Friday 27 December 2019

ಸಿರಿವಿರಿಂಚಿ ಭವೇಂದ್ರಾದಿ ಸುರರಿಂದ ಪ್ರಸನ್ನವೆಂಕಟನ್ನ others prasannavenkata dasa stutih

song on prasanna venkata dasa
ಸಿರಿವಿರಿಂಚಿ ಭವೇಂದ್ರಾದಿ ಸುರರಿಂದ ರ್ಚಿತನಾದ ಸಿರಿ ಪ್ರಸನ್ನವೆಂಕಟನ್ನ||
ನಿರುತ ಸ್ಮರಿಪ ಕಾಖಂಡಿಕಿ ವೆಂಕಪ್ಪನವರ ಚರಣವನೆ ನೆನೆವನೆ ಧನ್ಯಾಮಾನ್ಯ ||pa||

ಮರುತ ಮತಾಬ್ಧಿ ಮರಕತ ಭೂಸುರಜನ್ಮ ಧರನಾಗಿಭೂಮಿಯೊಳು
ದಿಸಲುತರುಳತ್ವ ಕಳೆದು ತರುಣತನ ಬರಲಿನ್ನು ಅರಿವ ಕಾಣದೆ ಇರುತಿರಲು
ಹರಿನಾಮಾವಳಿಗಳು ಬರೆದು ಓದುವ ಭಾಗ್ಯ ಅರಿವೆನೆಂದರೆ ಬಾರದಿರಲು
ತೊರೆದು ಮನೆಯವರ ಗಿರಿಯಾತ್ರೆ ಮಾಳ್ಪರನನುಸರಿಸಿ ತೆರಳಿಬರುತಿರಲು ||1||

ಹಸನಾಗಿ ಕಪಿಲ ತೀರ್ಥದಲಿ ಮಜ್ಜನಗೈದು ಶಶಿಧರನ ಅಡಿಗಳಿಗೆರಗಿ
ಎಸೆವ ಪರ್ವತಾರೋಹಣವ ಮಾಡಿ ಸ್ವಾಮಿ ಪುಷ್ಕರಣಿ ತೀರ್ಥದಲಿಮುಳುಗಿ
ಬಿಸಜದಾಳಾಕ್ಷ ವರಾಹ ಮೂರ್ತಿಯನೆ ಕಂಡಾಲಸವ ಮಾಡದಲೆಚೆನ್ನಾಗಿ
ಝಷಕೇತು ಜನಕನ ಪುಟ್ಟಿಸಿದ ಕಾರಣವೇನು ಉಸಿರೆಂದು ಚರಣಕ್ಕೆಬಾಗಿ ||2||

ವಂದಿಸಿದ ಕ್ಷಣ ಸ್ವಪ್ನದಿ ಪ್ರಸನ್ನವೆಂಕಟನೆಂದು ಬರೆಯೆ ನಾಲಿಗೆಲಿ
ನಂದದಿಂದೆಚ್ಚೆತ್ತು e್ಞÁನವುದಿಸೆ ಮುಕುಂದನ ಕಂಡು ಎದೆಯಲಿ
ಚಂದ ಚಂದದಿ ಪೊಗಳುತ್ತ ಕಂಗಳಿಂದಾ ನಂದಬಾಷ್ಪ ಸುರಿಸುತಲಿ
ಇಂದು ಧನ್ಯನಾದೆನೆಂದು ತೋಷಾಬ್ಧಿಯ ಹೊಂದಿ ಹರಿಯಾಜ್ಞೆಯಲಿತೆರಳಿ||3||

ಹಿತದಿ ಮಾತಿಗೆ ಬಂದಚ್ಯುತನ ನಾಮಾವಳಿ ಅತಿಶಯ ಭಕುತಿ ಪೂರ್ವಕದಿ
ಸತತ ಅನೇಕ ಗ್ರಂಥಗಳು ದಶಮಸ್ಕಂಧ ಭಾಗವತ ಪೂರ್ವಾರ್ಧಕನ್ನಡದಿಮತಿ
ಪೂರ್ವಕ ರಚಿಸುತಾನಂದವು ತುಳುಕು ತಿಹುದು ಕವಿತೆಯಲಿನುತಿಸಿ
ದುರ್ಮತ ನಿರಾಕರಿಸಿ ಬಾಳಿ ಬಲು ಕುಲ ತತಿ ಶುದ್ಧಮಾಳ್ಪರು ಹರಿಪುರವಹೊಂದಿ ||4||

ಕಲಿಕಾಲದಿ ನರಹರಿ ನಾಮ ಸ್ಮರಣೆಯು ಮುಖದಿಂದ ಬರುವುದು ಅತ್ಯಸಾಧ್ಯ
ಲಲಿತಕವನದಿ ತುತಿಸೆ ರಮಾಪತಿವಿಠಲನು ಒಲಿವನು ಇದು ಸತ್ಯ
ಹಲವು ಮಾತೇಕಿವರು ಸುರರೇ ಸರಿ ನರರಲ್ಲ ಇದು ಸಿದ್ಧವೇ ಸಿದ್ಧಛಲದಿ
ಮನುಜನೆಂಬಧಮನು ಹರಿಯಾಜ್ಞೆಯಲಿ ಬಲು ಬಲು ನರಕದೊಳು ಬೇಳುವುದುರಾದ್ಧ||5||
*******

No comments:

Post a Comment