Thursday 17 October 2019

ಬಿಡು ಬಿಡು ಇನ್ನು ಸೋಗಾಚಾರ ಒಡಿಯ ಬಲ್ಲನು ankita vijaya vittala

ವಿಜಯದಾಸ
ಬಿಡು ಬಿಡು ಇನ್ನು ಸೋಗಾಚಾರ |
ಒಡಿಯ ಬಲ್ಲನು ನಾನು ನಿನ್ನ ವಿಚಾರ ಪ

ತುಡಗತನ ಕಲಿತು ನೆರೆಹೊರೆಯವರ ಮನೆಯಲ್ಲಿ |
ಗಡಿಗೆ ತುಪ್ಪಾ ಬೆಣ್ಣೆ ಮೊಸರು | ಹಾಲು |
ಕುಡಿದು ಛೀ ಹಳಿ ಕದ್ದ ಕಳ್ಳನೆನೆಸಿಕೊಂಡ |
ಪಡಚುತನವಲ್ಲದೆ ಭಾರಕನು ನೀನಲ್ಲ 1

ಸೀರಯನು ಕದ್ದಂದು ಕಡವಿನ ಮರವನೇರಿ |
ಊರ ನಾರಿಯರ ಮಾನಕ್ಕೆ ಸೋತು ||
ಜಾರತನದವನಾಗಿ ತಿರಗಿ ಜಗದಾ ಭಂಡ |
ಪೋರರಿಗೆ ಪೋರನಲ್ಲದೆ ಹಿರಿಯನಲ್ಲ2

ಮುನಿಗಳೆಜ್ಞದಲ್ಲಿ ತಿರಿತಂದು ಗೊಲ್ಲತೆರ |
ತನುಜರ ಸಂಗಡಲಿದ್ದು ಎಂಜಲುಂಡು |
ಮನುಜದೇಹವ ತೆತ್ತು ಬಿನಗು ಲೀಲಾಕೃತಿ |
ದನಗಾವಿ ಎಲ್ಲದೆ ದೊರೆ ಮಗನು ನೀನಲ್ಲ 3

ಯಾತಕ್ಕೆ ಬಾರದ ಕುನಪೆಣ್ಣಿಗೆ ಮೆಚ್ಚಿ |
ಮಾತುಳನ ಕೊಂದು ಮುತ್ತೈಯಗೊಲಿದು |
ಭೀತಿಯಲಿ ಪರರಾಯನ ಮಗಳ ಕೊಂಡು ಬಂದ |
ಯಾತರ ಪೌರುಷದವನು ಲೋಕದೊಳಗೆಲ್ಲ 4

ತೊತ್ತಿನ ಮಗನಲ್ಲಿ ವುಂಡು ಬಿಗಿಸಿಕೊಂಡು |
ಮಿತ್ರಭೇದವನಿಕ್ಕಿ ಬಂಧುಗಳಿಗೆ |
ತೆತ್ತಿಗನು ನೀನಾಗಿ ವಾಜಿಗಳ ಪಿಡಿದು |
ಹತ್ಯವ ಮಾಡಿಸಿದೆ ಉತ್ತಮನು ನೀನಲ್ಲ 5

ಅಣ್ಣ ತಮ್ಮಂದಿರನು ಅಗಲಿಸಿ ವೈರದಲಿ |
ನುಣ್ಣಗೆ ಒಬ್ಬರೊಬ್ಬರ ಕೊಲ್ಲಿಸಿ |
ಇನ್ನೇನು ಉಸರುವೆನು ಕಟ್ಟಕಡಿಗೆ ಎಲ್ಲ |
ನಿನ್ನ ಕುಲವನು ಕೊಂದೆ ಇದು ಪುಶಿಯಲ್ಲ 6

ತಿಳಿಯಲಾರರು ನಿನ್ನ ಠಕ್ಕು ಠವಳಿಯ ಮಾಯ |
ಜಲಜ ಸಂಭವ ಶಿವ ಇಂದ್ರಾದ್ಯರು |
ಸುಲಭ ದೇವರದೇವ ವಿಜಯವಿಠ್ಠಲರೇಯ |ವೊಲಿದ ದಾಸರಿಗೆ ಸಂತಾನ ಕುಲದೀಪ7
*********

No comments:

Post a Comment