Friday 27 December 2019

ವಾದಿರಾಜರ ಪದವ ಸ್ಮರಿಸುವೆ others vadiraja stutih

ವಾದಿರಾಜರ ಪದವ ಸ್ಮರಿಸುವೆ ಅ-
ಗಾಧ ಮಹಿಮರ ಸದಯ ಹೃದಯರ ||pa||

ಮೋದತೀರ್ಥರಾಗಮದ ಸಾರವ
ಸಾಧು ಜನರಿಗೆ ಬೋಧಿಸಿರ್ಪರ
ವಾದದಿಂದಲಿ ವೀರಶೈವರ
ಗೆದ್ದು ಮುತ್ತಿನ ಪೀಠವೇರ್ದರ ||1||

ಪಾದದಿಂದಲಿ ಸಕಲ ತೀರ್ಥವ
ಮೋದದಿಂದ ಚರಿಸಿ ತೀರ್ಥ ಪ್ರ-
ಬಂಧ ಗ್ರಂಥವ ರಚಿಸಿ ಮಾನ್ಯರಾ
ಗಿರ್ದ ಗುರುಗಳನೆಂತು ಬಣ್ಣಿಪೆ ||2||

ರಾಜಸಭೆಯೊಳು ರಾಜಭೀಷ್ಮಕ
ತನುಜೆಯರಸನ ಸ್ತುತಿಪ ಕಾವ್ಯವ
ಈ ಜಗತ್ತಿನೊಳ್ ಶ್ರೇಷ್ಠ ಕಾವ್ಯವೆಂ
ದಿದನೆ ಗಜದೊಳು ಮೆರೆಸಿದರಸನು ||3||

ಒಂದುನೂರ ಇಪ್ಪತ್ತು ವರ್ಷದೊಳ್
ಸಿಂಧುಶಯನನ ಸೇವಿಸುತ್ತಲಿ
ಇಂದ್ರದತ್ತ ವಿಮಾನದಿಂದಲಿ
ಸತ್ಯಲೋಕವನೈದಿದ ಗುರುವರ ||4||

ಯುಕ್ತಿಮಲ್ಲಿಕಾ ಗ್ರಂಥದಿಂದ
ರಾಜೇಶ ಹಯಮುಖಾನಂತ ಗುಣಗಳ
ಪೊಗಳುತಿರ್ಪರ ರಾಗಶೂನ್ಯರ
ಋಜು ಗಣೇಶರ ಸುಜ್ಞಾನ ಪೂರ್ಣರ ||5||
********

No comments:

Post a Comment