Friday 27 December 2019

ನಂಬಿ ಕೆಟ್ಟವರಿಲ್ಲವೋ ರಾಯರ ಪಾದಾ ankita gurujagannatha vittala

ನಂಬಿ ಕೆಟ್ಟವರಿಲ್ಲವೋ ರಾಯರ ಪಾದಾ
ನಂಬದೆ ಕೆಡುವುರುಂಟೋ ||pa||

ನಂಬಿದ ಜನರಿಗೆ – ಬೆಂಬಲ ತಾನಾಗಿ
ಹಂಬಲಿಸಿದ ಫಲ – ತುಂಬಿ ಕೊಡುವರನ್ನ ||a.pa||

ಜಲಧರ ದ್ವಿಜವರಗೆ ತಾನೇ ಒಲಿದು
ಸುಲಭದಿ ಮುಕುತಿಯನಿತ್ತ
ಚಲುವ ಸುತನ ಪಡೆದಲಲನೆಗೆ ತ್ವರದಿಂದ
ಪುಲಿನ ಗರ್ತದಿ ದಿವ್ಯ – ಜಲವ ನಿತ್ತವರನ್ನ ||1||

ಮೃತ್ಯುದೂತರು ತನ್ನನು ಪೊಂದಿದ ನಿಜ
ಭೃತ್ಯನ ಕರೆದೊಯ್ಯಲು
ಸತ್ತ ದ್ವಿಜನ ತಾನು – ಮತ್ತು ಧsರೆಗೆ ತಂದು
ಮೃತ್ಯು ಬಿಡಿಸಿ ಸುಖ – ವಿತ್ತು ಪೊರೆದಿಹರನ್ನಾ ||2||

ಧಿಟ ಗುರುಜಗನ್ನಾಥ ವಿಠಲನೊಲಿಮೆ
ಘಟನವಾದುದರಿಂದ
ಘಟನಾಘಟನ ಕಾರ್ಯ – ಘಟನಾ ಮಾಡುವ ನಮ್ಮ
ಪಟು ಗುರುವರ ಹೃ – ತ್ಪುಟ ದಿರುವೋರನ್ನ ||3||
****

ನಂಬಿ ಕೆಟ್ಟವರಿಲ್ಲವೋ ರಾಯರ ಪಾದಾ
ನಂಬದೆ ಕೆಡುವುರುಂಟೋ | ಪ |
ನಂಬಿದ ಜನರಿಗೆ ಬೆಂಬಲ ತಾನಾಗಿ
ಹಂಬಲಿಸಿದ ಫಲ ತುಂಬಿ ಕೊಡುವರನ್ನ | ಅ ಪ|

ಜಲಧರ ದ್ವಿಜವರಗೆ ತಾನೇ ಒಲಿದು
ಸುಲಭದಿ ಮುಕುತಿಯನಿತ್ತ
ಚಲುವ ಸುತನ ಪಡೆದಲಲನೆಗೆ ತ್ವರದಿಂದ
ಪುಲಿನ ಗರ್ತದಿ ದಿವ್ಯ  ಜಲವ ನಿತ್ತವರನ್ನ | 1 |

ಮೃತ್ಯುದೂತರು ತನ್ನನು ಪೊಂದಿದ ನಿಜ
ಭೃತ್ಯನ ಕರೆದೊಯ್ಯಲು
ಸತ್ತ ದ್ವಿಜನ ತಾನು  ಮತ್ತು ಧsರೆಗೆ ತಂದು
ಮೃತ್ಯು ಬಿಡಿಸಿ ಸುಖವಿತ್ತು ಪೊರೆದಿಹರನ್ನಾ | 2 |

ಧಿಟ ಗುರುಜಗನ್ನಾಥ ವಿಠಲನೊಲಿಮೆ
ಘಟನವಾದುದರಿಂದ
ಘಟನಾಘಟನ ಕಾರ್ಯ  ಘಟನಾ ಮಾಡುವ ನಮ್ಮ
ಪಟು ಗುರುವರ ಹೃತ್ಪುಟದಿರುವೋರನ್ನ |‌ 3‌ |
*****

No comments:

Post a Comment