Monday 11 November 2019

ತಲ್ಲಣಗೊಳ್ಳಬೇಡಾ ಶ್ರೀಹರಿ ಎಲ್ಲಿಹನೆನಬೇಡಾ ankita govinda

by ಗೋವಿಂದದಾಸ
ತಲ್ಲಣಗೊಳ್ಳಬೇಡಾ ಶ್ರೀಹರಿ ಎಲ್ಲಿಹನೆನಬೇಡಾ ಪ

ಕಲ್ಲ ಕಂಬದಿ ಮೈದೋರಲು ನರಹರಿಪ್ರಹ್ಲಾದನು ತಾಪತ್ರಯ ಬರೆದನೇ ಅ.ಪ

ತರಳಧ್ರುವನು ವನದೀ ಸ್ವಾಮಿಗೆಚರರನು ಕಳುಹಿದನೇಕರಿರಾಜನು ತಾನ್ ಕರೆಯಲು ಪೋದನೆಹರಿಗೆ ರುಕ್ಮಾಂಗದ ವೀಳ್ಯವಿತ್ತಿಹನೇ 1

ಅಂಬರೀಷನು ಹರಿಗೆ ದ್ರವ್ಯವತುಂಬಿಕಳುಹಿಸಿದನೇಅಂಬುಜನಾಭನು ಅಹಲ್ಯೆಗೆ ತಾತನೆಅಂಬರದಿಂ ಶೀರೆ ಇಳಿವುದೇ ದ್ರುಪದೆಗೆ 2

ಅಣು ಮಹತ್ತೆನಿಸಿರುವಾ ಶ್ರೀಹರಿಬಣಗುಜನರ ಮುರಿವಾಗಣನೆಯಿಲ್ಲದೆ ಪ್ರಾಣಿಗಳನು ಸಲಹುವತ್ರಿನಯನ ಸಖನುತಾ ಮಣಿವರ ಮರೆವನೆ 3

ಅನ್ಯ ಚಿಂತೆಗಳನ್ನು ಬಿಟ್ಟುಪನ್ನಗಶಯನನೂಘನ್ನ ಭಕ್ತಿಯೊಳುರೆ ಇನ್ನಾದರೂ ನೆನೆಮನ್ನಿಸದಿರೆ ಗೋವಿಂದನು ದಾಸರ 4
*******

No comments:

Post a Comment