Saturday, 16 November 2019

ಇಂದೀಗ ಹರಿದಿನವು ಏಕಾದಶಿಯೆಂದು ankita govinda

by ಗೋವಿಂದದಾಸ
ಲೋಕನೀತಿ


ಇಂದೀಗ ಹರಿದಿನವು ಏಕಾದಶಿಯೆಂದು ಶೋಭಿಪ ದಿನವು || ಪ ||

ಚಂದಾದಿ ವಿಷ್ಣುಸಾಯುಜ್ಯ ಹೊಂದುವುದಕ್ಕೆ ಅಂದವಾಗಿಹ ದಿನ ಸಂದೇಹವಿಲ್ಲವು || ಅ.ಪ ||

ಶರಧಿ ಮಥಿಸೆ ಸುಧೆಯೂ ಬರಲು ಕಂಡು ದುರುಳರೊಯ್ಯಲೂ ಹರಿಯೂ ಸರ್ವರಿಗುಪವಾಸವೆಂದು ತಾನ್ ಸೆಳೆದನು ವರವಿತ್ತ ಮಾಸಕ್ಕೆ ಎರಡೇಕಾದಶಿಯೆಂದೂ || 1 ||

ದಶಮಿ ಒಂದಶನಾಗೈದೂ ಏಕಾದಶಿ ದಿವಸುಪವಾಸವಿರ್ದು ಕುಸುಮನಾಭನ ಪೂಜೆಗೈದು ತೀರ್ಥವಗೊಂಡುನಿಶೆಯೊಳ್ ಜಾಗರವಿದ್ದು ಹರಿಕಥೆ ಕೇಳ್ವುದೂ || 2 ||

ವೀಳ್ಯ ಭೋಜನ ಪಾನವೂ ಈ ದಿನ ರತಿ ಕೇಳಿ ನಿದ್ರೆಯು ವಜ್ರ್ಯವೂ ಖೂಳನಾದರೆ ಯಮನಾಳೊಳ್ ಪಿಡಿದೊಯ್ದು ಗೋಳುಗುಡಿಸುವ ಹೇಳಲಸಾಧ್ಯವು || 3 ||

ಅಶನಕ್ಕೆ ಬಿಸಿ ಮಳಲು ತಿನಿಸೀ ವೀಳ್ಯ ವ್ಯಸನ ಪಾನಕೆ ಉಕ್ಕಂ ತರಸಿ ಬಾಯ್ಗೆರಸಿ ಮುಳ್ಳು ಹಾಸಿಗೆ ಮೇಲೆ ಮಲಗೆಂದು ಹೊ-ರಳಿಸಿ ಉರಿಕಂಭ ಧರಿಸೆಂಬರ್ ಸತಿ ಪುರುಷರಿಗೆ || 4 ||

ಧ್ರ್ರುವ ಹರಿಶ್ಚಂದ್ರ ಪ್ರಹ್ಲಾದ ತನ್ನ ಭುವನ ಕಟ್ಟಳೆಯೊಳ್ ರುಕ್ಮಾಂಗದಭವಹರ ವ್ರತಗೈದು ಹರಿಪಾದ ಸೇರ್ವರು ಭುವನದಿ ಸರ್ವರಿಗ್ಯೋಗ್ಯವೀ ವ್ರತವೂ || 5 ||

ದ್ವಾದಶಿ ವ್ರತವೆಂಬುದು ಶ್ರೇಷ್ಠವು ಬೇಗ ಸಾಧಿಸಿ ಪಾರಣೆಗೈವುದೂ ಮೇದಿನಿಯೊಳಂಬರೀಷ ನೀ ವ್ರತಗೈದೂ ಆದಿಮೂರುತಿ ಗೋವಿಂದನ ಪಾದ ಸೇರ್ದನೂ || 6 ||
***

ಇಂದೀಗ ಹರಿದಿನವು ಏಕಾದಶಿಯೆಂದುಶೋಭಿಪ ದಿನವು ಪ 

ಚಂದಾದಿ ವಿಷ್ಣುಸಾಯುಜ್ಯ ಹೊಂದುವುದಕ್ಕೆಅಂದವಾಗಿಹ ದಿನ ಸಂದೇಹವಿಲ್ಲವುಅ.ಪ

ಶರಧಿಮಥಿಸೆ ಸುಧೆಯೂ ಬರಲು ಕಂಡುದುರುಳರೊಯ್ಯಲೂ ಹರಿಯೂಸರ್ವರಿಗುಪವಾಸವೆಂದು ತಾನ್ ಸೆಳೆದನುವರವಿತ್ತ ಮಾಸಕ್ಕೆ ಎರಡೇಕಾದಶಿಯೆಂದೂ1

ದಶಮಿ ಒಂದಶನಾಗೈದೂ ಏಕಾದಶಿ ದಿವಸುಪವಾಸವಿರ್ದುಕುಸುಮನಾಭನ ಪೂಜೆಗೈದು ತೀರ್ಥವಗೊಂಡುನಿಶೆಯೊಳ್ ಜಾಗರವಿದ್ದು ಹರಿಕಥೆ ಕೇಳ್ವುದೂ2

ವೀಳ್ಯ ಭೋಜನ ಪಾನವೂ ಈ ದಿನರತಿಕೇಳಿನಿದ್ರೆಯು ವಜ್ರ್ಯವೂಖೂಳನಾದರೆ ಯಮನಾಳೊಳ್ ಪಿಡಿದೊಯ್ದುಗೋಳುಗುಡಿಸುವ ಹೇಳಲಸಾಧ್ಯವು3

ಅಶನಕ್ಕೆ ಬಿಸಿ ಮಳಲು ತಿನಿಸೀ ವೀಳ್ಯವ್ಯಸನ ಪಾನಕೆ ಉಕ್ಕಂ ತರಸಿ ಬಾಯ್ಗೆರಸಿಮುಳ್ಳು ಹಾಸಿಗೆ ಮೇಲೆ ಮಲಗೆಂದು ಹೊ-ರಳಿಸಿ ಉರಿಕಂಭ ಧರಿಸೆಂಬರ್ಸತಿಪುರುಷರಿಗೆ4

ಧ್ರ್ರುವ ಹರಿಶ್ಚಂದ್ರ ಪ್ರಹ್ಲಾದ ತನ್ನಭುವನಕಟ್ಟಳೆಯೊಳ್ ರುಕ್ಮಾಂಗದಭವಹರವ್ರತಗೈದು ಹರಿಪಾದ ಸೇರ್ವರುಭುವನದಿ ಸರ್ವರಿಗ್ಯೋಗ್ಯವೀ ವ್ರತವೂ5

ದ್ವಾದಶಿ ವ್ರತವೆಂಬುದು ಶ್ರೇಷ್ಠವು ಬೇಗಸಾಧಿಸಿ ಪಾರಣೆಗೈವುದೂಮೇದಿನಿಯೊಳಂಬರೀಷ ನೀ ವ್ರತಗೈದೂಆದಿಮೂರುತಿ ಗೋವಿಂದನ ಪಾದಸೇರ್ದನೂ6
***

No comments:

Post a Comment