Saturday 14 December 2019

ಕಾಯ ಗತಿ ನೀನೆ ಎನಗೆ ಸಂತತ ankita jagannatha vittala

ಜಗನ್ನಾಥದಾಸರು
ಕಾಯ ಪ

ಗತಿ ನೀನೆ ಎನಗೆ ಸಂತತ ಪರಂಧಾಮಾ ಅ

ಕೃಪಣ ವತ್ಸಲನೆ ಎಮ್ಮಪರಾಧಗಳ ನೋಡಿ
ಕುಪಿತನಾಗುವರೇನೋ ಸುಫಲದಾಯೀ
ನೃಪಗನಿರುದ್ಧ ಬಿನ್ನಪವ ಮಾಡುವೆ ನಿನಗೆ
ಚಪಲ ಚಿತ್ತರಾದ ಕಾಶ್ಯಪಿಸುರರನ ಕಾಯೋ 1

ಮಾನ್ಯಮಾನದನೆ ಬ್ರಹ್ಮಣ್ಯದೇವ ನೀನೆಂದು
ಉನ್ನತ ಶ್ರುತಿಗಳು ಬಣ್ಣಿಸುವುವು
ಸನ್ನುತ ಮಹಿಮನೆ ನಿನ್ನ ಪೊಂದಿದವರ
ಬನ್ನ ಬಡಿಸುವುದು ನಿನಗಿನ್ನು ಧರ್ಮವು ಅಲ್ಲ 2

ಹಲವು ಮಾತುಗಳಾಡಿ ಫಲವೇನು ಬ್ರಾಹ್ಮಣರ
ಕುಲಕೆ ಮಂಗಳವೀಯೋ ಕಲುಷದೂರ
ಸುಲಭ ದೇವೇಶ ನಿನ್ನುಳಿದು ಕಾವರ ಕಾಣೆ
ಬಲಿಯ ಬಾಗಿಲ ಕಾಯ್ದ ಜಗನ್ನಾಥ ವಿಠಲಾ 3
***********

No comments:

Post a Comment