಹಟ ಪೂರೈಸಲದು ಹರಿಯ ಸಂಕಲ್ಪ
ನಡೆದಾಡುವೋದೆಲ್ಲ ತೀರ್ಥಯಾತ್ರೆ
ಬಡತನವು ಬರಲದೇ ಭಗವದ್ಭಜನೆಯೋಗ
ಸಡಗರದಲ್ಲಿಪ್ಪುದೆ ಶ್ರೀಶನಾಜ್ಞಾ4

ಬುದ್ಧಿಸಾಲದೆ ಸುಮ್ಮನಿರುವುದೇ ಸಮ್ಮತವು
ಯದೃಚ್ಛಾಲಾಭವೇ ಸುಖವುಯೆನಲು
ಮಧ್ವಾಂತರ್ಗತ ಶ್ರೀ ವಿಜಯವಿಠ್ಠಲರೇಯ
ಹೃದ್ಗತಾರ್ಥವ ತಿಳಿದು ಒಪ್ಪಿಸಿಕೊಳನೆ 5
*********

No comments:

Post a Comment