Thursday 17 October 2019

ಅನಂತ ಗಿರಿ ಯಾತ್ರೆ ಮಾಡಿ ಜನರು ankita vijaya vittala

ಅನಂತಗಿರಿ ಯಾತ್ರೆ ಮಾಡಿ ಜನರು
ಅನಂತ ಜನುಮದ ಪಾಪ ಸಂಹರವು ಪ

ಇಲ್ಲಿ ಕುರುರಾಯ ಜನ್ಮಾಂತರದು ಪಾಪ
ನಿಲ್ಲದೆ ಮಾಡಿದಾ ನಡತಿಯಿಂದಾ
ಎಲ್ಲ ಕಾಲದಲಿ ದರಿದ್ರನಾಗಿದ್ದು ಶ್ರೀ
ವಲ್ಲಭನ ಒಲಿಸಿ ಮುದಂಬರೀಷ ನೃಪನಾದಾ 1

ನೃಪತಿ ದುರ್ಮತಿಯಲಿ
ಮಂಡಲದೊಳಗಿರಲು ಸರ್ಪ ಕಚ್ಚಿ
ಕಂಡು ಗೃಧ್ರವು ಅವನ ಉಂಗುಷ್ಟ ಭವನಾಶಿ
ಕುಂಡದಲಿ ಬಿಸುಡೆ ದಶರಥ ಭೂಪತಿಯಾದಾ2

ಹೇಳಲಳವೆ ಇನ್ನು ಈ ಕ್ಷೇತ್ರದÀ ಮಹಿಮೆ
ಕೇಳಿದಾಕ್ಷಣ ಮುಕ್ತಿ ಸಿದ್ಧವಕ್ಕೂ
ಶ್ರೀಲೋಲ ನರಸಿಂಹ ವಿಜಯವಿಠ್ಠಲರೇಯೇನ
ವಾಲಗವ ಕೈಕೊಂಡ ಮನುಜಂಗೆ ಬಲು ಸಾಧ್ಯ 3
**********

No comments:

Post a Comment