Friday 27 December 2019

ಉದ್ಧಾರ ಮಾಡಯ್ಯ ಉಡುಪಿ ನಿಲಯ ankita gopalakrishna vittala

ಉದ್ಧಾರ ಮಾಡಯ್ಯ ಉಡುಪಿ ನಿಲಯ
ಹೃದ್ವನಜದಲಿ ನೆಲಸಿ ಅನುಗಾಲ ನಿನ ತೋರಿ ||pa||

ಬಂದೆ ಬಹುದೂರದಲಿ ನಿಂದೆ ತವಚರಣದಡಿ
ತಂದೆ ಮುದ್ದುಮೋಹನ ಗುರುಕರುಣದಿಂದ
ಕುಂದುಗಳನೆಣಿಸದೆಲೆ ಸಿಂಧುಶಯನನೆ
ಹೃದಯ ಮಂದಿರದಿ ಮನೆ ಮಾಡು ಸುಂದರಾತ್ಮನೇ ||1||

ಜನ್ಮಜನ್ಮಾಂತರದ ಅಜ್ಞಾನಗಳ ಕಳೆದು
ಕರ್ಮಸಾಸಿರ ಕಡಿದು ಕರುಣದಿಂದ
ರಮೆಯರಸನೆ ನಿನ್ನ ಅನುಗಾಲ ಸ್ಮರಿಪಂಥ
ಸನ್ಮಾರ್ಗವನೆ ತೋರೊ ಸರ್ವಲೋಕೇಶ ||2||

ಜಪತಪಗಳೊಂದರಿಯೆ ವ್ರತ ನೇಮಗಳ ಕಾಣೆ
ಉಪವಾಸದುಪಟಳವು ಗತಿ ತೋರದೆನಗೆ
ಗುಪಿತಮಾರ್ಗದಿ ನಿನ್ನ ನಾಮಾಮೃತವನುಣಿಸಿ
ಅಪಹಾಸಗೊಳಿಸದಲೆ ಆದರಿಸೊ ಜೀಯ ||3||

ಬೇಡಲೇನನು ನಿನ್ನ ಕಾಡಲೇತಕೆ ನಾನು
ನೀಡುವ ದಾತ ನೀ ಸರ್ವಜ್ಞನಿರಲು
ಮಾಡುವೆನು ಸಾಷ್ಟಾಂಗ ಬೇಡುವೆನು ಪದದಾಸ್ಯ
ನೋಡು ಕರುಣಾದೃಷ್ಟಿಯಿಂದೆನ್ನ ಕಡೆಗೆ ||4||

ಅಂತರಂಗದಲಿಪ್ಪ ಸರ್ವಾಂತರಾತ್ಮಕನೆ
ಚಿಂತನೆಗೆ ನೆಲೆತೋರು ಚಿನ್ಮಯಾತ್ಮಕನೆ
ಕಂತುಪಿತ ಗೋಪಾಲಕೃಷ್ಣವಿಠ್ಠಲನೆ ಸಿರಿ
ಕಾಂತ ಕಾಪಾಡು ಕಡು ಕರುಣಿ ಮಧ್ವೇಶ ||5||
****

ಉದ್ಧಾರ ಮಾಡಯ್ಯ ಉಡುಪಿ ನಿಲಯ
ಹೃದ್ವನಜದಲಿ ನೆಲಸಿ ಅನುಗಾಲ ನಿನ ತೋರಿ ಪ.

ಬಂದೆ ಬಹುದೂರದಲಿ ನಿಂದೆ ತವಚರಣದಡಿ
ತಂದೆ ಮುದ್ದುಮೋಹನ ಗುರುಕರುಣದಿಂದ
ಕುಂದುಗಳನೆಣಿಸದೆಲೆ ಸಿಂಧುಶಯನನೆ
ಹೃದಯ ಮಂದಿರದಿ ಮನೆ ಮಾಡು ಸುಂದರಾತ್ಮನೇ 1
ಜನ್ಮಜನ್ಮಾಂತರದ ಅe್ಞÁನಗಳ ಕಳೆದು
ಕರ್ಮಸಾಸಿರ ಕಡಿದು ಕರುಣದಿಂದ
ರಮೆಯರಸನೆ ನಿನ್ನ ಅನುಗಾಲ ಸ್ಮರಿಪಂಥ
ಸನ್ಮಾರ್ಗವನೆ ತೋರೊ ಸರ್ವಲೋಕೇಶ 2
ಜಪತಪಗಳೊಂದರಿಯೆ ವ್ರತ ನೇಮಗಳ ಕಾಣೆ
ಉಪವಾಸದುಪಟಳವು ಗತಿ ತೋರದೆನಗೆ
ಗುಪಿತಮಾರ್ಗದಿ ನಿನ್ನ ನಾಮಾಮೃತವನುಣಿಸಿ
ಅಪಹಾಸಗೊಳಿಸದಲೆ ಆದರಿಸೊ ಜೀಯ 3
ಬೇಡಲೇನನು ನಿನ್ನ ಕಾಡಲೇತಕೆ ನಾನು
ನೀಡುವ ದಾತ ನೀ ಸರ್ವಜ್ಞನಿರಲು
ಮಾಡುವೆನು ಸಾಷ್ಟಾಂಗ ಬೇಡುವೆನು ಪದದಾಸ್ಯ
ನೋಡು ಕರುಣಾದೃಷ್ಟಿಯಿಂದೆನ್ನ ಕಡೆಗೆ 4
ಅಂತರಂಗದಲಿಪ್ಪ ಸರ್ವಾಂತರಾತ್ಮಕನೆ
ಚಿಂತನೆಗೆ ನೆಲೆತೋರು ಚಿನ್ಮಯಾತ್ಮಕನೆ
ಕಂತುಪಿತ ಗೋಪಾಲಕೃಷ್ಣವಿಠ್ಠಲನೆ ಸಿರಿ
ಕಾಂತ ಕಾಪಾಡು ಕಡು ಕರುಣಿ ಮಧ್ವೇಶ 5
****

No comments:

Post a Comment