ರಾಗ - : ತಾಳ -
ತಂದೆ ಪುರಂದರದಾಸರ ಸ್ಮರಿಸುವೆ ಎನ್ನ
ಮಂದಮತಿಗಳೆದು ಹರಿಭಟನೆನಿಸುವೆ ll ಪ ll
ಗುರು ವ್ಯಾಸರಾಜರ ಚರಣಾಬ್ಜ ಷಟ್ಚರಣನ
ವಿರತಿ ಭಕುತಿ ಜ್ಞಾನದಾರ್ಣವನ
ವರ ಉಪನಿಷದ್ವಾರಿನಿಧಿಗೆ ತಿಮಿಂಗಿಲನಹನ
ಧರೆಯ ಕವಿಕುಲ ಶಿಖಾಮಣಿಯೆನಿಪನ ll ೧ ll
ದಿನ ದಿನ ಯದೃಚ್ಛಾರ್ಥಲಾಭದಲಿ ತುಷ್ಟನ
ಕನಕಲೋಷ್ಠ ಸಮಾನದೀಕ್ಷಿಸುವನ
ಘನ ಸಿದ್ಧಿಗಳು ತಾವೆ ಬರಲೊಡಂಬಡದನ ಹರಿ
ಗುಣ ಕೀರ್ತನೆಯಲ್ಲಿ ಪರವಶದಿಹನ ll ೨ ll
ಭವಜಲದಿ ಗೋಷ್ಪದಕೆ ಸರಿದಾಟಿ ಕಾಮ ಕ್ರೋ
ಧವ ಮೆಟ್ಟಿ ಭಕ್ತಿಸುಧೆಯುಂಡು ತೇಗಿ
ಭುವಿಯಲ್ಲಿ ನಿಜಕೀರ್ತಿಯನು ಹರಹಿ ಪವನಮತ
ದವರೆನಿಪ ದಾಸರಿಗೆ ತವರೂಪ ತೋರಿದನ ll ೩ ll
ಕವನೋಕ್ತಿ ಮಳೆಗರೆದು ಹರಿದಾಸ ಪೈರ್ಗಳಿಗೆ
ಅವಿರಳಾನಂದವಿತ್ತರ್ಥಿಸುವನ
ನವಭಕುತಿ ಮನಗಂಡು ಸಮಯದಾನಂದಪುರ ಪ
ಥವನು ತೋರಿಸಿದಂಥ ಬಹುಕೃಪಾಕರನ ll ೪ ll
ಗೀತ ಠಾಯಿ ಸುಳಾದ್ಯುಗಾಭೋಗ ಪದ್ಯಪದ
ವ್ರಾತ ಪ್ರಬಂಧ ರಚಿಸಿ ವಿಟ್ಠಲನ
ಪ್ರೀತಿ ಬಡಿಸಿ ಕಂಡು ನಲಿವ ವೈಷ್ಣವಾಗ್ರ
ನಾಥ ಪ್ರಸನ್ವೆಂಕಟ ಕೃಷ್ಣಪ್ರಿಯನ ll ೫ ll
**
by ಪ್ರಸನ್ನವೆಂಕಟದಾಸರು
ತಂದೆ ಪುರಂದರದಾಸರ ಸ್ಮರಿಸುವೆ ಎನ್ನಮಂದಮತಿಗಳೆದು ಹರಿಭಟನೆನಿಸುವೆ ಪ.
ಗುರುವ್ಯಾಸರಾಜರ ಚರಣಾಬ್ಜ ಷಟ್ಚರಣನವಿರತಿಭಕುತಿ ಜ್ಞಾನದಾರ್ಣವನವರಉಪನಿಷದ್ವಾರಿನಿಧಿಗೆ ತಿಮಿಂಗಿಲನಹನಧರೆಯ ಕವಿಕುಲ ಶಿಖಾಮಣಿಯೆನಿಪನ 1
ದಿನ ದಿನ ಯದೃಚ್ಛಾರ್ಥಲಾಭದಲಿ ತುಷ್ಟನಕನಕಲೋಷ್ಠ ಸಮಾನದೀಕ್ಷಿಸುವನಘನಸಿದ್ಧಿಗಳು ತಾವೆ ಬರಲೊಡಂಬಡದನಹರಿಗುಣಕೀರ್ತನೆಯಲ್ಲಿ ಪರವಶದಿಹನ2
ಭವಜಲಧಿ ಗೋಷ್ಪದಕೆ ಸರಿದಾಟಿ ಕಾಮ ಕ್ರೋಧವಮೆಟ್ಟಿ ಭಕ್ತಿಸುಧೆಯುಂಡು ತೇಗಿಭುವಿಯಲ್ಲಿ ನಿಜಕೀರ್ತಿಯನು ಹರಹಿ ಪವನಮತದವರೆನಿಪ ದಾಸರಿಗೆ ತವರೂಪ ತೋರಿದನ 3
ಕವನೋಕ್ತಿ ಮಳೆಗರೆದು ಹರಿದಾಸ ಪೈರ್ಗಳಿಗೆಅವಿರಳಾನಂದವಿತ್ತಥಿರ್üಸುವನನವಭಕುತಿ ಮನಗಂಡು ಸವೆಯದಾನಂದಪುರ ಪಥವನು ತೋರಿಸಿದಂಥ ಬಹುಕೃಪಾಕರನ 4
ಗೀತ ಠಾಯಿ ಸುಳಾದ್ಯುಗಾಭೋಗ ಪದ್ಯಪದವ್ರಾತಪ್ರಬಂಧ ರಚಿಸಿ ವಿಠಲನಪ್ರೀತಿ ಬಡಿಸಿ ಕಂಡು ನಲಿವ ವೈಷ್ಣವಾಗ್ರನಾಥ ಪ್ರಸನ್ವೆಂಕಟ ಕೃಷ್ಣಪ್ರಿಯನ 5
*********
ತಂದೆ ಪುರಂದರದಾಸರ ಸ್ಮರಿಸುವೆ ಎನ್ನಮಂದಮತಿಗಳೆದು ಹರಿಭಟನೆನಿಸುವೆ ಪ.
ಗುರುವ್ಯಾಸರಾಜರ ಚರಣಾಬ್ಜ ಷಟ್ಚರಣನವಿರತಿಭಕುತಿ ಜ್ಞಾನದಾರ್ಣವನವರಉಪನಿಷದ್ವಾರಿನಿಧಿಗೆ ತಿಮಿಂಗಿಲನಹನಧರೆಯ ಕವಿಕುಲ ಶಿಖಾಮಣಿಯೆನಿಪನ 1
ದಿನ ದಿನ ಯದೃಚ್ಛಾರ್ಥಲಾಭದಲಿ ತುಷ್ಟನಕನಕಲೋಷ್ಠ ಸಮಾನದೀಕ್ಷಿಸುವನಘನಸಿದ್ಧಿಗಳು ತಾವೆ ಬರಲೊಡಂಬಡದನಹರಿಗುಣಕೀರ್ತನೆಯಲ್ಲಿ ಪರವಶದಿಹನ2
ಭವಜಲಧಿ ಗೋಷ್ಪದಕೆ ಸರಿದಾಟಿ ಕಾಮ ಕ್ರೋಧವಮೆಟ್ಟಿ ಭಕ್ತಿಸುಧೆಯುಂಡು ತೇಗಿಭುವಿಯಲ್ಲಿ ನಿಜಕೀರ್ತಿಯನು ಹರಹಿ ಪವನಮತದವರೆನಿಪ ದಾಸರಿಗೆ ತವರೂಪ ತೋರಿದನ 3
ಕವನೋಕ್ತಿ ಮಳೆಗರೆದು ಹರಿದಾಸ ಪೈರ್ಗಳಿಗೆಅವಿರಳಾನಂದವಿತ್ತಥಿರ್üಸುವನನವಭಕುತಿ ಮನಗಂಡು ಸವೆಯದಾನಂದಪುರ ಪಥವನು ತೋರಿಸಿದಂಥ ಬಹುಕೃಪಾಕರನ 4
ಗೀತ ಠಾಯಿ ಸುಳಾದ್ಯುಗಾಭೋಗ ಪದ್ಯಪದವ್ರಾತಪ್ರಬಂಧ ರಚಿಸಿ ವಿಠಲನಪ್ರೀತಿ ಬಡಿಸಿ ಕಂಡು ನಲಿವ ವೈಷ್ಣವಾಗ್ರನಾಥ ಪ್ರಸನ್ವೆಂಕಟ ಕೃಷ್ಣಪ್ರಿಯನ 5
*********
No comments:
Post a Comment