Thursday 17 October 2019

ಶ್ರೀತುಳಸಿಯಾ ಸೇವಿಸಿ ankita vijaya vittala SRI TULASIYA SEVISI

 ರಾಗ ಭೌಳಿ
Audio by Mrs. Nandini Sripad

ಶ್ರೀ ವಿಜಯದಾಸಾರ್ಯ ವಿರಚಿತ ಶ್ರೀ ತುಳಸೀ ಮಹಿಮಾ ಸ್ತೋತ್ರ 
( ವಾರ್ಧಿಕ ಷಟ್ಪದಿ )


ಶ್ರೀ ತುಳಸಿಯ ಸೇವಿಸಿ ॥ ಪ ॥
ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ
ಗಾತರದ ಮಲವಳಿದು ಮಾತೆಯೆಂಬನಿತರೊಳು
ಪಾತಕ ಪರಿಹರಿಸಿ ಪುನೀತರನು ಮಾಡುವಳು ಯಾತಕನುಮಾನವಯ್ಯ ॥ ಅ.ಪ ॥

ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿ 
ಪದುಮನಾಭನು ತಾನು ಉದುಭವಿಸಿ ಬರಲಂದು 
ಉದುರಿದುವು ಕಣ್ಣಿಂದ ಉದಕ ಉತ್ಸಹದಿಂದ
ಲದೆ ತುಳಸಿ ನಾಮನಾಗೆ ॥
ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು 
ಒದಗಿ ಸುಜನರು ತಮ್ಮ ಸದನದಲಿ ನಿತ್ಯ ಸ -
ತ್ಪದವಿಗೆ ಸಿದ್ಧವೆಂದು ಮುದದಿಂದ ತಿಳಿದು 
ವೃಂದಾವನ ರಚಿಸಿದರೈಯ ॥ 1 ॥

ಮೂಲದಲಿ ಸರ್ವ ತೀರ್ಥಗಳುಂಟು ತನ್ಮಧ್ಯೆ 
ಕಾಲ ಮೀರದೆ ಸರ್ವ ನದನದಿಗಳಮರಗಣ 
ಮೇಲೆ ದಳ ಒಂದರಲಿ ಒಂದೊಂದು ಮೂರುತಿಯು ವಾಲಯವಾಗಿಪ್ಪುದು ॥
ಮೂರ್ಲೋಕಗಳ ಧರ್ಮ ವ್ರತಕೆ ಮಿಗಿಲೆನಿಸುವುದು 
ನೀಲಮೇಘಶ್ಯಾಮಗರ್ಪಿಸಿದ ತುಳಸಿ ನಿ - 
ರ್ಮಾಲ್ಯವನು ಸತತ ಕರ್ಣದಲಿ ಧರಿಸಿದ ಮನುಜ ಕಾಲನಾಳಿಗೆ ಶೂಲನೊ ॥ 2 ॥

ಉದಯದೊಳಗೆದ್ದು ನೀರೆರೆದು ಮಜ್ಜನಗೈದು 
ತುದಿ ಬೆರಳಿನಿಂದ ಮೃತ್ತಿಕೆಯ ಫಣೆಯೊಳಗಿಟ್ಟು 
ಮುದದಿಂದಲೊಂದು ಪ್ರದಕ್ಷಿಣಿ ನಮಸ್ಕಾರ
ತದನಂತರದಲಿ ಭಜನೆ ॥
ವದನದೊಳು ಗೈಯೆ ಧರೆಯೊಳಗಿದ್ದ ಸರ್ವನದ - 
ನದಿಗಳಿಗೆ ನೂರ್ಮಡಿ ಯಾತ್ರೆ ಮಾಡಿದ ಫಲ 
ಒದಗುವುದು ಹಿಂದಣಾನಂತ ಜನ್ಮಗಳಘವ 
ತುದಿ ಮೊದಲು ದಹಿಪುದಯ್ಯ॥ 3 ॥

ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ 
ಆವವನ ಮನೆಯಲ್ಲಿ ಹರಿದಾಸರಾ ಕೂಟ 
ಆವವನ ಭುಜದಲ್ಲಿ ತಪ್ತಮುದ್ರಾಂಕಿತವು
ಪಾವಮಾನಿಯ ಮತದೊಳು ॥
ಆವವನು ಕಾಲತ್ರಯವ ಕಳೆವ ನಾವಲ್ಲಿ 
ಶ್ರೀ ವಾಸುದೇವ ಮುನಿದೇವಾದಿ ಗಣ ಸಹಿತ 
ಕಾವುತ್ತಲಿಪ್ಪ ಬಲಿಗೊಲಿದಂತೆ ತೊಲಗದಲೆ
ಭಾವಿಸಿರಿ ಭಾವಜ್ಞರು ॥ 4 ॥

ಕಂಡರೆ ದುರಿತಕ್ಕೆ ಕೆಂಡವನು ಬೀರುವುದು 
ಕೊಂಡಾಡಿದರೆ ಪುಣ್ಯವಪರಿಮಿತವುಂಟು ಮೈ - 
ದಿಂಡುಗೆಡಹಿದರೆ ಪುನರಪಿ ಜನನವಿಲ್ಲ ಸಲೆ 
ದಂಡ ವಿಟ್ಟವ ಮುಕ್ತನೊ ॥
ಚಂಡಾಲ ಕೇರಿಯೊಳು ಇರಲು ಹೀನಯವಲ್ಲ 
ಪಾಂಡುರಂಗ ಕ್ಷೇತ್ರ ಸರಿಮಿಗಿಲು ಎನಿಸುವುದು 
ತಂಡ ತಂಡದ ಕುಲಕೆ ಅವರವರ ಯೋಗ್ಯ ಫಲ ಕಂಡವರಿಗುಂಟೆ ಅಯ್ಯ ॥ 5 ॥

 ರಾಗ ಸಾರಮತಿ 

ಚಿತ್ತ ಶುದ್ದನು ಆಗಿ ಮುಂಝಾನೆಯೊಳು ತುಳಸಿ 
ಸ್ತೋತ್ರವನೆ ಮಾಡುತ್ತ ದಿವ್ಯವಾಗಿಹ ತ್ರಿದಳ 
ಪ್ರತ್ಯೇಕ ಪಾತ್ರೆಯಲಿ ತೆಗೆದು ಶೋಧಿಸಿ ತುಂಬಿ 
ವಿತ್ತಾದಿಯಲಿ ತಾರದೆ ॥
ಮತ್ತೆ ವಸ್ತ್ರದಿ ಹಸ್ತ ಶಿಲೆಯರ್ಕ ಏರಂಡ 
ಪತ್ರದಲಿ ತಾರದಲೆ ಭೂಮಿಯೊಳಗಿಡದೆ ಪೂ - 
ರ್ವೋತ್ತರಭಿಮುಖನಾಗಿ ಭಕ್ತಿಯಿಂ ತರಬೇಕು 
ಹೊತ್ತು ಮೀರಿಸಲಾಗದೊ ॥ 6 ॥

ಕವಿ ಮಂಗಳವಾರ ವೈಧೃತಿ ವ್ಯತೀಪಾತ
ರವಿ ಶಶಿಯ ಸಂಗಮ ಪರ್ವಣಿ ಪುಣ್ಯಕಾಲ
ದಿವಸ ದ್ವಾದಶಿ ಶ್ರೇಷ್ಠ ಉಪರಾಗ ಪಿತೃಶ್ರಾದ್ಧ
ಇವುಗಳಲಿ ತೆಗೆಯಾದಿರಿ ॥
ನವವಸನ ಪೊದ್ದು ಊಟವ ಮಾಡಿ ತಾಂಬೂಲ -
ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ -
ಸುವುದುಚಿತವಲ್ಲೆಂದು ತಿಳಿದು ಕೊಂಡಾಡುತಿರಿ 
ದಿವಸ ದಿವಸಗಳೊಳಯ್ಯ ॥ 7 ॥

ದಳವಿದ್ದರೇ ಒಳಿತು ಇಲ್ಲದಿದ್ದರೆ ಕಾಷ್ಟ
ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು
ತುಳಸಿ ನಿರ್ಮಾಲ್ಯವಾದರು ತ್ರಿವಾರದಲಿ
ತೊಳೆ ತೊಳೆದು ಏರಿಸಬಹುದು ॥
ತುಳಸಿ ಒಣಗಿದ್ದರೂ ಲೇಶದೋಷಗಳಿಲ್ಲ
ತುಳಸಿ ವಿರಹಿತವಾದ ಪೂಜೆಯದು ಸಲ್ಲದು
ತುಳಸಿ ತುಳಸೀ ಎಂದು ಸ್ಮರಣೆಯಾದರು ಮಾಡಿ ಜಲಜಾಕ್ಷನರ್ಚಿಸಿರೈಯ್ಯ ॥ 8 ॥

ತುಳಸಿ ಇಲ್ಲದ ಸದನ ಹೊಲೆಮಾದಿಗರ ಸದನ
ತುಳಸಿ ಇಲ್ಲದ ಬೀದಿ ನರಕಕೆಳಸುವ ಹಾದಿ
ತುಳಸಿ ಇಲ್ಲದ ತೀರ್ಥವೆಂದಿಗಿದ್ದರು ವ್ಯರ್ಥ 
ತುಳಸಿ ಬಲು ಪ್ರಾಧಾನ್ಯವೊ ॥
ತುಳಸಿ ಮಿಶ್ರಿತವಾದ ನೈವೇದ್ಯ ಗತಿಸಾದ್ಯ
ತುಳಸಿ ಧರಿಸಿದ ದೇಹ ಪರಮ ಸಾರ್ಥಕವಯ್ಯ
ತುಳಸಿದಳ ಹರಿಗೆ ಅರ್ಪಿಸಿದವನ ಪುಣ್ಯಕ್ಕೆ
ನೆಲೆಯ ನಾ ಕಾಣೆನಯ್ಯ ॥ 9 ॥

ಶಿವನ ಸತಿ ಪ್ರಹ್ಲಾದ ನಾರದ ವಿಭೀಷಣನು
ಧ್ರುವ ಅಂಬರೀಷ ಶಶಿಬಿಂದು ರುಕ್ಮಾಂಗದನು
ಇವರೆ ಮೊದಲಾದವರು ಭಕ್ತಿಪೂರ್ವಕದಲಿ
ವಿವರವನು ತಿಳಿದರ್ಚಿಸಿ ॥
ತವಕದಿಂ ತಂತಮ್ಮ ಘನ ಪದವನೈದಿದರು
ಭುವನದೊಳಗುಳ್ಳ ನಿರ್ಮಲ ಜನರು ಭಜಿಸಿದರು
ಜವಭಟರನೋಡಿಸೀ ಜಡದೇಹವನು ನೀಗಿ 
ಭವದೂರರಾದರೈಯ ॥ 10 ॥

 ರಾಗ ಭೌಳಿ 

ಉದಯಕಾಲದೊಳೆದ್ದು ಆವನಾದರು ತನ್ನ
ಹೃದಯ ನಿರ್ಮಲನಾಗಿ ಭಕುತಿಪೂರ್ವಕದಿಂದ
ಸದಮಲಾ ತುಳಸಿಯನು ಸ್ತೋತ್ರಮಾಡಿದ ಕ್ಷಣಕೆ 
ಮದಗರ್ವ ಪರಿಹಾರವೊ -॥
ಇದೆ ತುಳಸಿ ಸೇವಿಸಲು ಪೂರ್ವದಲಿ ಕಾವೇರಿ
ನದಿಯ ತೀರದಲೊಬ್ಬ ಭೂಸುರ ಪದಕೆ ಪೋದ
ಪದಪದೆಗೆ ಸಿರಿ ವಿಜಯವಿಠ್ಠಲಗೆ ಪ್ರಿಯಳಾದ 
ಮದನತೇಜಳ ಭಜಿಸಿರೈಯ ॥ 11 ॥
***

Sri tulasiya sevisi || pa ||

Sri tulasiyala seve pritiyindali made |
Gatarada malavalidu mateyembanitarolu |
Pataka pariharisi punitaranu maduvalu yatakanumanavayya || a. Pa ||

Sudhegadala mathisuva samayadali vaidyanagi |
Adumanabanu tanu udubavisi baralamdu uduridavu kanninda |
Udakavutsahadindalade tulasinamavage |
Tridasarondisuta modadim kondadidaru |
Odagi sujanaru tamma sadanadalli nitya sa |
Tpadavige siddhavendu mudadinda tilidu vrunavana rachisidaraiyya || 1 ||

Muladali sarvatirthagaluntu tanmadhai |
Kalamirade sarva nadanadigalamaragana |
Mele dala ondarali ondondu murutiyu valayavagippudu |
Murlokagala dharma vratake migilenisuvudu |
Nilamegasyamagarpisida tulasi nirmalyavanu
Satata karnadali dharisida manuja kalanalige sulano || 2 ||

Udayadolageddu nireredu majjanagaidu |
Tudi beralininda mruttikeya paniyolagittu |
Mudadimdalondu pradakshine namaskara tadanantaradalli Bajane |
Vadanadolu gaiya dhareyolagidda sarvanada |
Nadigalige nurmadiyatre madida Pala |
Odaguvudu hindanananta janmagalagava tudimodalu dahipudayya || 3 ||

Avavana maneyalli tulasi saligrama |
Avavana maneyalli haridasarakuta |
Avavana Bujadalli taptamudrankitavu pavamaniya matadolu |
Avavanu kalatrayava kalevanavalli |
Sri vasudeva munidevadi ganasahita |
Kavuttalippa baligolidamte tolagadale || 4 ||

Kandare duritakke kendavanu biruvudu |
Kondadidare punyavaparimitivuntu mai- |
Dindugedahidare punarapi jananavilla sale dandavittava muktano |
Chandala keriyolu iralu hinayavalla |
Pandurangakshetra sarimigilu enisuvudu |
Tandatandada kulake avaravara yogyapala kandavarigunte ayya || 5 ||

Chittasuddanu Agi munjaneyolu tulasi |
Stotravane madutta divyavagiha tridala |
Pratyeka patreyali tegedu sodhisi tumbi vittadiyali tarade |
Matte vastradi hasta Sileyarka eranda |
Patradali taradale bumiyolagidade pu |
Rvottarabimukanagi baktiyim tarabeku hottu mirisalagado || 6 ||

Kavimangalavara vaidhruti vyatipata |
Avisasiya sangama parvani punyakala |
Divasa dvadasi seshtha uparaga pitrusraddha ivugalali tegeyadiri |
Navavasana poddu utamadi tambula |
Saviyutta muttadiri yuvati sudrarim tarisuvudu |
Cittavallemdu tilidu kondadutiri divasa divasagalolayya || 7 ||

Dalaviddare olitu illadiddare kashtha |
Ele mruttikegalinda puje madalibahudu |
Tulasi nirmalyavadaru toletoledu Erisalibahudu |
Tulasi onagiddaru lesadoshagalilla |
Tulasi virahitavada pujeyadu salladu |
Tulasi tulasi endu smaraneyadaru madi jalajakshanarchisiraiyya || 8 ||

Tulasi illada sadana holemadigara sadana |
Tulasi illada bidi narakakelasuva hadi |
Tulasi illada tirthavendigiddaru vyartha tulasi balu pradhanyavo |
Tulasi misritavada naivedyagatisadhya |
Tulasi dharisida deha paramasarthakavayya |
Tulasi dala harige arpisidavana punyakke neleya na kanenayya || 9 ||
Sivanasati prahlada narada vibishananu |
Dhruva ambarisha sasibindu rukmangadanu |
Ivare modaladavaru baktipurvakadali vivaravanu tilidarcisi |
Tavakadim tantamma Ganapadavanaididaru |
Buvanadolagulla nirmala janaru Bajisidaru |
Javabataranodisi jadadehavanu nigi bavaduraradaraiyya || 10 ||

Udayakaladoleddu avanadaru tanna
Hrudayanirmalanagi baktipurvakadimda |
Sadamala tulasiyanu stotramadida kshanake madagarva pariharavo |
Ide tulasi sevisalu purvadali kaveri |
Nadiya tiradalobba busura padake poda |
Padapadege sirivijayavitthalage |
Priyalada madanatejala bajisiraiyya || 11 ||
***

ಶ್ರೀ ತುಳಸಿ ಮಹಿಮೆಯ ಹಾಡು

ರಾಗ: ಭೂಪಾಳಿ

ಶ್ರೀ ತುಳಸಿಯಾ ಸೇವಿಸಿ ||ಪ||c
ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ
ಗಾತರದ ಮಲವಳಿದು ಮಾತೆಯೆಂಬನಿತರೊಳು
ಪಾತಕ ಪರಿಹರಿಸಿ ಪುನೀತರನು ಮಾಡುವಳು
ಯಾತಕನುಮಾನವಯ್ಯಾ ||ಅ||ಪ||

ಸುಧೆಗಡಲ ಮಧಿಸುವ ಸಮಯದಲಿ ವೈದ್ಯನಾಗಿ
ಪದುಮನಾಭನು ತಾನು ಉದುಭವಿಸಿ ಬರಲ೦ದು
ಉದುರಿದವು ಕಣ್ಣಿಂದ ಉದಕ ಉತ್ಸಾಹದಿಂದಲದೆ
ತುಳಸಿನಾಮವಾಗೇ ||

ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು
ಒದಗಿ ಸುಜನರು ತಮ್ಮ ಸದನದಲಿ ನಿತ್ಯ ಸ
ತ್ಪದವಿಗೆ ಸಿದ್ದವೆಂದು ಮುದದಿಂದ ತಿಳಿದು
ವೃಂದಾವನ ರಚಿಸಿದರಯ್ಯಾ ||೧||

ರಾಗ: ಮಲಯಮಾರುತ

ಮೂಲದಲಿ ಸರ್ವತೀರ್ಥಗಳುಂಟು ತನ್ಮಧ್ಯೆ
ಕಾಲ ಮೀರದೆ ಸರ್ವನದನದಿಗಳಮರಗಣ
ಮೇಲೆ ದಳ ಒಂದರಲಿ ಒಂದೊಂದು ಮೂರುತಿಯು
ವಾಲಯವಾಗಿಪ್ಪುದು ||

ಮೂರ್ಲೋಕಗಳ ಧರ್ಮವ್ರತಕೆ ಮಿಗಿಲೆನಿಸುವುದು
ನೀಲೆಮೇಘಶ್ಯಾಮ ಗರ್ಪಿಸಿದ ತುಳಸಿ ನಿ
ರ್ಮಾಲ್ಯವನು ಸತತ ಕರ್ಣದಲಿ ಧರಿಸಿದ ಮನುಜ
ಕಾಲನಾಳಿಗೆ ಶೂಲನೋ ||೨||

ರಾಗ: ರಂಜಿನಿ

ಉದಯದೊಳಗೆದ್ದು ನೀರೆರೆದು ಮಜ್ಜನಗೈದು
ತುದಿಬೆರಳಿನಿಂದ ಮೃತ್ತಿಕೆ ಫಣೆಯೊಳಿಟ್ಟು
ಮುದದಿಂದಲೊಂದು ಪ್ರದಕ್ಷಿಣೆ ನಮಸ್ಕಾರ
ತದನಂತರದಲಿ ಭಜನೇ ||

ವದನದೊಳುಗೈಯೆ ಧರೆಯಮೇಲಿದ್ದ ಸರ್ವ
ನದನದಿಗಳಿಗೆ ನೂರ್ಮಡಿಯಾತ್ರೆ ಮಾಡಿದ ಫಲ
ಒದಗುವುದು ಹಿಂದಣಾನಂತ ಜನ್ಮಗಳಘವ
ತುದಿಮೊದಲು ದಹಿಪುದಯ್ಯಾ ||೩||

ರಾಗ: ಬಿಲಹರಿ

ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ
ಆವವನ ಮನೆಯಲ್ಲಿ ಹರಿದಾಸರಾ ಕೂಟ
ಆವವನ ಭುಜದಲ್ಲಿ ತಪ್ತ ಮುದ್ರಾಂಕಿತವು
ಪಾವಮಾನಿಯ ಮತದೊಳು

ಆವವನು ಕಾಲತ್ರಯ ಕಳೆವನಾವಲ್ಲಿ
ಶ್ರೀ ವಾಸುದೇವ ಮುನಿದೇವಾದಿ ಗಣಸಹಿತ
ಕಾವುತ್ತಲಿಪ್ಪ ಬಲಿಗೊಲಿದಂತೆ ತೊಲಗದೆಲೆ
ಭಾವಿಸಿರಿ ಭಾವಜ್ಜ್ನರೂ ||೪||

ರಾಗ: ಅಠ್ಠಾಣ:

ಕಂಡರೆ ದುರಿತಕ್ಕೆ ಕೆಂಡವನು ಬೀರುವುದು
ಕೊಂಡಾಡಿದರೆ ಪುಣ್ಯವಪರಿಮಿತ ಉಂಟು ಮೈ
ದಿಂಡುಗೆಡಹಿದರೆ ಪುನರಪಿಜನನವಿಲ್ಲ ಸಲೆ
ದಂಡವಿಟ್ಟವ ಮುಕ್ತನೋ ||

ಚಂಡಾಲಕೇರಿಯೊಳು ಇರಲು ಹೀನಯವಲ್ಲ
ಪಾಂಡುರಂಗಕ್ಷೇತ್ರ ಸರಿಮಿಗಿಲು ಎನಿಸುವುದು
ತಂಡತಂಡದ ಕುಲಕೆ ಅವರವರ ಯೋಗ್ಯಫಲ
ಕಂಡವರಿಗುಂಟೆ ಅಯ್ಯಾ ||೫||

ರಾಗ: ಮೋಹನ:

ಚಿತ್ತಶುದ್ದನ ಆಗಿ ಮುಂಜಾನೆಯೊಳು ತುಳಸಿ
ಸ್ತೋತ್ರವನು ಮಾಡುತ್ತ ದಿವ್ಯವಾಗಿಹ ತ್ರಿದಳ
ಪ್ರತ್ಯೇಕ ಪಾತ್ರೆಯಲಿ ತೆಗೆದು ಶೋಧಿಸಿ ತುಂಬಿ
ವಿತ್ತಾದಿಯಲಿತಾರದೇ ||

ಮತ್ತೆ ವಸ್ತ್ರದಿ ಹಸ್ತಶಿಲೆ ಆರ್ಕಏರಂಡ
ಪತ್ರದಲಿ ತಾರದೆಲೆ ಭೂಮಿಯೊಳಗಿಡದೆ ಪೂ
ರ್ವೋತ್ತರಭಿಮುಖನಾಗಿ ಭಕ್ತಿಯಿಂ ತರಬೇಕು
ಹೊತ್ತು ಮೀರಿಸಲಾಗದು ||೬||

ರಾಗ: ಷಣ್ಮುಖಪ್ರಿಯ:

ಕವಿ ಮಂಗಳವಾರ ವೈಧೃತಿ ವೃತೀಪಾತ
ರವಿಶಶಿಯ ಸಂಗಮ ಪರ್ವಣಿ ಪುಣ್ಯಕಾಲ
ದಿವಸ ದ್ವಾದಶಿ ಶ್ರೇಷ್ಟ ಉಪರಾಗ ಪಿತೃಶ್ರಾದ್ದ
ಇವುಗಳಲಿ ತೆಗೆಯದಿರೀ ||

ನವವಸನಪೊದ್ದು ಊಟವ ಮಾಡಿ ತಾಂಬೂಲ
ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ
ಸುವುದುಚಿತವಲ್ಲೆಂದು ತಿಳಿದು ಕೊಂಡಾಡುತಿರಿ
ದಿವಸ ದಿವಸಗೊಳೊಳಯ್ಯಾ ||೭||

ರಾಗ: ಸಿಂಧುಭೈರವಿ

ದಳವಿದ್ದರೇ ಒಳಿತು ಇಲ್ಲದಿದ್ದರೆ ಕಾಷ್ಟ
ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು
ತುಳಸಿ ನಿರ್ಮಾಲ್ಯವಾದರೂ ತ್ರಿವಾರದಲಿ ತೊಳೆದು
ತೊಳೆದೇರಿಸಲಿ ಬಹುದೂ ||

ತುಳಸಿ ಒಣಗಿದ್ದರೂ ಲೇಶದೋಶಗಳಲ್ಲ
ತುಳಸಿ ವಿರಹಿತ ಪೂಜೆಯದು ಸಲ್ಲದೋ
ತುಳಸೀ ತುಳಸೀ ಎಂದು ಸ್ಮರಣೆಯಾದರೂ ಮಾಡಿ
ಜಲಜಾಕ್ಷನರ್ಚಿಸಿರಯ್ಯಾ ||೮||

ರಾಗ: ಕಾನಡ

ತುಳಸಿ ಇಲ್ಲದ ಸದನ ಹೊಲೆಮಾದಿಗರ ಸದನ
ತುಳಸಿ ಇಲ್ಲದ ಬೀದಿ ನರಕಕೆಳೆಸುವ ಹಾದಿ
ತುಳಸಿ ಇಲ್ಲದ ತೀರ್ಥವೆಂದಿಗಿದ್ದರೂ ವ್ಯರ್ಥ
ತುಳಸಿ ಬಲು ಪ್ರಾಧಾನ್ಯವೋ ||

ತುಳಸಿ ಮಿಶ್ರಿತವಾದ ನೈವೇದ್ಯಗತಿ ಸಾಧ್ಯ
ತುಳಸಿ ಧರಿಸಿದ ದೇಹ ಪರಮ ಸಾರ್ಥಕವೈಯ್ಯ
ತುಳಸಿದಳ ಹರಿಗೆ ಅರ್ಪಿಸಿದವನ ಪುಣ್ಯಕ್ಕೆ
ನೆಲೆಯ ನಾಗಾಣೆನಯ್ಯಾ ||೯||

ರಾಗ: ಸುರುಟಿ

ಶಿವನ ಸತಿ ಪ್ರಹ್ಲಾದ ನಾರದ ವಿಭೀಷಣನು
ಧ್ರುವ ಅಂಬರೀಶ ಶಶಿಬಿಂದು ರುಕುಮಾಂಗದನು
ಇವರೆ ಮೊದಲಾದವರು ಭಕುತಿ ಪೂರ್ವಕದಿಂದ
ವಿವರವನು ತಿಳಿದರ್ಚಿಸೀ ||

ತವಕದಿಂ ತಂತಮ್ಮ ಘನಪದವನೈದಿದರು
ಭುವನದೊಳಗುಳ್ಳ ನಿರ್ಮಲಜನರು ಭಜಿಸಿದರು
ಜವಭಟರನೋಡಿಸೀ ಜಡದೇಹವನು ನೀಗಿ
ಭವ ದೂರರಾದರಯ್ಯಾ ||೧೦||

ರಾಗ: ಮಧ್ಯಮಾವತಿ:

ಉದಯಕಾಲದೊಳೆದ್ದು ಆವನಾದರೂ ತನ್ನ
ಹೃದಯನಿರ್ಮಲನಾಗಿ ಭಕುತಿಪೂರ್ವಕದಿಂದ
ಸದಮಲಾ ತುಳಸಿಯನು ಸ್ತೋತ್ರಮಾಡಿದ ಕ್ಷಣಕೆ
ಮದಗರ್ವ ಪರಿಹಾರವೋ ||

ಇದೆ ತುಳಸಿ ಸೇವಿಸಲು ಪೂರ್ವದಲಿ ಕಾವೇರಿ
ನದಿಯ ತೀರದಲ್ಲೊಬ್ಬ ಭೂಸುರ ಪದಕೆ ಪೋದ
ಪದೆಪದೆಗೆ ಸಿರಿ ವಿಜಯ ವಿಠ್ಠಲಗೆ ಪ್ರಿಯಳಾದ
ಮದನತೇಜಳ ಭಜಿಸಿರಯ್ಯಾ ||೧೧||
ಶ್ರೀ ತುಳಸಿಯಾ ಸೇವಿಸಿ ||ಪ||
******* 

No comments:

Post a Comment