Saturday 4 December 2021

ಸ್ಮರಿಸುವ ನರನೇ ಧನ್ಯ ಸನ್ಮಾನ್ಯ ankita karpara narahari SMARISUVA NARANE DHANYA SANMAANYA APPAVARA STUTIH



" ಶ್ರೀ ಕಾರ್ಪರ ನರಹರಿದಾಸರು "

ಸ್ಮರಿಸುವ ನರನೇ ಧನ್ಯ ಸನ್ಮಾನ್ಯ || ಪ ||

ಸ್ಮರಿಸುವರಿಗೆ ಸುರತರುಕಲ್ಪ । ವಿ ।
ಭರಾಮಪುರದಿ ಶ್ರೀಹರಿ । ಧ್ಯಾನ ।
ಪರ ಶ್ರೀ ಕೃಷ್ಣಾಚಾರ್ಯರ ||ಅ.ಪ ||

ಭರತ ಭೂಮಿಯೊಳವತರಿಸಿ ದೇವಾಂಶದಿ ।
ಪುರುಹೂತನಂತೆ ಗಜಾಂತ ವೈಭವದಿಂದ ।
ಮೆರೆಯುತ ತಮ್ಮಯ ಚರಣಾರಾಧಕರನು- ।
ದ್ದರಿಸಲೋಸುಗದಿ ಸಂಚರಿಸುತ ಮುದದಿ ।।
ಸಂದರುಶನದಿಂಧಾಘವ ಕಳೆದು ಬಲು ।
ಕರುಣದಲಿಷ್ಟಾರ್ಥವ ಗರಿದು ಬಹು ಶರಣು ಜ-।
ನರ ಪೊರೆವ ಭೂಸುರರೊಳು ।
ಮರುತ ಮತಾಬ್ಧಿ ಚಂದಿರನೆನಿಸಿದವರ ।। ಚರಣ ।।

ವರ್ಣಿಸಲೊಶವಲ್ಲ ಚರಣಯುಗ್ಮಾರಭ್ಯ ।
ಶಿರಪರಿಯಂತರ ಗುರುಗಳಾಕೃತಿಯನ್ನು ।
ನಿರುತ ಧ್ಯಾನಿಪರಿಗೆ ಪರಮ ಮಂಗಳವೀವ ।
ಪರಿಶೋಭಿಸುವ ರತ್ನಾಭರಣದಿಂದೋಪ್ಪುವ ।।
ಸ್ವರ್ಣತುಲಸಿ ಮುಕ್ತಹಾರ ಭೂಷಿತ ಕಂಧರ ।
ಸುಂದರವಾದ ಮುಖದೊಳು ಮಂದಸ್ಮಿರ ।
ಕಸ್ತೂರಿಯಂತೆ ಪರಿಮಳಾನ್ವಿತ ಶರೀರ ।
ಮಂತ್ರಾಲಯ ಗುರುರಾಘವೇಂದ್ರರ ಕರುಣಾಸುಪಾತ್ರರ ।। ಚರಣ ।।

ಚಿರಕಾಲ ಶೇವಿಪ ಪರಮ ವಂಧ್ಯರಿಗೆಲ್ಲ ।
ವರಪುತ್ರ ಸೌಖ್ಯವ ಕರುಣಿಸುವರು ಸತ್ಯ ।
ಅಪರಿಮಿತ ಮಹಿಮರೆಂದರಿಯದೆ ಇವರನ್ನು ।
ಜರಿಯಲಾಕ್ಷಣದಲಿ ಅರಿತು ಭೀಕರವಾದ ।।
ಉರಗರೂಪವ ತೋರುತ ತ್ಯಜಿಸಿ ಮತ್ತೆ । ನಿ ।
ಜರೂಪದಿಂದಿರುತ ನೋಳ್ಪರಿಗತ್ಯಾ।
ಶ್ಚರ್ಯ ಸದ್ಗುಣಭರಿತ ಕಾರ್ಪರ ।
ನರಹರಿಯ ಪರೋಕ್ಷದಿ ನಿರುತ ಸುಖಿಪರಂಘ್ರಿ |
*********

ಕಾರ್ಪರ ನರಹರಿದಾಸರು ಶ್ರೀ ಅಪ್ಪಾವರ ಮೇಲೆ ರಚಿಸಿದ ಕೃತಿ


ಸ್ಮರಿಸುವ ನರನೇ ಧನ್ಯ ಸನ್ಮಾನ್ಯ || ಪ ||


ಸ್ಮರಿಸುವರಿಗೆ ಸುರತರುಕಲ್ಪ ವಿಭರಾಮ

ಪುರದಿ ಶ್ರೀಹರಿ ಧ್ಯಾನಪರ ಶ್ರೀ ಕೃಷ್ಣಾಚಾರ್ಯರ ||ಅ.ಪ ||


ಭರತ ಭೂಮಿಯೊಳವತರಿಸಿ ದೇವಾಂಶದಿ

ಪುರುಹೂತನಂತೆ ಗಜಾಂತ ವೈಭವದಿಂದ

ಮೆರೆಯುತ ತಮ್ಮಯ ಚರಣಾರಾಧಕರನು-

ದ್ದರಿಸಲೋಸುಗದಿ ಸಂಚರಿಸುತ ಮುದದಿ

ಸಂದರುಶನದಿಂಧಾಘವ ಕಳೆದು ಬಲು

ಕರುಣದಲಿಷ್ಟಾರ್ಥವ ಗರಿದು ಬಹು ಶರಣು ಜ-

ನರ ಪೊರೆವ ಭೂಸುರರೊಳು ಮರುತ ಮತಾಬ್ಧಿ

ಚಂದಿರನೆನಿಸಿದವರ |


ವರ್ಣಿಸಲೊಶವಲ್ಲ ಚರಣಯುಗ್ಮಾರಭ್ಯ

ಶಿರಪರಿಯಂತರ ಗುರುಗಳಾಕೃತಿಯನ್ನು

ನಿರುತ ಧ್ಯಾನಿಪರಿಗೆ ಪರಮ ಮಂಗಳವೀವ

ಪರಿಶೋಭಿಸುವ ರತ್ನಾಭರಣದಿಂದೋಪ್ಪುವ

ಸ್ವರ್ಣತುಲಸಿ ಮುಕ್ತಹಾರ ಭೂಷಿತ ಕಂಧರ

ಸುಂದರವಾದ ಮುಖದೊಳು ಮಂದಸ್ಮಿರ

ಕಸ್ತೂರಿಯಂತೆ ಪರಿಮಳಾನ್ವಿತ ಶರೀರ

ಮಂತ್ರಾಲಯ ಗುರುರಾಘವೇಂದ್ರರ ಕರುಣಾಸುಪಾತ್ರರ |


ಚಿರಕಾಲ ಶೇವಿಪ ಪರಮ ವಂಧ್ಯರಿಗೆಲ್ಲ

ವರಪುತ್ರ ಸೌಖ್ಯವ ಕರುಣಿಸುವರು ಸತ್ಯ

ಅಪರಿಮಿತ ಮಹಿಮರೆಂದರಿಯದೆ ಇವರನ್ನು

ಜರಿಯಲಾಕ್ಷಣದಲಿ ಅರಿತು ಭೀಕರವಾದ

ಉರಗರೂಪವ ತೋರುತ ತ್ಯಜಿಸಿ ಮತ್ತೆ

ನಿಜರೂಪದಿಂದಿರುತ ನೋಳ್ಪರಿಗತ್ಯಾಶ್ಚರ್ಯ ಸದ್ಗುಣಭರಿತ  ಕಾರ್ಪರ ನರಹರಿಯ ಪರೋಕ್ಷದಿ ನಿರುತ ಸುಖಿಪರಂಘ್ರಿ |

*****

No comments:

Post a Comment