Wednesday 16 October 2019

ವಾಣಿ ನೀ ತೋರೆ ವಾರಿಜನಾಭನ ಮಹಾಲಾಭನ್ನ ankita vijaya vittala

ವಿಜಯದಾಸ
ವಾಣೀ ನೀ ತೋರೆ ವಾರಿಜನಾಭನ, ಮಹಾಲಾಭನ್ನ
ನಿತ್ಯ ಸುಲಭನ ಭಾನು ಸನ್ನಿಭನ ಪ

ಕ್ಷೋಣೀಯೊಳಗಣ ಪ್ರಾಣಶ್ರೇಷ್ಠ - ಜಗ
ತ್ರಾಣನ ತೋರಿಸೆ ಭಾನು ಸನ್ನಿಭಳೆ ಅ. ಪ.

ಚೈತನ್ಯರಾಣಿ ಪುಸ್ತಕಪಾಣಿ-ಸುನೀಲವೇಣಿ
ಅತ್ಯಂತ ಮಹಿಮೆ ಗುಣಗುಣಶ್ರೇಣಿ ತ್ರಿಲೋಕ ಜನನಿ
ಸತ್ಯವ ತೋರುತ ನಿತ್ಯೋಪಾದಿಲಿ
ಸತ್ಯ ಸಂಕಲ್ಪಳೆ ನಿತ್ಯದಿ ಪೂಜಿಪೆ
ತ್ವತ್ಪಾದಾಂಬುಜವಿತ್ತು ನೀ ಸಲಹೆ1

ನಾಲಿಗೆಯಲ್ಲಿ ಬಂದು ನಿಂದು ದಯದಿಂದ ಇಂದು
ಶ್ರೀಲೋಲ ಹರಿಯೆ ದೈವವೆಂದು ಕೊಂಡಾಡೆ ಮುಂದು
ಕಾಲ ಹಿಂಗಿಸಿ ವಿ-
ಶಾಲ ಮತಿಯ ಕೊಟ್ಟು ಆಳುಗಳೊಡನೆ ಸು-
ಶೀಲ ಜ್ಞಾನವಿತ್ತು ಆಲಸ್ಯಮಾಡದೆ
ಶೀಲ ಮುಕ್ತಿಗನುಕೂಲವಾಗುವುದಕ್ಕೆ2

ಜನ್ಮ ಬಂದಿದೆ ಕಡೆಗೆ ಮಾಡು ದಯದಿಂದ ನೋಡು
ಘನ ಕೀರ್ತಿವಂತೆ ಅಭಯವ ನೀಡು, ನಿನಗಲ್ಲ ಈಡು
ಕನಸಿಲಿ ಮನಸಿಲಿ ಮನಸಿಜನೈಯನ
ನೆನೆಸುವ ಸೌಭಾಗ್ಯವನುದಿನ ಕೊಟ್ಟು
ಘನಪ್ರೇರಣೆಯಿಂದ ವಿಜಯವಿಠ್ಠಲನಂಘ್ರಿ
ವನಜವ ತೋರಿ ಸನ್ಮೋದವನೀಯೆ3
*********

No comments:

Post a Comment