Thursday 12 December 2019

ಜಾಣತನದ ಮಾತು ಏನು ಕೆಲಸವಯ್ಯ ankita mahipati

ಭೈರವಿ ರಾಗ ಕೇರವಾ ತಾಳ

ಜಾಣತನದ ಮಾತು ಏನು ಕೆಲಸವಯ್ಯ ಖೂನ ನೋಡಿ
ಪ್ರಾಣನಾಯಕನ ತಿಳಿಯುದೊಂದೆ ಜ್ಞಾನಾಭ್ಯಾಸ ಮಾಡಿ ||ಧ್ರುವ||

ಕರಿಮಣಿ ಒಂದಿಲ್ಲದೆ ಹೆಂಗಸಿಗೆ ಸರಮುತ್ತು ಯಾಕೆ
ಸಾರ ಸಂಜೀವನಿಲ್ಲದೆ ನೂರು ಗಿಡಮೂಲಿಕೆ ಯಾಕೆ
ನೆರೆ ಇಲ್ಲದೆ ಸಾಧುಸಜ್ಜನರ ಸರ್ವಬಳಗವ್ಯಾಕೆ
ಪರಮ ತತ್ವಜ್ಞಾನ ಒಂದಿಲ್ಲದೆ ಸುರಿಯುವ ಮಾತಿನ್ನ್ಯಾಕೆ ||೧||

ಪ್ರಾಣವಿಲ್ಲದ ಸುಂದರವಾದ ಶರೀರವ್ಯಾಕೆ
ಖೂನವಿಲ್ಲದೆ ತನ್ನ ನೂರುಕಾಲ ಬದುಕುವದ್ಯಾಕೆ
ಸ್ವಾನುಭವದ ಸುಖ ನೆಲೆಗೊಳ್ಳದೆ ಒಣ ಡಂಭವ್ಯಾಕೆ
ತಾನಾಗಿಹ ವಸ್ತು ದೊರಕಿಲ್ಲದೆ ನಾ ನೀನೆಂಬುವದ್ಯಾಕೆ ||೨||

ಶ್ರೀಹರಿ ಮಹಿಮೆಯ ಸೋಹ್ಯ ತಿಳಿಯದೆ ದೇಹವ್ಯಾಕೆ
ಗುಹ್ಯಗುರುತವಿಲ್ಲದೆ ಸಾಯಸಬಡುವದ್ಯಾಕೆ
ಸಾಹ್ಯಮಾಡುವ ಸದ್ವಸ್ತು ನೋಡದ ಕಣ್ಣು ನೋಟವ್ಯಾಕೆ
ಮಹಿಪತಿಸ್ವಾಮಿ ಸದ್ಗುರುಪಾದ ಕಾಣದ ಜನ್ಮವ್ಯಾಕೆ ||೩||
***

ಕಾಖಂಡಕಿ ಶ್ರೀ ಮಹಿಪತಿರಾಯರು

ಜಾಣತನದ ಮಾತು ಏನು ಕೆಲಸವಯ್ಯ ಖೂನ ನೋಡಿ ಪ್ರಾಣನಾಯಕನ ತಿಳಿವುದೊಂದೆ ಜ್ಞಾನಾಭ್ಯಾಸ ಮಾಡಿ ಪ  


ಕರಿಮಣಿ ಒಂದಿಲ್ಲದೆ ಹೆಂಗಸಿಗೆ ಸರಮುತ್ತು ಯಾಕೆ ಸಾರ ಸಂಜೀವನಿಲ್ಲದೆ ನೂರು ಗಿಡಮೂಲಿಕೆ ಯಾಕೆ ನೆರೆ ಇಲ್ಲದೆ ಸಾಧುಸಜ್ಜನರು ಸರ್ವಬಳಗವ್ಯಾಕೆ ಪರಮ ತತ್ವಜ್ಞಾನ ಒಂದಿಲ್ಲದೆ ಸುರಿಯುವ ಮಾತಿನ್ಯಾಕೆ 1 

ಪ್ರಾಣವಿಲ್ಲದ ಸುಂದರವಾದ ಶರೀರ್ಯಾಕೆ ಕಾಲ ಬದಕುವುವದ್ಯಾಕೆ ಸ್ವಾನುಭವದ ಸುಖ ನೆಲೆಯುಗೊಳ್ಳದೆ ಒಣ ಡಂಭವ್ಯಾಕೆ ತಾನಾಗಿಹ್ಯ ವಸ್ತು ದೊರಕಿಲ್ಲದೆ ನಾ ನೀನೆಂಬುದ್ಯಾಕೆ 2 

ಶ್ರೀ ಹರಿಮಹಿಮೆಯ ಸೋಹ್ಯ ತಿಳಿಯದೆ ದೇಹ್ಯವ್ಯಾಕೆ ಗುಹ್ಯಗುರುತವಿಲ್ಲದೆ ಸಾಯಸಬಡುವದ್ಯಾಕೆ ಸಾಹ್ಯಮಾಡುವ ಸದ್ವಸ್ತು ನೋಡದ ಕಣ್ಣು ನೋಟವ್ಯಾಕೆ ಮಹಿಪತಿಸ್ವಾಮಿ ಸದ್ಗುರುಪಾದ ಕಾಣದ ಜನ್ಮವ್ಯಾಕೆ 3

***

No comments:

Post a Comment