Friday 27 December 2019

ಏಳಮ್ಮ ಕೊಲ್ಲಾಪುರಧೀಶೆ ankita gopalkrishna vittala

ಏಳಮ್ಮ ಕೊಲ್ಲಾಪುರಧೀಶೆ | ಇನ್ನೂ
ಭಾಳ ಹೊತ್ತಾಯಿತು ವೈಕುಂಠವಾಸೆ ||pa||

ಸೃಷ್ಟಿಸೆಂದೆನುತ ಆಂಬ್ರಣಿರೂಪದಿಂದ್ಹರಿ
ಗಿಷ್ಟ ಸ್ತೋತ್ರವ ಮಾಡಿ ಎಬ್ಬಿಸಬೇಕು
ಅಷ್ಟ ಭುಜದ ಲಕುಮಿ ಪ್ರಕೃತಿರೂಪಿಣಿಯಾಗಿ
ಸೃಷ್ಟಿಕಾರ್ಯಕೆ ಅನುವಾಗಬೇಕು ||1||

ಸಕಲ ದೇವತೆಗಳ ಸೃಷ್ಟಿ ಮಾಡಲಿಬೇಕು
ಮುಕುತಿಯೋಗ್ಯರ ಸೇವೆ ಕೊಳ್ಳಬೇಕು
ಸಕಲರೂಪದಲಿ ಶ್ರೀಹರಿಯ ಸೇವಿಸಬೇಕು
ಅಕಳಂಕÉ ಆದಿದೇವತೆ ಎನಿಸಬೇಕು ||2||

ಶ್ರೀ ಪದ್ಮಭವೆ ವೆಂಕಟೇಶನ ಕೂಡುತ
ನೀ ಪರಿಪರಿ ಲೀಲೆಗೈಯ್ಯಬೇಕು
ಗೋಪಾಲಕೃಷ್ಣವಿಠ್ಠಲನ ವಕ್ಷಸ್ಥಳ
ವ್ಯಾಪಿಸಿ ಭಕ್ತರ ಕಾಪಾಡಬೇಕು ||3||
*******

No comments:

Post a Comment