Thursday 17 October 2019

ಮಾಡಿರೊ ಪಾಡಿರೊ ಲೋಕದೊಳಗೆ ಇದೆ ಬೀರುತಾ ankita vijaya vittala

ವಿಜಯದಾಸ
ಮಾಡಿರೊ ಪಾಡಿರೊ |
ಲೋಕದೊಳಗೆ ಇದೆ ಬೀರುತಾ ಸಾರುತಾ ಶ್ರೀಕಾಂತನ ವೊಲಿಸಿ ಪ

ದಶಮಿ ಏಕಾದಶಿ ದ್ವಾದಶಿ ದಿನತ್ರಯ |
ವಸುಧಿಯೊಳಗೆ ಮಹಾವ್ರತವೆಂದು ತಿಳಿದು ತ್ರಿ |
ದಶರೆಲ್ಲ ಕೈ ಕೊಂಡು ಮಾಡಿದರಂದು ರಂ |
ಜಿಸುವ ಸತ್ಕರ್ಮದಲ್ಲಿ |
ಬಿಸಜನಾಭನು ಲಕುಮಿಗೆ ಪೇಳಿದ ವ್ರತ |
ಹಸನಾಗಿ ಬೊಮ್ಮಗೆ ಅರಹು ಮಾಡಲು ದೇವ |
ಋಷಿಗೆ ಅಜನು ಪೇಳಲಾ ಮುನಿ ಬೀರಿದಾ
ದಶ ದಿಕ್ಕಿನೊಳಗೊಂದು 1

ಉದಯಕಾಲದೆಲೆದ್ದು ಸಂಸಾರಯಾತ್ರೆ ಎಂದು |
ಬದಿಯಲ್ಲಿದ್ದವರೆಲ್ಲ ಹರಿದಾಸ ದಾಸಿಯರು
ಹೃದಯದೊಳೀಪರಿ ಯೋಚಿಸಿ ಅಜ್ಞಾನ ಒಂದು ಕಡೆಗೆ ನೂಕಿ |
ಸದಮಲನಾಗಿ ಸ್ನಾನಾದಿಯ ಮಾಡಿ ಮ
ವಿಧಿ ಮುಗಿಸಿ ಶ್ರವಣ ಸಾರಾ ಹೃದಯರಿಂದಲಿ ಕೇಳಿ2

ಗೋವಿಂದನ ಚರಣಕೆ ಎತ್ತಿ ನಿರ್ಮಲ ಚಿತ್ತ |
ದಿಂದಲಿ ನಲಿವುತ ಹಿಗ್ಗಿ ಹಾರೈಸಿ ಆನಂದ ವಾರಿಧಿಯಲ್ಲಿ |
ಕುಂದದೆ ಸೂಸುತ ಗೆಳೆಯರ ಒಡಗೂಡಿ |
ತಂದು ಪುಷ್ಪಗಳಿಂದ ಮಂಟಪವ ವಿರಚಿಸಿ |
ಇಂದು ಸ್ಥಾಪಿಸಿ ತುತಿಸಿ 3

ಜ್ಞಾನಿಗಳೊಡನೆ ಕುಳ್ಳಿದ್ದು ಸುಜ್ಞಾನಿಗಳು ಶುದ್ಧ ಗಾ|
ಆನನ ಕೂಗುತ ಹಾಡುತ ಪಾಡುತ |
ಧ್ಯಾನವ ಗೈವುತಲಿ |
ಕಾಣಬಾರದಂತೆ ಪ್ರಜೆದೊಳಗೆ ತೋರಿ |
ಮಗುವಿನಂತೆ ಶ್ರೀನಿವಾಸನ ನೆನಸಿ 4

ಕೂಡಿ ಸೋಗು ವೈಯಾರದಿ |
ಕಾಲಲಿ ಗೆಜ್ಜೆಯ ಕಟ್ಟಿ |
ವಲಯಾಕಾರ |
ಮೇಲು ಚಪ್ಪಳೆಯಿಂದ |
ಬಾಲವೃದ್ಧರು ನಿಂದು ಕುಣಿಕುಣಿದಾಡಿ ಹಿ |
ಯಾಲಲಿ ಹರಿಯ ಸಂಕೀರ್ತನೆ ಕೀರ್ತಿಸಿ |
ಸೋಲದೆ ಘನಸ್ವರ ಸ್ವರದಿಂದಲಿ ಕೂಗಿ ವಿ |
ಶಾಲ ಭಕುತಿ ಒಲಿಸಿ 5

ಕಿರಿಬೆವರೊದಕ ಮೊಗದಿಂದಿಳಿಯಲು |
ಉರದಲಿ ಇದ್ದ ದೇವಗೆ ಅಭಿಷೇಚನೆ |
ಪರವಶವಾಗಿ ಮೈಮರೆದು ತಮ್ಮೊಳು ತಾವು |
ಕರದು ತರ್ಕೈಸುತಲಿ |
ಕಿರಿನಗೆಯಿಂದ ತೋಳುಗಳು ಅಲ್ಲಾಡಿಸಿ |
ಎರಡು ಭುಜವ ಚಪ್ಪರಿಸಿ ಏಕಾದಶಿ |
ದುರಿತ ರಾಸಿಗೆ ಪಾವಕನೆಂದು ಕೂಗಿ ಬೊಬ್ಬಿರಿದು ಬಿರಿದು ಸಾರಿ6

ಮಧ್ಯ ಮಧ್ಯದಲಿ ಮಂಗಳಾರುತಿ ಎತ್ತಿ |
ಮಧ್ವರಾಯರೆ ಮೂರು ಲೋಕಕೆ ಗುರುಗಳು |
ಸಿದ್ಧಾಂತ ಮುನಿ ಸಮ್ಮತಾ |
ಮಲ ಮೂತ್ರವನು ಕ್ರಿಮಿವ ಮನವು |
ಮೆದ್ದಾ ಸದ್ದೋಷಿ ಚಂಡಾಲ ವೀರ್ಯಕ್ಕೆ ಬಿದ್ದವ ನಿಜವೆನ್ನಿ 7

ಸಾಗರ ಮೊದಲಾದ ತೀರ್ಥಯಾತ್ರೆಯ ಫಲ |
ಭೂಗೋಳದೊಳಗುಳ್ಳ ದಾನ ಧರ್ಮದ ಫಲ |
ಆಗಮ ವೇದಾರ್ಥ ಓದಿ ಒಲಿಸಿದ ಫಲ |
ಯೋಗ ಮಾರ್ಗದ ಫಲವೊ |
ಜಾಗರ ಮಾಡಿದ ಮನುಜನ ಚರಣಕ್ಕೆ
ಬಾಗಿದವಗೆ ಇಂಥ ಫಲಪ್ರಾಪ್ತಿ ನಿರ್ದೋಷನಾಗುವ ವೈರಾಗ್ಯದಿ 8

ನಿತ್ಯಾ ನೈಮಿತ್ಯಕ ಮಾಡು ಮಾಡದಲಿರು |
ಪೋಗಾಡದೆ ಸದಾಚಾರ
ಸ್ಮøತಿಯಂತೆ ಅತ್ಯಂತ ಪಂಡಿತ ಪಾವನ್ನ |
ಉತ್ತಮರೊಡಗೂಡಿ ಮೃಷ್ಟಾನ್ನ ಭುಂಜಿಸಿ |
ಮೃತ್ಯು ಜೈಸಿ ಸದ್ಗತಿಗೆ ಸತ್ಪಥಮಾಡು |
ಸತ್ಯ ಮೂರುತಿ ನಮ್ಮ ವಿಜಯವಿಠ್ಠಲರೇಯ |
ನಿತ್ಯ ಬಿಡದೆ ಕಾವಾ 9
**********

No comments:

Post a Comment