Wednesday 11 December 2019

ಏಕೆ ದೂರುವಿರೇ ರಂಗಯ್ಯನ ankita rangavittala

ಕಲ್ಯಾಣಿ ರಾಗ ಅಟ್ಟತಾಳ/ ತ್ರಿಪುಟ ತಾಳ

ಏಕೆ ದೂರುವಿರೇ ರಂಗಯ್ಯನ
ಏಕೆ ದೂರುವಿರೇ ||ಪ||
ಸಾಕು ನಿಮ್ಮ ದೂರ ಬಲ್ಲೆನು
ಈ ಕುವರನಾ ಕೃತ್ಯ ಮಾಳ್ಪನೆ ||ಅ.ಪ||

ದಟ್ಟಡಿಯಿಡಲರಿಯ ಗೋವತ್ಸವ
ಬಿಟ್ಟು ಚಲಿಸಬಲ್ಲನೆ
ಘಟ್ಟಿಯಾಗಿ ಗೊತ್ತಿನಲ್ಲಿ
ಕಟ್ಟಿನೊಳು ಕಟ್ಟಿದ್ದ ಕರುಗಳ
ಬಿಟ್ಟನೇ ಈಕೃಷ್ಣನ ಮೇ-
ಲೆಷ್ಟು ಹೊಟ್ಟೆಕಿಚ್ಚೆ ನಿಮಗೆ ||೧||

ಕೆನೆಹಾಲು ಬೆಣ್ಣೆಯನು ಇತ್ತರೆ ಆ
ದಿನವೊಲ್ಲನು ಊಟವ
ಮನೆಮನೆಗಳನು ಪೊಕ್ಕು
ಬೆಣ್ಣೆ ಪಾಲ್ಮೊಸರನ್ನು ತಿನ್ನುತ
ವನಿತೆಯರ ಕೂಡಾಡಿದನೆಂ-
ದೆನಲು ನಿಮಗೆ ನಾಚಿಕಿಲ್ಲವೆ ||೨||

ಪಾಲು ಮೊಸರು ಬೆಣ್ಣೆಯು ಇಲ್ಲವೆ ನ-
ಮ್ಮಾಲಯದೊಳು ನೋಡಿರೆ
ಹೇಳುವರೆ ಈ‌ ಠೌಳಿಗಳ ಗೋ-
ಪಾಲಬಾಲನ ನೋಡಿ ಸೈಸದೆ
ಬಾಳುವಿರ ಭವ ಜಲಧಿಯಿಂದಲಿ
ತೇಲಿಸುವನೆ ರಂಗವಿಠಲ ||೩||
*******

No comments:

Post a Comment