Tuesday 5 October 2021

ನೋಡೆಲೆ ಮನವೆ ಕೊಂಡಾಡು ಗುರುಗಳ ಪಾದ ankita gurushreesha vittala NODELE MANAVE KONDAADU GURUGALA PAADA



ನೋಡೆಲೆ ಮನವೆ ಕೊಂಡಾಡು ಗುರುಗಳ ಪಾದ-
ಈಡು ಇಲ್ಲವೊ ಪುಣ್ಯಕೆ            || ಪ ||

ನಾಡೊಳಗೆ ಗುರುರಾಘವೇಂದ್ರ ರಾಯರ ಸೇವೆ-
ಮಾಡಿದವ ಪರಮ ಧನ್ಯ – ಮಾನ್ಯ        || ಅ ||

ನಿಷ್ಠೆಯಿಂದಲಿ ಸ್ಮರಿಸೆ ಕಷ್ಟಗಳು ದೂರ ಮನೋ-ಭೀಷ್ಟಗಳ ಪೂರೈಪರೋ
ಅಷ್ಟಸೌಭಾಗ್ಯವನೆ ಕೊಟ್ಟು ಸುಜನರಿಗೆ ಶ್ರೀ-ವಿಷ್ಣುದಾಸ್ಯವ ತೋರ್ಪರೋ
ದೃಷ್ಟಿಯಿಂದಲಿ ನೋಡಲನೇಕ ಜನ್ಮದ ಪಾಪ-ಬಿಟ್ಟು ಪೋಪವೊ ಕ್ಷಣದಲಿ
ಎಷ್ಟು ಹೇಳಲಿ ಇವರ ನಿಷ್ಠ ಮಹಾತ್ಮ್ಯೆಯನು-ದುಷ್ಟರಿಗೆ ದೊರೆಯದಿವರ ಸೇವಾ            || ೧ ||

ಹಲವು ಕ್ಷೇತ್ರಗಳೇಕೆ ಹಲವು ತೀರ್ಥಗಳೇಕೆ-ಫಲ ಸುಲಭದಲ್ಲಿರಲು
ಬಲವು ಇದ್ದದ್ದರೊಳು ಪ್ರದಕ್ಷಿಣೆ ಸುಪದಜಲ-ತಲೆಯಲ್ಲಿ ಧರಿಸಿ ನಿತ್ಯ
ಮಲರಹಿತನು ಆಗಿ ದಂಡಪ್ರಣಾಮವ ಮಾಡೆ-ಒಲಿವರು ಕರುಣದಲಿ ಬೇಗ
ಜಲಜನಾಭನು ನಾಲ್ಕುರೂಪದಿಂದಿವರಲ್ಲಿ-ಸಿಲುಕಿ ಪೂಜೆಯಗೊಂಬ ಸತತ – ಮೋಕ್ಷದಾತಾ    || ೨ ||

ಹರಿದಾಸರಿದ್ದ ಸ್ಥಳ ವರಕಾಶಿ ಮೊದಲಾದ-ಕುರುಕ್ಷೇತ್ರಕಿಂತಧಿಕವೋ
ಸುರ ಋಷಿ ಮುನಿಗಳು ಇಲ್ಲಿಹರು ವೈಕುಂಠ-ಸರಿಮಿಗಿಲು ಎಂದೆನಿಪುದೋ
ಪರಮ ಸುಜ್ಞಾನಿಗಳಿಗೀ ಫಲವು ದೊರಕುವುದು-ತರತಮದಿ ಇತರ ಜನಕೆ
ಗುರುಶ್ರೀಶವಿಠ್ಠಲನು ಇವರ ರೂಪನಾಮದಲಿ-ಪರಿಪರಿಯ ವರವಗರೆವಾ – ಪೊರೆವಾ        || ೩ ||
******

No comments:

Post a Comment