Wednesday 11 December 2019

ನಿಮ್ಮಿಂದ ಗುರು ಪರಮಕಲ್ಯಾಣವು ankita mahipati

ರಾಗ - ಬಹುಳಿ (ಶಂಕರಾ) ಝಪ್ ತಾಳ

ನಿಮ್ಮಿಂದ ಗುರು ಪರಮಕಲ್ಯಾಣವು
ನಿಮ್ಮಿಂದಲೆನಗೆ ಘನ ಪರಿಪೂರ್ಣವು||ಪ||

ಹುರಿದು ಭವಬೀಜ ಧರೆಯೊಳು ದಯ ಕರುಣದಲಿ
ಪರಮ ಆನಂದ ಸುಖ ಮಳೆಯಗರೆದು
ಕರ್ಮಪಾಶಗಳೆಂಬ ಕರಿಕಿಬೇರನು ಕಿತ್ತಿ
ಹರಗಿ ಬಿತ್ತಲು ನಾಮ ತಾರಕುಪದೇಶದಲಿ ||೧||

ವರ ಪ್ರತಾಪದ ಬೆಳೆಯು ತುಂಬಿ ತುಳುಕುವ ಸಿರಿಯು
ಸರ್ವಮಯವೆಂಬ ತೆನೆಗಳು ತುಂಬಿ
ಏರಿ ಸುಷುಮ್ನ ನಾಳದ ಮಂಚಿಕೆಯ ಮೆಟ್ಟಿ
ಪರಿಪರಿ ಅವಸ್ಥೆ ಹಕ್ಕಿಗಳ ಹಾರಿಸಲಾಗಿ ||೨||

ಮುರಿದು ಭೇದಾಬೇದವೆಂಬ ಗೂಡಲೊಟ್ಟಿ
ಅರಿವು ಕಣದಲ್ಲಿ ತರತರದಲಿಕ್ಕಿ
ಜ್ಞಾನವೈರಾಗ್ಯವೆಂಬೆರಡು ಎತ್ತುಗಳ ಹೂಡಿ
ಸರ್ವಗುಣ ತೆನೆ ತೆಗೆದು ತುಳಿದು ರಾಶಿ ಮಾಡಿಸಲಾಗಿ ||೩||

ಸರ್ವಮಯವೆಂಬ ರಾಶಿಯು ಒಬ್ಬುಳಿಯ ಮಾಡಿ
ತೂರಿ ತರ್ಕ ಭಾಸಗಳೆದು
ಮಿಥ್ಯಾ ಪ್ರಪಂಚವೆಂಬ ಕಾಳನು ಕಡೆಮಾಡಿ
ಸಫಲ ಸಹಕಾರದಲಿ ಸುಗ್ಗಿ ಮಾಡಿಸಲಾಗಿ ||೪||

ಏಕೋಬ್ರಹ್ಮದ ಗತಿ ನಿಧಾನ ರಾಶಿಯು ದೋರಿ
ಜನ್ಮ ಮರಣದ ಕೊಯಿಲಿಯ ಸುಟ್ಟು ಉರುಹಿ
ಸದ್ಗತಿ ಮುಕ್ತಿ ಸುಕಾಲ ಸಾಧನವಿತ್ತು
ಮೂಢಮಹಿಪತಿ ಪ್ರಾಣ ಸದ್ಗೈಸಲಾಗಿನ್ನು ||೫|
********

 ನಿಮ್ಮಿಂದ ಗುರು ಪರಮ ಕಲ್ಯಾಣವು ನಿಮ್ಮಿಂದಲೆನಗೆ ಘನ ಪರಿಪೂರ್ಣವು ಪ  


ಹುರಿದು ಭವಬೀಜ ಧರೆಯೊಳುದಯ ಕರುಣದಲಿ ಪರಮ ಆನಂದ ಸುಖ ಮಳೆಯಗರೆದು ಕರ್ಮ ಪಾಶಗಳೆಂಬ ಕರಿಕಿ ಬೇರವು ಕಿತ್ತಿ ಹರಗಿ ಬಿತ್ತಲು ನಾಮ ತಾರಕುಪದೇಶದಲಿ 1 

ತುಂಬಿ ತುಳುಕುವ ಸಿರಿಯು ಸರ್ವಮಯವೆಂಬ ತೆನೆಗಳು ತುಂಬಿ ಏರಿ ಸುಷಮ್ನನಾಳದ ಮಂಚಿಕಿಯ ಮೆಟ್ಟಿ ಪರಿಪರಿ ಅವಸ್ಥೆ ಹಕ್ಕಿಗಳು ಹಾರಿಸಲಾಗಿ2 

ಮುರಿದು ಭೇದಾಭೇದವೆಂಬ ಗೂಡಲೊಟ್ಟಿ ಅರಿವು ಕಣದಲಿ ಥರಥರದಲಿಕ್ಕಿ ಙÁ್ಞನ ವೈರಾಗ್ಯವೆಂಬೆರಡೆತ್ತುಗಳ ಹೂಡಿ ಸರ್ವಗುಣ ತೆನೆ ತೆಗೆದು ತುಳಿದು ರಾಸಿಮಾಡಿಸಲಾಗಿ 3 

ಸರ್ವಮಯವೆಂಬ ರಾಶಿಯು ಒಬ್ಬುಳಿಯ ಮಾಡಿ ತೂರಿ ತರ್ಕ ಭಾಸ ಗಳೆದು ಮಿಥ್ಯಾಪ್ರಪಂಚವೆಂಬ ಕಾಳವು ಕಡೆಮಾಡಿ ಸಫಲ ಸಹಕಾರದಲಿ ಸುಗ್ಗಿ ಮಾಡಿಸಲಾಗಿ 4 

ಏಕೋ ಬ್ರಹ್ಮದ ಗತಿ ನಿಧಾನ ರಾಶಿಯುದೋರಿ ಜನ್ಮ ಮರಣವು ಕೊಯಿಲಿಯ ಸುಟ್ಟು ಉರುಹಿ ಸದ್ಗತಿ ಮುಕ್ತಿ ಸುಕಾಲ ಸಾಧನವಿತ್ತು ಮೂಢ ಮಹಿಪತಿ ಪ್ರಾಣ ಸದ್ಗೈಸಲಾಗಿನ್ನು 5

***


No comments:

Post a Comment