Thursday 17 October 2019

ಹೇಳುವೆನು ಕೇಳಿ ಕರ್ಣಾಮೃತವ ಆಲೋಚನೆ ಸಲ್ಲ ತಿಳಿದ ಜ್ಞಾನರಿಗೆ ankita vijaya vittala

ವಿಜಯದಾಸ
ಹೇಳುವೆನು ಕೇಳಿ ಕರ್ಣಾಮೃತವ
ಆಲೋಚನೆ ಸಲ್ಲ ತಿಳಿದ ಜ್ಞಾನರಿಗೆ ಪ

ಲಕ್ಷಣ ಛಂದಸ್ಸು ಅಡಿಪ್ರಾಸ ಆದಿ ಅಂತಿ
ಲಕ್ಷಕ್ಕೊಂದಾದರು ಮೊದಲೇ ಇಲ್ಲಾ
ಅಕ್ಷಿ ಇಲ್ಲದವನು ಕೋಲು ಸಂಪಾದಿಸುವ
ಅಕ್ಷಿ ಉಂಟಾದವಗೆ ಅದರಿಂದ ಫಲವೇನು 1

e್ಞÁನ ಕರ್ಮರ ಲಂಬನ ಮಾಡಿ ತಿಳಿದಂಥ
ಮಾನವನು ನಾನಲ್ಲ ಎಂದೆಂದಿಗೂ
e್ಞÁನಿಗಳ ಮನೆಯ ತೊಂಡರ ಪಾದರಕ್ಷೆಯಾ
ಪಾಣಿಯಲ್ಲಿ ಪಿಡಿದವನ ನಖಧೂಳಿ ದಯದಿಂದ 2

ರಾಗತಾಳ ಭೇದ ಜತೆ ಜಾಣತನದಿಂದ
ವಾಗರ ನಿಮಿತ್ಯ ಪೇಳಲಿಲ್ಲಾ
ಹ್ಯಾಗಾದರೇನು ನಾರಾಯಣಚ್ಯುತನೆಂದು
ಕೂಗಿ ಕಾಲವ ಕಳದೆ ಜನುಮ ಸಾಧನಕೆ 3

ಬೆಲ್ಲ ಕರದಲಿ ಪಿಡಿದು ಆವನಾದರೇನು
ಎಲ್ಲಿ ತಂದರೆ ಅದು ಸೀ ಎಲ್ಲವೇ
ಬಲ್ಲನವ ನರಿಯನಿವನೆಂದು ಆಡದಿರಿ
ಪುಲ್ಲನಾಭನ ಸ್ಮರಣೆ ಒಂದು ಮುಕ್ತಾರ್ಥ 4

ಹರಿದೈವವೆಂದು ತಾ ಉತ್ತರೋತ್ತರ ತಿಳಿದು
ಗುರುಮಧ್ವಮತದಲ್ಲಿ ಲೋಲಾಡಲು
ಸಿರಿಯ ಅರಸ ವಿಜಯವಿಠ್ಠಲ ಬಂದು ವೊಲಿವನು
ಗುರು ಪುರಂದರನ ದಯೆ ಎನ್ನ ಮೇಲಿರಲಾಗಿ5
*********

No comments:

Post a Comment