Friday 27 December 2019

ಪಾಲಿಸೋ ಯತಿರಾಜ ಪಾಲಿಸೋ ankita prasannashreenivasa vyasaraja stutih

by ಪ್ರಸನ್ನ ಶ್ರೀನಿವಾಸದಾಸರು
ಶ್ರೀವ್ಯಾಸರಾಜರು

 ..


kruti by ಪ್ರಸನ್ನ ಶ್ರೀನಿವಾಸದಾಸರು prasanna shreenivasaru


ಪಾಲಿಸೋ ಯತಿರಾಜ ಪಾಲಿಸೋ

ಪಾಲಿಸೋ ಮುನಿ ವ್ಯಾಸ ರಾಜ | ಜಗ -

ತ್ತಲ್ಲಿ ನಿನ್ಮಹಿಮೆ ಸುಭ್ರಾಜ | ಅಹ |

ಕಾಲಲ್ಲಿ ಶರಣಾದೆ ಶ್ರೀ ಲೋಲ ಪ್ರಿಯ ನಿನ್ನ

ಆಳೆಂದು ಗಣಿಸಿ ಪಾಲಿಪುದೆನ್ನ ಪ್ರತಿಕ್ಷಣ | ಪಾಲಿಸೋ | ಪ


ದಿನಪ ಸುತೇಜ ಬ್ರಹ್ಮಣ್ಯ | ತೀರ್ಥ

ಮುನಿಸಾರ್ವಭೌಮರ ದಿವ್ಯ | ಚಾರು

ವನರುಹ ಕರದಿಂದ ಉದಯ | ಇನ್ನು

ಏನೆಂಬೆ ನಿನ್ನ ಪ್ರಾಬಲ್ಯ | ಅಹ |

ದೀನ ವತ್ಸಲ ನಿನ್ನ ಶರಣು ಹೊಕ್ಕೆನು ನಾನು

ಎನ್ನ ಭಾಗ್ಯೋದಯ ತವ ಕಾರುಣ್ಯದಿ ಇನ್ನು 1

ಕರುಣಿ ಸುಶಾಂತ ಸುವರ್ಣ | ವರ್ಣ

ತೀರುಥಕರ ಕಂಜೋತ್ಪನ್ನ | ಸು

ಸ್ಥಿರ ವರಭಕ್ತಿ ವಿಜ್ಞಾನ | ಸಂ -

ಪನ್ನ ಶ್ರೀ ಪಾದಾರ್ಯರನ್ನ | ಅಹ |

ಸೇರಿ ಸೇವಿಸಿ ವಾದಿ ಕರಿ ಪಂಚಾನನಾದ

ಸೂರಿ ಸಜ್ಜನನುತ ವ್ಯಾಸ ಮುನೀಂದ್ರ 2

ಮಾಲೋಲ ಕೃಷ್ಣಸುಪ್ರಿಯರು | ನಿತ್ಯ

ಕಾಳೀಶ ನಿಮ್ಮೋಳ್ ಪ್ರಚುರರು | ಮತ್ತು

ವ್ಯಾಳೇಶ ಅಂಶ ಸಂಯುತರು | ಎಂದು

ಹೇಳೋರು ಹೀಗೆ ವಿಬುಧರು | ಅಹ |

ಕೀಳುವಿಷಯದಿ ಎನ್ ಮನ ಸೋಲದೇ ಹೊರ

ಒಳಗಿಪ್ಪ ಹರಿರೂಪ ವ್ಯಾಳೆ ವ್ಯಾಳೆಗೆ ತೋರು 3

ದ್ವಾಸಪ್ತತಿ ಸºಸ್ರ | ನಾಡಿ

ತತ್ರಸ್ಥ ರೂಪ ಸಮೀರ | ಅವನ

ವಿಂಶತಿ ಮೇಲೇಳು ನೂರು | ಪ್ರತಿಮ

ನೀ ಸ್ಥಾಪಿಸದಿಯೋ ಹೇ ಧೀರ | ಅಹ

ಈ ಸಮಸ್ತ ಹನುಮರೂಪ ಒಂದೊಂದರೊಳ್

ಶತರೂಪ ಸ್ಮರಣೀಯ ಶ್ರೀಶ ಸಾಸಿರ ನಾಮ 4


ಸಾತ್ಯವತೀಯ ವೇದಾರ್ಥ | ಅರಿತು

ಮಧ್ಯಗೇಹನು ವಿವರಿಸಿದ | ಆಗ

ಜಯರಾಯ ತತ್ ಟೀಕೆ ಬರೆದ | ಈಗ

ವ್ಯಾಸರಾಯನು ವಿವರಿಸಿದ | ಅಹ

ಮಿಥ್ಯಾ ತತ್ವವ ಪೇಳ್ದ ಮಾಯ್‍ಗಳ ಬಾಯ್ ಮುಚ್ಚಿ

ನಿತ್ಯ ಸುಖವನೀವ ತತ್ವ ಬೋಧಿಸಿದಿ 5

ಮಾರ್ತಾಂಡ ಕತ್ತಲೆ ಕಳೆವ | ತರ್ಕ

ತಾಂಡವ ದುಸ್ತರ್ಕ ತರಿವ | ಬಂಡು

ಮಿಥ್ಯಾವಾದಿಗಳ ದುರ್ಮತವ | ತುಂಡು

ತುಂಡುಮಾಡಿದ ನ್ಯಾಯಾಮೃತವ | ಅಹ

ಕೊಂಡಾಡಳಲವೇ ಚಂದ್ರಿಕಾ ಈವ ಆಹ್ಲಾದವ

ಬ್ರಹ್ಮಾಂqದೊಡೆಯನ ಅಮೃತ ಪ್ರಸಾದವ 6

ಪ್ರಣವ ಮಂತ್ರದಿ ಲಕ್ಷ್ಮೀರಮಣ | ಎಂಟು

ವರ್ಣ ಮಂತ್ರದಿ ಶ್ರೀರಮಣ | ವಿಷ್ಣು

ಷಡ್ವರ್ಣದಲ್ಲಿ ಸತ್ಯಾರಮಣ ಹಾಗೂ

ವರ್ಣ ಸರ್ವದಿ ರಮಾ ರಮಣ | ಅಹ

ಧ್ವನಿ ವರ್ಣ ಪ್ರತಿಪಾದ್ಯ ಸತ್ತಾದಿ ದಾತ

ಅನುತ್ತಮ ಹರಿ ರೂಪ ಗುಣ ಕ್ರಿಯಾ ಹಾಡಿದಿ 7

ಭೂಪನ ಹರಿಯಾಸನವ ನೀ ಏರ್ದಿ | ಏರಿ

ನೃಪವರನಪಮೃತ್ಯು ತರಿದಿ | ಯತಿ

ತಪಸ್ವಿಗಳಿಗೆ ಪಾಠ ಪೇಳ್ದಿ | ಸರ್ವ

ವಿಭುದರಿಂದಲಿ ಪೂಜ್ಯನಾದಿ | ಅಹ |

ಗೋಪಾಲ ಅಸುಪಾಲನ್ನೊಲುಮೆ ನಿನ್ನಲ್ಲೆಷ್ಟೋ

ಶ್ರೀಪನ ದಾಸವೃಂದಬ್ಜ ಕೂಟಕೆ ಸೂರ್ಯ 8

ನರಸಿಂಹ ಗೋಪಾಲ ಕೃಷ್ಣ | ಯಜ್ಞ

ವರಾಹ ಪಟ್ಟಾಭಿರಾಮನ್ನ | ಬಹು

ಪರಾಶರ್ಯಾದಿ ರೂಪನ್ನ | ನಿತ್ಯ

ನಿರುತ ಸಂಪೂಜಿಪ ಘನ್ನ | ಅಹ

ವರಭಕ್ತಾಗ್ರಣಿ ನೀನು ಸರಸಿಜಾಸನ ಪಿತ

'ಪ್ರಸನ್ನ ಶ್ರೀನಿವಾಸ' ನ್ನೊಲಿಸೋ ಎನಗೆ ಜೀಯ 9 ಪ

|| ಸಂಪೂರ್ಣಂ ||

***


ಪಾಲಿಸೋ ಯತಿರಾಜ ಪಾಲಿಸೋಪಾಲಿಸೋ ಮುನಿ ವ್ಯಾಸ ರಾಜ | ಜಗ -ತ್ತಲ್ಲಿ ನಿನ್ಮಹಿಮೆ ಸುಭ್ರಾಜ | ಅಹ |ಕಾಲಲ್ಲಿ ಶರಣಾದೆ ಶ್ರೀಲೋಲಪ್ರಿಯ ನಿನ್ನಆಳೆಂದು ಗಣಿಸಿ ಪಾಲಿಪುದೆನ್ನ ಪ್ರತಿಕ್ಷಣ | ಪಾಲಿಸೋ | ಪ

ದಿನಪ ಸುತೇಜ ಬ್ರಹ್ಮಣ್ಯ | ತೀರ್ಥಮುನಿಸಾರ್ವಭೌಮರ ದಿವ್ಯ |ಚಾರುವನರುಹಕರದಿಂದ ಉದಯ | ಇನ್ನುಏನೆಂಬೆ ನಿನ್ನ ಪ್ರಾಬಲ್ಯ | ಅಹ |ದೀನ ವತ್ಸಲ ನಿನ್ನ ಶರಣು ಹೊಕ್ಕೆನು ನಾನುಎನ್ನ ಭಾಗ್ಯೋದಯ ತವ ಕಾರುಣ್ಯದಿ ಇನ್ನು 1

ಕರುಣಿ ಸುಶಾಂತ ಸುವರ್ಣ | ವರ್ಣತೀರುಥಕರ ಕಂಜೋತ್ಪನ್ನ | ಸುಸ್ಥಿರ ವರಭಕ್ತಿವಿಜ್ಞಾನ| ಸಂ-ಪನ್ನ ಶ್ರೀ ಪಾದಾರ್ಯರನ್ನ | ಅಹ |ಸೇರಿ ಸೇವಿಸಿ ವಾದಿಕರಿಪಂಚಾನನಾದಸೂರಿಸಜ್ಜನನುತ ವ್ಯಾಸ ಮುನೀಂದ್ರ2

ಮಾಲೋಲ ಕೃಷ್ಣಸುಪ್ರಿಯರು |ನಿತ್ಯಕಾಳೀಶ ನಿಮ್ಮೋಳ್ ಪ್ರಚುರರು | ಮತ್ತುವ್ಯಾಳೇಶ ಅಂಶ ಸಂಯುತರು | ಎಂದುಹೇಳೋರು ಹೀಗೆ ವಿಬುಧರು | ಅಹ |ಕೀಳುವಿಷಯದಿ ಎನ್ ಮನ ಸೋಲದೇ ಹೊರಒಳಗಿಪ್ಪ ಹರಿರೂಪ ವ್ಯಾಳೆ ವ್ಯಾಳೆಗೆ ತೋರು 3

ದ್ವಾಸಪ್ತತಿ ಸºಸ್ರ | ನಾಡಿತತ್ರಸ್ಥರೂಪಸಮೀರ| ಅವನವಿಂಶತಿ ಮೇಲೇಳು ನೂರು | ಪ್ರತಿಮನೀ ಸ್ಥಾಪಿಸದಿಯೋ ಹೇ ಧೀರ | ಅಹಈ ಸಮಸ್ತ ಹನುಮರೂಪ ಒಂದೊಂದರೊಳ್ಶತರೂಪ ಸ್ಮರಣೀಯ ಶ್ರೀಶ ಸಾಸಿರ ನಾಮ 4

ಸಾತ್ಯವತೀಯ ವೇದಾರ್ಥ | ಅರಿತುಮಧ್ಯಗೇಹನು ವಿವರಿಸಿದ | ಆಗಜಯರಾಯ ತತ್ ಟೀಕೆ ಬರೆದ | ಈಗವ್ಯಾಸರಾಯನು ವಿವರಿಸಿದ | ಅಹಮಿಥ್ಯಾ ತತ್ವವ ಪೇಳ್ದ ಮಾಯ್‍ಗಳ ಬಾಯ್ ಮುಚ್ಚಿನಿತ್ಯಸುಖವನೀವ ತತ್ವ ಬೋಧಿಸಿದಿ5

ಮಾರ್ತಾಂಡಕತ್ತಲೆ ಕಳೆವ | ತರ್ಕತಾಂಡವ ದುಸ್ತರ್ಕ ತರಿವ |ಬಂಡುಮಿಥ್ಯಾವಾದಿಗಳ ದುರ್ಮತವ | ತುಂಡುತುಂಡುಮಾಡಿದ ನ್ಯಾಯಾಮೃತವ | ಅಹಕೊಂಡಾಡಳಲವೇ ಚಂದ್ರಿಕಾಈವಆಹ್ಲಾದವಬ್ರಹ್ಮಾಂqದೊಡೆಯನ ಅಮೃತ ಪ್ರಸಾದವ 6

ಪ್ರಣವಮಂತ್ರದಿ ಲಕ್ಷ್ಮೀರಮಣ | ಎಂಟುವರ್ಣ ಮಂತ್ರದಿ ಶ್ರೀರಮಣ | ವಿಷ್ಣುಷಡ್ವರ್ಣದಲ್ಲಿ ಸತ್ಯಾರಮಣ ಹಾಗೂವರ್ಣ ಸರ್ವದಿ ರಮಾ ರಮಣ | ಅಹಧ್ವನಿ ವರ್ಣ ಪ್ರತಿಪಾದ್ಯ ಸತ್ತಾದಿದಾತಅನುತ್ತಮಹರಿರೂಪಗುಣಕ್ರಿಯಾ ಹಾಡಿದಿ7

ಭೂಪನ ಹರಿಯಾಸನವ ನೀ ಏರ್ದಿ | ಏರಿನೃಪವರನಪಮೃತ್ಯು ತರಿದಿ | ಯತಿತಪಸ್ವಿಗಳಿಗೆ ಪಾಠ ಪೇಳ್ದಿ | ಸರ್ವವಿಭುದರಿಂದಲಿ ಪೂಜ್ಯನಾದಿ | ಅಹ |ಗೋಪಾಲ ಅಸುಪಾಲನ್ನೊಲುಮೆ ನಿನ್ನಲ್ಲೆಷ್ಟೋಶ್ರೀಪನ ದಾಸವೃಂದಬ್ಜ ಕೂಟಕೆ ಸೂರ್ಯ 8

ನರಸಿಂಹ ಗೋಪಾಲ ಕೃಷ್ಣ | ಯಜÕವರಾಹಪಟ್ಟಾಭಿರಾಮನ್ನ | ಬಹುಪರಾಶರ್ಯಾದಿ ರೂಪನ್ನ |ನಿತ್ಯನಿರುತ ಸಂಪೂಜಿಪ ಘನ್ನ | ಅಹವರಭಕ್ತಾಗ್ರಣಿ ನೀನು ಸರಸಿಜಾಸನ ಪಿತ'ಪ್ರಸನ್ನ ಶ್ರೀನಿವಾಸ' ನ್ನೊಲಿಸೋ ಎನಗೆಜೀಯ9 ಪ|| ಸಂಪೂರ್ಣಂ ||
*******

No comments:

Post a Comment