Wednesday 11 December 2019

ಕೃಷ್ಣ ಎಂಥಾದೋ ನಿನ್ನ ಕರುಣಿ ankita mahipati

ಭೈರವಿ ರಾಗ ಧುಮಾಳಿ

ಕೃಷ್ಣ ಎಂಥಾದೋ ನಿನ್ನ ಕರುಣಿ
ಶಿಷ್ಟ ಜನರುದ್ದೇಶ ಬಂದ್ಯೊ ನೀ ಕರುಣಿ
ದುಷ್ಟಜನರ ಮಾಡಿದ್ಯೊ ನೀ ಮರ್ದನಿ
ದೃಷ್ಟಿಸಿ ಮಾಡುವೆ ಸಾಧು ಸಂರಕ್ಷಣಿ ||೧||

ಹುಟ್ಟಿ ವಸುದೇವನಲ್ಲಿ ಬಂದು ಹೊಳೆದ್ಯೊ
ದಿಟ್ಟತನದಲಿ ನಂದಗೋಕುಲದಲಿ ಬೆಳೆದ್ಯೊ
ಮೆಟ್ಟಿ ವಿಷದ ಹಾವಿನ ಹೆಡೆಯ ತುಳಿದ್ಯೊ
ಕುಟ್ಟಿ ಕಂಸಾಸುರನ ಪ್ರಾಣವಳಿದ್ಯೊ ||೨||

ಮೊಲಿಯನುಂಡು ಕೊಂದಿ ಪೂತನಿ ಪ್ರಾಣ
ಕಾಲಿಲೊದ್ದು ಕೊಂದಿ ಶಕಟಾಸುರನ
ಬಾಲತನದಲಿ ಕೆಡಹಿದ್ಯೊ ಮಾವನ
ನೆಲೆಯು ತಿಳಿಯದು ಇನ್ನೊಬ್ಬರಿಗೆ ಪೂರ್ಣ ||೩||

ತುರುಗಳ ಕಾಯ್ದ್ಯೊ ನೀ ಗೋವಿಂದ
ಬೆರಳಲೆತ್ತಿದ್ಯೊ ಗಿರಿಯ ಮುಕುಂದ
ಮರುಳು ಮಾಡಿದ್ಯೊ ಗೋಪಿಕೆಯರ ವೃಂದ
ಹರುಷಗೈಸಿದೆ ಅನೇಕ ಪರಿಯಿಂದ ||೪||

ಹಾಲುಬೆಣ್ಣೆ ಕದ್ದು ತಿಂಬುವ ನಿನ್ನಾಟ
ಬಾಲಗೋಪಾಲರ ಕೂಡಿ ನಿನ್ನೂಟ
ಚೆಲುವ ನಾರೇರ ನೋಡ್ವ ನಿನ್ನ ನೋಟ
ಒಲಿದು ಕುಬ್ಜೆಯ ಬೆನ್ನ ಮಾಡಿದ್ಯೊ ನೀಟ ||೫||

ಗುರುಮಗನ ತಂದುಕೊಟ್ಯೊ ನೀ ಪ್ರಾಣ
ಸುರಬ್ರಹ್ಮಾದಿಗಳರಿಯರು ನಿನ್ನ ತ್ರಾಣ
ಶರಣಾಗತರ ವಜ್ರಪಂಜರ ಪೂರ್ಣ
ವರಮುನಿಗಳಿಗಾಗಿಹೆ ನೀ ನಿಧಾನ ||೬||

ಒಲಿದು ಪಾಂಡವರಿಗಾದಿ ಸಹಕಾರಿ
ಬಲವ ಮುರಿದ್ಯೋ ನೀ ಕೌರವರ ಸಂಹಾರಿ
ಹಲವು ಪರಿ ಆಟ ನಿನ್ನದೊ ಹರಿ
ಸಲಹುತಿಹೆ ಮಹಿಪತಿಗನೇಕ ಪರಿ ||೭||
***********

No comments:

Post a Comment