Wednesday 16 October 2019

ಪರಮಾತ್ಮನೆ ನೀ ಸರಿ ಎಂದು ಕರಗದ ankita vijaya vittala

ವಿಜಯದಾಸ
ಪರಮಾತ್ಮನೆ ನೀ ಸರಿ ಎಂದು
ಕರಗದ ತಮದಲ್ಲಿ ಸೇರುವದೆ ಪ

ಜೀವ ಪರಮಾತ್ಮಗೆ ಭೇದವ
ಆವಾವ ಕಾಲಕ್ಕೆಯಿಲ್ಲವೆಂದು
ದೇವನ ಬಳಿಗೆ ನೀ ದೂರಾಗಿ
ಈ ವಸುಧೆಯೊಳು ಬದುಕುವರೆ 1

ಭೇದ ಜೀವಕೆ ಜೀವ ಎಂದಿ
ಗಾದರು ಇಲ್ಲವೆಂದು ನುಡಿದು
ಈ ದುರಾಚಾರದಲ್ಲಿ ನಡೆದು
ಮಾದಿಗನಂತೀಗ ಮಾರ್ಮಲಿದು2

ಜಡ ಪರಮಾತ್ಮ ಜಡ ಜಡಕೆ
ಜಡ ಜೀವಕೆ ಅಭೇದವೆಂದು
ಕಡುಗರ್ವದಿಂದಲಿ ಉಚ್ಚರಿಸಿ
ಮಡಿದು ನರಕಕ್ಕೆ ಉರುಳುವರೆ 3

ಅರಸಿನ ಬಳಿಗೆ ತೋಟಿಗ ಬಂದು
ಅರಸೆ ನೀನೆ ನಾನೆಂದಡೆ
ಉರವಣಿಸಿ ಕೊಲ್ಲಿಸಿ ಅವನ
ಶೆರಿಯ ಹಾಕದೆ ಮನ್ನಿಸುವನೆ 4

ದಾಸನ ದಾಸನು ಎಂದು
ಏಸು ಜನ್ಮಕೆ ಅಹುದೆಂದು
ದ್ವೇಷವು ತೊರೆದು ನೆನಿಸಿದರೆ
ಮೀಸಲಾಗಿಡುವ ವಿಜಯವಿಠ್ಠಲಾ 5
*********

No comments:

Post a Comment