Thursday 17 October 2019

ಕಾಂತಿಯಿಂದಿರುವ ಚಕ್ರ ಪದುಮ ಗದೆ ಪ್ರಥಮ ವಚನ ankita vijaya vittala

ಪ್ರಥಮ ವಚನ
ಕಾಂತಿಯಿಂದಿರುವ |
ಚಕ್ರ ಪದುಮ ಗದೆ |
ಅದರೊಳಗೆ ಬಿದ್ದಿರುವ
ಪರಮಪವಿತ್ರ ತ್ಯುಬುಗಳ ತೆಗೆದು |
ನೇತ್ರದೊಳಗೊತ್ತಿ | ಪರಿಮಳವಾದ ಗಂಧಗಳಿಂದ ಅಲಂಕೃತ |
ಸಿರಿದೇವಿ ವರದೊಡೆಯ ಮೇಲಿದ್ದು | ಕರಕಮಲದಲೊತ್ತುವ |
ದಿನವೆ ಪರಮ ಪುಣ್ಯೋದಯ

ಪಾದ |
ಸರಸೀರುಹ ಸರಸದಿಂ ಕೊಂಡಾಡಿ |
ನೆರಳಿ ಮರಳೀ ಸೌಖ್ಯದಾನಂದ |
ಶರಧಿಯೊಳು ಮುಣುಗಿ ಮುಣುಗಿ ಏಳುತ |
ಸೌಖ್ಯದಾನಂದ ಭಕ್ತಿಭಾವಗಳಿಂದ
ಕರುಣಾಳು ಕೃಷ್ಣ ತ್ವರಿತದಲಿ ತನ್ನ ಸೇವಕ ಜನರೊಳಗೆ |
ಸೇರಿಪ್ಪ ನಾ ಅರಿಯನು ನಾನೊಂದು ಸ್ತೋತ್ರ ಮಾಡುವದಕ್ಕೆ |
ವರವ್ರಜ ತರುಣಿಯರು ಏನು ಪುಣ್ಯವ ಮಾಡಿದರೊ |
ಸರುವದಾ ಹರಿಯನ್ನು ಕಾಣುವರು ಕಂಗಳಲಿ |
ಪರಿಹಾಸ್ಯ ನುಡಿಯಲ್ಲ | ಪರಮ ಪವಿತ್ರರಿಗೆ ದೊರೆ |
ಸಿರಿ ವಿಜಯವಿಠ್ಠಲನು | ಕರವಿಡಿದು ಎನ್ನಭೀಷ್ಟವನಿತ್ತು |
ಪರಿಪಾಲಿಸಬೇಕೆಂದು ಭಕ್ತ ಕೇಳಿದನು 1

ದ್ವಿತೀಯ ವಚನ
ಜಲಜನಾಭನÀ ರಥದ ದಡದ ಮೇಲೆ ನಿಲ್ಲಿಸಿ |
ಜಲದೊಳಗೆ ತಾ ಮುಳುಗಿ ಅಕ್ರೂರ ಕಣ್ಣು ತೆರೆಯೆ |
ಕಲುಷವರ್ಜಿತನಾದ ಕೃಷ್ಣ |
ಹಲಧರನ ಸಹ ಮೇಳ ಸಂಭ್ರಮದಿ | ಜಲದೊಳಗೆ ತಾ ಕಂಡು |
ನಾ ಪೇಳಿದ ಮಾತು ನಡಿಸಿ |
ಬಲವಂತದಲಿ ಬಿದ್ದ ಭವರೋಗ ವೈದ್ಯನ ಮಾತೆ |
ಲಲನಾಮಣಿಗೆ ಏನು ಹೇಳುವೆನು |
ಸುಲಭವಾಗಿ ಎಮಗೆ ಅಭೀಷ್ಟಪ್ರದವಿದು |
ಎಂದೆನುತ ತಂದೆ ನಂದಗೋಪನು |
ಯೋಚಿಸಿ ಮನದಲಿ ಚಿಂತೆಯಗೊಂಡು |
ಹನುಮೇಶ ವನಜಾಕ್ಷ | ಘನಮಹಿಮ ಎನ್ನ ಮನದ ಚಿಂತೆಯನು
ಹನನವ ಮಾಡಿ ಎನ್ನ ಕೈಪಿಡಿಯಲಾಗದೆ ಈಗ ಎನುತ |
ಮೇಲೇಳೆ ಸನಕ ಸನಂದನ ಸನತ್ಕುಮಾರ ಸಹ |
ವನಜ ಸಂಭವ ಜನಕ ವೈಕುಂಠಪತಿ ಕೃಷ್ಣ |
ಕನಕ ರಥದ ಮೇಲೆ ನಿಂತಿದ್ದು ತಾ ಕಂಡು |
ಕರವೆರಡು ಜೋಡಿಸಿ | ಭರದಿ ಭಕ್ತಿಯಗೊಂಡು |
ನರಜನ್ಮ ಹುಳು ನಿನ್ನ ಮಹಿಮೆಗಳ ಅರಿಯದೆ |
ಜಲದೊಳಗೆ ನೀ ಬಿದ್ದಿ ಎನುತಲೀ ಯೋಚಿಸಿದೆ |
ಚರಣದ ಮಹಿಮೆಗಳ |
ಮರಣದಲಿ ಅಜಮಿಳಗೆ
ದಯಮಾಡ ಬೇಕೈ |
ಅರ್ಭಕ ಪ್ರಹ್ಲಾದ ನಿಜಮುನಿ ಶುಕಾಚಾರ್ಯರಂತೆ |
ಅಪ್ರಾಕೃತ ಅಕಲಂಕ ಚರಿತ ಅಮರೇಂದ್ರ ವಂದಿತ |
ಪಾಲಾ ವಿಜಯನ ರಥವನ್ನು ಸಾರಥಿಯಾಗಿ
ದಯಾಸಮುದ್ರ ವಿಜಯವಿಠ್ಠಲನೇ2

ತೃತೀಯ ವಚನ
ಅರವಿಂದನಾಭ ಕೃಷ್ಣ ಅಖಿಲಜನ ಪರಿಪಾಲ | ಕೃಪಾ ಸಮುದ್ರ |
ಕಳತ್ರ |
ಪರಿಪಾಲಿಸಬೇಕೆನ್ನ | ಪಾವನ ಚರಿತ್ರ |
ಸುರಪತಿಗೆ ಅಸುರರ ಬಲನೀಗಿ ಆ | ವಿರಂಚಿ ಬಳಿಗೆ |
ಶರಣೆಂದು ವರವೊಂದು ಕೇಳಿದೆ ವೈಕುಂಠಪತಿ ಕೃಷ್ಣ |
ಕಂಟಕ ಕಂಸಾದಿಗಳ ಗೆಲಿದು |
ಪಾದ |
ಸರಸಿಜದೊಳು ಚಿತ್ತವಿರುವಂದದಲಿ |
ಪರಮ ದಯಾಕರ ನಿನ್ನ ಮಹಾ ಮಹಿಮೆಗಳ |
ಗರ್ವಿಷ್ಠನಾಗಿ ಮಲಗಿದವನಲ್ಲಿ |
ಕೇಳ್ವ | ತ್ವರಿತದಲಿ ದಯಮಾಡಿ |
ಭರದಿ ಪಾಲಿಸಬೇಕೆನ್ನ | ಭಕ್ತಜನ ವತ್ಸಲನೆ ಎನಲಾ ಮಾತಿಗೆ |
ಇನ ಇಂದಿರೆ ಅರಸ |
ಹನುಮೇಶ ಕನಕಮಯವಾದ ಪೀತಾಂಬರ | ಜನಿವಾರ |
ಅನೇಕ ಅತರಿಗಳ ಗೆಲಿವ ಕನಕಮಯ | ಕಿರೀಟ ಚತುರ್ಭುಜ |
ಕಟಕ ರತ್ನಮಯದುಂ | ಗುರ
ವಾಹನ ಚಕ್ರವರ್ತಿಗೆ ತನ್ನ ನಿಜರೂಪವ3

ಚತುರ್ಥ ವಚನ
ಆನಂದತೀರ್ಥ ಮುನಿವಂದ್ಯ | e್ಞÁನಿಗಳ ವಲ್ಲಭ |
ದೀನಜನ ಮಂದಾರ ನಾ | ನಿನ್ನ ಮೊರೆಹೊಕ್ಕು ಧೇನಿಸಲರಿಯೆ |
ಆನೆಯನು ಆದರದಿ ಕಾಯ್ದ ಶ್ರೀನಿವಾಸ |
ಸಾನುರಾಗದಿ ಪ್ರಹ್ಲಾದಗೊಲಿದ ಶ್ರೀನಿಧಿ ನರಸಿಂಹ |
ಅನಾದಿ ಕಾಲದಿ ತಂದೆ ಬಂಧು ಬಳಗವು ಎಂದೆ |
ಮಾನಿನಿ ದ್ರೌಪದಿ ಮೊರೆ ಇಟ್ಟಾಗ ಧ್ವನಿ ಕೇಳಿ |
ಮಣಿ ಲಕುಮಿಗ್ಹೇಳದೆ |
ಆನಂದಮಯನು ಅಕ್ಷಯವಿತ್ತು ಆಗ ಪರಿಪಾಲಿಸಿದಿ ಅದರಂತೆ |
ಮಾನಹೀನನೆಂದು ನಿರಾಕರಿಸದೆ | ಧ್ಯಾನಕ್ಕೆ ಒಳಗಾಗಿ |
ಮೌನಿಜನರನು ಕಾವ ಕ್ಷೋಣೀಶ ಮಾಣಿಕ್ಯ ಮಕುಟ ಕುಂಡಲಧರ |
ಸಿರಿ ತುಳಸಿ |
ಪರಿಮಳ ಸಿರಿಗಂಧ ಉದರದಲಿ ಬೆಳಗುವ |
ಉಪೇಂದ್ರ ನಾಮ ಕೃಷ್ಣ ಉರಗೇಶಶಯನಾ |
ನಿನ್ನ ದಾಸರದಾಸನೆಂದೆನುತ | ಕಾಣಸಿ ನಿನ್ನ ನಿಜರೂಪ |
ನಿನ್ನ ಸ್ತೋತ್ರ ಮಾಡುವ ಭಕ್ತಗಣದೊಳಗೆ ನಿಲ್ಲಿಸೊ |
ನಿನ್ನ ಮತ್ತೊಂದು ಪದಾರ್ಥ ಕೇಳುವವನಲ್ಲ |
ತೀರ್ಥ ತೀರ್ಥಗಳಲ್ಲಿ ಮುಳುಗಿ ಬಂದವನಲ್ಲ |
ಸಾರ್ಥಕವಾದಂಥ ಕೃತ್ಯ ಮಾಡುವನಲ್ಲ |
ಸಾಧುಜನಸಂಗದಲಿ ಸೇರಿ ಪಾಡಿದವನಲ್ಲ |
ಈ ನುಡಿ ಸತ್ಯವೇ ಲೇಸು ಪುಸಿಯಲ್ಲ | ಮಲ್ಲಮಲ್ಲರ ಗೆಲಿದ
ಮಾಧವನು ನೀನಲ್ಲದೆ ಇನ್ನೊಂದು ದೈವವಿಲ್ಲದ ಮಧ್ವ
ಮುನಿ ಹೃದಯಾಟ್ಟ ಪೀಠದೊಳು ವಾಸ ಮಾಡುವ ದೊರೆ
ಉದ್ಧರಿಸಬೇಕೆನ್ನ ವಿಜಯವಿಠ್ಠಲನೆ 4

ಪಂಚಮ ವಚನ
ಕರಿಯಬೇಕೆನ್ನ ಹಿರಿಯರೂ |
ಇಡಲಾಗದ ಮನಸು ಸರ್ವದಾ ನಿನ್ನ |
ಚರಣಾರವಿಂದ ದ್ವಂದ್ವದಲಿ | ಭರದಿಂದ ಮುದ್ರೆಯನಿಟ್ಟ |
ತುತಿ ಮಾಡುವೆ ನಿನ್ನ |
ಮುಚಕುಂದ ವರದ ನಿತ್ಯಾನಂದ ವಿಗ್ರಹ |
ಸರಸಿರುಹಾಕ್ಷ ಸಜ್ಜನ ಪರಿಪಾಲಾ |
ಪೂಜ್ಯ ಅವಗುಣ ವರ್ಜ ಅಕಳಂತ |
ಮಹಾನುಭಾವ ಮಧ್ವೇಶ |
ಈ ನುಡಿಯು ಪುಸಿಯಲ್ಲ |
ಕರ ಪಿಡಿದು ಕಾಯ್ವರನ ಕಾಣೆ
ಚರಣಾವಿಂದವನು ಭಜಿಪ ವೀಣೆ | ಈ
ಕ್ಷೋಣಿಯೊಳಗೆನ್ನ ನರಜನ್ಮವು ಬಾರದೆ ಪರಿಪಾಲಿಸಬೇಕೆನ್ನ |
ಪರಮ ಪವಿತ್ರ ಪಂಕೇರುಹನೇತ್ರ ಸಂಕಟಗಳ ಕಳೆದು |
ಸೌಖ್ಯಪದ ವೈಕುಂಠದೊಳಗೆನ್ನ ನಿಲ್ಲಿಸೊ |
ಭರದಿಂದ ನಿನ್ನ ನಾಮದ ಭಂಡಾರ ಕದ್ದ ಕಳ್ಳನೆನೆಸಿ |
ಅರವಿಂದನಾಭ ನಿನ್ನ ಅಮರನೇ ವೈಕುಂಠ |
ಕಾರಾಗೃಹದೊಳಗೆ ವಾಸ ಮಾಡಿಸು ದೇವ ಕೋಟಿ |
ವರುಷಕೆ ಇದುವೆ ಎನಗೆ ಹರುಷ ಆನಂದಮಯ |
ಇನ್ನೋರ್ವನಿಲ್ಲ ವಿಜಯವಿಠ್ಠಲನೇ 5
********

No comments:

Post a Comment