Wednesday 11 December 2019

ಜಯ ಜಯವೆಂದು ಶರಣೆನ್ನಿ ಹನುಮಯ್ಯಗ ankita mahipati JAYAJAYAVENDU SHARANENNI HANUMAYYAGA


ಕಾಖಂಡಕಿ ಶ್ರೀ ಕೃಷ್ಣದಾಸರು

ಜಯಜಯವೆಂದು ಶರಣೆನ್ನಿ ಹನುಮಯ್ಯಗ |
ಜಯ ಭೀಮಶೇನಾನಂದ ತೀರ್ಥರೇಯಗ ಪ

ಆದಿಲಿ ಅಂಜನಿ ಉದರದಲಿ ಬಂದಾ |
ಸಾದರ ರಘುಪತಿ ಸೇವೆಯಲಿ ನಿಂದಾ |
ಶ್ರೀದೇವಿ ಸುದ್ದಿ ಶರಧಿಯ ದಾಟಿ ತಂದಾ |
ಭೇದಿಸಿ ರಾವಣನಾ ದಳವೆಲ್ಲಾ ಕೊಂದಾ 1

ತರಿ ತರಿದೊಟ್ಟದಾ ಕುರುಕುಲಾನ್ವಯ ವೃಂದಾ
ಅರಸ ಯುಧೀಷ್ಠಿರನಾ ವಾಸಿಯ ತಂದಾ2

ಮೂರನೇ ರೂಪದಿ ಮಧ್ಯಗೇಹದಿ ಬಂದಾ
ನೆರೆ ಬಾದರಾಯಣನಾಜ್ಞೆಲಿ ನಿಂದಾ
ವರವರದ್ಹೇಳಿದ ತತ್ಪಾರ್ಥ ಛಂದಾ
ಗುರುವರ ಮಹಿಪತಿ ನಂದನ ಮನಕಾನಂದಾ3
***

ಕಾಖಂಡಕಿ ಶ್ರೀ ಕೃಷ್ಣದಾಸರು

ಜಯಜಯವೆಂದು ಶರಣೆನ್ನಿ ಹನುಮಯ್ಯಗ | ಜಯ ಭೀಮಶೇನಾನಂದ ತೀರ್ಥರೇಯಗ ಪ 


ಆದಿಲಿ ಅಂಜನಿ ಉದರದಲಿ ಬಂದಾ | ಸಾದರ ರಘುಪತಿ ಸೇವೆಯಲಿ ನಿಂದಾ | ಶ್ರೀದೇವಿ ಸುದ್ದಿ ಶರಧಿಯ ದಾಟಿ ತಂದಾ | ಭೇದಿಸಿ ರಾವಣನಾ ದಳವೆಲ್ಲಾ ಕೊಂದಾ 1 

ತರಿ ತರಿದೊಟ್ಟದಾ ಕುರುಕುಲಾನ್ವಯ ವೃಂದಾ ಅರಸ ಯುಧೀಷ್ಠಿರನಾ ವಾಸಿಯ ತಂದಾ2 

ಮೂರನೇ ರೂಪದಿ ಮಧ್ಯಗೇಹದಿ ಬಂದಾ ನೆರೆ ಬಾದರಾಯಣನಾಜ್ಞೆಲಿ ನಿಂದಾ ವರವರದ್ಹೇಳಿದ ತತ್ಪಾರ್ಥ ಛಂದಾ ಗುರುವರ ಮಹಿಪತಿ ನಂದನ ಮನಕಾನಂದಾ3

***


No comments:

Post a Comment