Wednesday 13 November 2019

ನೀನೇ ಗತಿಯೆಂದು ನಂಬಿದೆ ಕಾಯಯ್ಯ ankita prasannavenkata

by ಪ್ರಸನ್ನವೆಂಕಟದಾಸರು
ನೀನೆ ಗತಿಯೆಂದು ನಂಬಿದೆ ಕಾಯಯ್ಯ ಶ್ರೀನಿವಾಸ ಎನ್ನಹೀನಗುಣಗಳೆಣಿಸಲಿ ಬ್ಯಾಡ ದಯಮಾಡೊ ಶ್ರೀನಿವಾಸ 1

ನಾನಾ ದುಷ್ಕøತಫಲವ ಉಂಡೆ ಇನ್ನಾರೆ ಶ್ರೀನಿವಾಸಎಂದೂ ದುರ್ವಿಷಯಕೆಮನ ಎರಗದಂತೆ ಮಾಡೊ ಶ್ರೀನಿವಾಸ 2

ಸತ್ಕಥಾ ಶ್ರವಣ ಭಾಗ್ಯವ ಕೊಡುಅನುದಿನಶ್ರೀನಿವಾಸ ಎನ್ನಹೃತ್ಕಮಲದಿ ವ್ಯಕ್ತನಾಗಯ್ಯ ಶ್ರೀನಿವಾಸ 3

ಪುತ್ರಕಳತ್ರಮಿತ್ರರು ನಿನ್ನ ದಾಸರೊ ಶ್ರೀನಿವಾಸ ತ್ವದ್ಭøತ್ಯಭೃತ್ಯರ ಪರಿಚಾರಕ ನಾನು ಶ್ರೀನಿವಾಸ 4

ಅನಂತ ಜನ್ಮದ ಸತ್ಕರ್ಮ ನಿನಗೇವೆ ಶ್ರೀನಿವಾಸನಿತ್ಯದೀನೋದ್ಧಾರÀ ಪ್ರಸನ್ನವೆಂಕಟ ಮುಕುಂದ ಶ್ರೀನಿವಾಸ 5
***

ನೀನೆ ಗತಿಯೆಂದು ನಂಬಿದೆ ಕಾಯಯ್ಯ ಶ್ರೀನಿವಾಸ ಎನ್ನ
ಹೀನಗುಣಗಳೆಣಿಸಲಿ ಬ್ಯಾಡ ದಯಮಾಡೊ ಶ್ರೀನಿವಾಸ || 1 ||

ನಾನಾ ದುಷ್ಕøತಫಲವ ಉಂಡೆ ಇನ್ನಾರೆ ಶ್ರೀನಿವಾಸ
ಎಂದೂ ದುರ್ವಿಷಯಕೆ ಮನ ಎರಗದಂತೆ ಮಾಡೊ ಶ್ರೀನಿವಾಸ || 2 ||

ಸತ್ಕಥಾ ಶ್ರವಣ ಭಾಗ್ಯವ ಕೊಡು ಅನುದಿನ ಶ್ರೀನಿವಾಸ
ಎನ್ನಹೃತ್ಕಮಲದಿ ವ್ಯಕ್ತನಾಗಯ್ಯ ಶ್ರೀನಿವಾಸ || 3 ||

ಪುತ್ರ ಕಳತ್ರ ಮಿತ್ರರು ನಿನ್ನ ದಾಸರೊ ಶ್ರೀನಿವಾಸ ತ್ವದ್ಭತ್ಯ
ಭೃತ್ಯರ ಪರಿಚಾರಕ ನಾನು ಶ್ರೀನಿವಾಸ || 4 ||

ಅನಂತ ಜನ್ಮದ ಸತ್ಕರ್ಮ ನಿನಗೇವೆ ಶ್ರೀನಿವಾಸ ನಿತ್ಯ
ದೀನೋದ್ಧಾರ ಪ್ರಸನ್ನವೆಂಕಟ ಮುಕುಂದ ಶ್ರೀನಿವಾಸ || 5 ||
***

Nīne gatiyendu nambide kāyayya śrīnivāsa

enna hīnaguṇagaḷeṇisali byāḍa dayamāḍo śrīnivāsa || 1 ||

nānā duṣkaøtaphalava uṇḍe innāre śrīnivāsa

endū durviṣayake mana eragadante māḍo śrīnivāsa || 2 ||

satkathā śravaṇa bhāgyava koḍu anudina śrīnivāsa

ennahr̥tkamaladi vyaktanāgayya śrīnivāsa || 3 ||

putra kaḷatra mitraru ninna dāsaro śrīnivāsa

tvadbhatya bhr̥tyara paricāraka nānu śrīnivāsa || 4 ||

ananta janmada satkarma ninagēve śrīnivāsa

nitya dīnōd’dhāra prasannaveṅkaṭa mukunda śrīnivāsa || 5 ||
***

No comments:

Post a Comment