Friday 27 December 2019

ಸಾಧನ ದೇಹವಿದುಶ್ರೀ ಪದುಮೇಶ ankita prasannashreenivasa

 ..

kruti by prasanna shreenivasaru ಪ್ರಸನ್ನ ಶ್ರೀನಿವಾಸದಾಸರು


ಸಾಧನ ದೇಹವಿದು

ಶ್ರೀ ಪದುಮೇಶ ದಯದಿ ಕೊಟ್ಟ ದೇಹವಿದು ಪ


ವಿಹಿತಾವಿಹಿತವು ಈರ್ವಿಧ ಕರ್ಮದಿ

ವಿಹಿತವ ಪಿಡಿದು ಅಕಾಮ್ಯದಿ ಸಮ್ಯಕ್ ಆಚರಿಸಿ

ಅಹಿಪಶಯ್ಯನ ಸನ್ಮಹಿಮೆಗಳರಿತು ವ

ರಾಹನ ದಯದಲಿ ಪರಸುಖ ಪೊಂದಲು 1


ಬೇಸರ ತೊರೆದು ಸುಶಾಸ್ತ್ರವನೋದಿ

ಸಾಸಿರ ನಾಮನ ಭಾಸುರ ಗುಣ ಕ್ರಿಯರೂಪಗಳ

ಈಶನ ದಯದಿ ಸದ್ಯೋಚಿಸಿ ಹಿಗ್ಗುತ

ವಾಸುದೇವನೆ ಸರ್ವೇಶನೆಂದರಿಯಲು 2


ವಿಷಯೀಕ್ಷಣಗಳು ಕ್ಷಣಸುಖವೀವುವು

ಶೇಷಗಿರೀಶನೆ ಅಕ್ಷಯಸುಖದನು ಸುಖಮಯನು

ದೋಷದೂರ ಶ್ರೀ ಲಕ್ಷ್ಮಿಯ ರಮಣನೆ

ಪೋಷಕ ಮನೋಗತ ತಿಮಿರಕೆ ಪೂಷನು 3


ತಾರಕ ಗುರು ಉದಾರ ಸುಮನದಲಿ

ದಾರಿಯ ತೋರಿಸಿ ಉದ್ಧರಿಸಲು ಬಹು ದಯದಿ

ವಿಧಾತೃ ಸಮೀರ ಸುಮೇಧರು ಚಿಂತಿಪ

ವಾರಿಧಿಶಯ್ಯ ಪರೇಶನು ತೋರುವ 4


ಸಪ್ತ ಸುಸ್ಥಾನದಿ ಮರುತಾದಿಗಳೊಡೆ

ಗುಪ್ತನಾಗಿಪ್ಪ ನಿರ್ಲಿಪ್ತ ನಿರಾಮಯ ಶ್ರೀಕಪನು

ಸುಪ್ತಿ ಜಾಗೃತ ಸ್ವಪ್ನಾದಿ ಕಾಲದಿ ಕಾಯುವ

ಆಪ್ತ ಸುಹೃದನಿವಗಾರು ಈಡಿಲ್ಲವು 5


ಪಂಚ ಸುನಾಡಿಯೋಳ್ ಪಂಚ ಸುವರ್ಣದಿ

ಪಂಚ ಸುರೂಪ ಸ್ವತಂತ್ರನು ಇರುತಿಹ ಶ್ರೀಹರಿಯು

ವಿರಿಂಚ ಸಮೀರ ಸುಮೇಧರು ಬಹು ವಿಧ

ಚಿಂತಿಸಿ ನಮಿಪ ಪ್ರಪಂಚದ ಒಡೆಯನು 6


ಪದುಮದ ದಳಗಳು ಐದು ಮೂರುಂಟು

ಅದರ ಮೂಲದಿ ಇಹ ಸದಮಲ ಲಕ್ಷ್ಮೀಶ

ಬಾಧಿಪ ಕರ್ಮವ ಸುಡುವ ಸಂಕರುಷಣ

ಸದಮಲ ಪೊರೆಯುವ ಒಳಹೊರಗೆ 7


ಶ್ರವಣ ಮನನ ಸುಧ್ಯಾನದ ಬಲವು

ಶ್ರೀಶನೊಳ್ ಭಕುತಿಯು ನಿಶ್ಚಯ ಸಾಧನ ಗುರುಮಯದಿ

ಶ್ರೀಶನ ಮಹಿಮೆಗಳರಿತು ಸದೃಷದಿ

1ಸುರತಟಿನಿಯಪೋಲು ಸರಿಪ ಪ್ರೇಮವೆ ಭಕ್ತಿ 8


ಮುಕುತಿ ಕೊಡುವ ಜ್ಞಾನ ಭಕುತಿಲಿ ಬರುವುದು

ಸುಖಮಯ ಶ್ರೀಶನ ದಯವು ಇಲ್ಲದೆ ಇದು ಸಿಕ್ಕದಯ್ಯ

ವಿಕಸಿತಾಬ್ಜಜ ತಾತ ಪ್ರಸನ್ನ ಶ್ರೀನಿವಾಸ

ಶ್ರೀಕರ ವ್ಯಾಸ ರಾಮ ಕೃಷ್ಣ ನೃಹರಿ ಕಾಯ್ವ 9

***

by ಪ್ರಸನ್ನ ಶ್ರೀನಿವಾಸದಾಸರು
ಸಾಧನ ದೇಹವಿದುಶ್ರೀ ಪದುಮೇಶ ದಯದಿ ಕೊಟ್ಟ ದೇಹವಿದು ಪ

ವಿಹಿತಾವಿಹಿತವು ಈರ್ವಿಧ ಕರ್ಮದಿವಿಹಿತವ ಪಿಡಿದು ಅಕಾಮ್ಯದಿ ಸಮ್ಯಕ್ ಆಚರಿಸಿಅಹಿಪಶಯ್ಯನ ಸನ್ಮಹಿಮೆಗಳರಿತು ವರಾಹನ ದಯದಲಿ ಪರಸುಖ ಪೊಂದಲು 1

ಬೇಸರ ತೊರೆದು ಸುಶಾಸ್ತ್ರವನೋದಿಸಾಸಿರ ನಾಮನಭಾಸುರಗುಣಕ್ರಿಯರೂಪಗಳಈಶನ ದಯದಿ ಸದ್ಯೋಚಿಸಿ ಹಿಗ್ಗುತವಾಸುದೇವನೆ ಸರ್ವೇಶನೆಂದರಿಯಲು 2

ವಿಷಯೀಕ್ಷಣಗಳು ಕ್ಷಣಸುಖವೀವುವುಶೇಷಗಿರೀಶನೆ ಅಕ್ಷಯಸುಖದನು ಸುಖಮಯನುದೋಷದೂರ ಶ್ರೀ ಲಕ್ಷ್ಮಿಯ ರಮಣನೆಪೋಷಕ ಮನೋಗತ ತಿಮಿರಕೆ ಪೂಷನು 3

ತಾರಕಗುರುಉದಾರ ಸುಮನದಲಿದಾರಿಯ ತೋರಿಸಿ ಉದ್ಧರಿಸಲು ಬಹು ದಯದಿವಿಧಾತೃಸಮೀರಸುಮೇಧರು ಚಿಂತಿಪವಾರಿಧಿಶಯ್ಯ ಪರೇಶನು ತೋರುವ 4

ಸಪ್ತ ಸುಸ್ಥಾನದಿ ಮರುತಾದಿಗಳೊಡೆಗುಪ್ತನಾಗಿಪ್ಪ ನಿರ್ಲಿಪ್ತ ನಿರಾಮಯ ಶ್ರೀಕಪನುಸುಪ್ತಿಜಾಗೃತ ಸ್ವಪ್ನಾದಿ ಕಾಲದಿ ಕಾಯುವಆಪ್ತ ಸುಹೃದನಿವಗಾರು ಈಡಿಲ್ಲವು 5

ಪಂಚ ಸುನಾಡಿಯೋಳ್ ಪಂಚ ಸುವರ್ಣದಿಪಂಚ ಸುರೂಪ ಸ್ವತಂತ್ರನು ಇರುತಿಹ ಶ್ರೀಹರಿಯುವಿರಿಂಚಸಮೀರಸುಮೇಧರು ಬಹು ವಿಧಚಿಂತಿಸಿ ನಮಿಪ ಪ್ರಪಂಚದ ಒಡೆಯನು 6

ಪದುಮದ ದಳಗಳು ಐದು ಮೂರುಂಟುಅದರ ಮೂಲದಿ ಇಹ ಸದಮಲ ಲಕ್ಷ್ಮೀಶಬಾಧಿಪ ಕರ್ಮವ ಸುಡುವ ಸಂಕರುಷಣಸದಮಲ ಪೊರೆಯುವ ಒಳಹೊರಗೆ 7

ಶ್ರವಣ ಮನನ ಸುಧ್ಯಾನದ ಬಲವುಶ್ರೀಶನೊಳ್ ಭಕುತಿಯು ನಿಶ್ಚಯ ಸಾಧನ ಗುರುಮಯದಿಶ್ರೀಶನ ಮಹಿಮೆಗಳರಿತು ಸದೃಷದಿಸುರತಟಿನಿಯಪೋಲು ಸರಿಪ ಪ್ರೇಮವೆ ಭಕ್ತಿ 8

ಮುಕುತಿ ಕೊಡುವ ಜ್ಞಾನ ಭಕುತಿಲಿ ಬರುವುದುಸುಖಮಯ ಶ್ರೀಶನ ದಯವು ಇಲ್ಲದೆ ಇದು ಸಿಕ್ಕದಯ್ಯವಿಕಸಿತಾಬ್ಜಜತಾತಪ್ರಸನ್ನ ಶ್ರೀನಿವಾಸಶ್ರೀಕರ ವ್ಯಾಸ ರಾಮ ಕೃಷ್ಣ ನೃಹರಿ ಕಾಯ್ವ 9
*******

No comments:

Post a Comment