Friday 27 December 2019

ಆರಿಗೇತರ ಮೊರೆಯನಿಡಲಿ ankita vasudeva vittala

by ವ್ಯಾಸತತ್ವಜ್ಞರು

ಆರಿಗೇತರ ಮೊರೆಯನಿಡಲಿ
ಸಾರಿದವನ ಪೊರೆವ ಶ್ರೀ ರಮಣ ನೀನಿರಲು
ಬೆಳಸಿಗೊಬ್ಬನ ಕೇಳೆ ಮಳೆಗೆ ಮತ್ತೊಬ್ಬನೆ
ಅಳತೆಗೆ ಇನ್ನೊಬ್ಬನೇ ಹಾಗೆ
ಒಳಿತಿಗೊಬ್ಬರು ದೊರೆಗಳೇ ಮೇಲೆನ್ನ
ಪ್ರಳಯಕ್ಕೆ ಮತ್ತೊಬ್ಬನೇ ಪರಿಪರಿ
ಖಳರ ಮಾತುಗಳೇ ಸ್ವಾಮಿ
ಆ ಕಾಲದಲಿ ನೀನೆ ಈ ಕಾಲದಲಿ ನೀನೆ
ಸಾಕುವನು ಸ್ಥಿರವಾಗಿ ಇನ್ನೊಬ್ಬನೆ
ತಾಕು ತಗಲಿಲ್ಲದನೆ ಬೊಮ್ಮನೆ ಮೊದಲಾದ
ಲೋಕಪತಿಗಳ ಒಡೆಯನೆ ಈ ವೇಳೆ
ಲೋಕರನು ಕಾಯಬೇಕೋ ಸ್ವಾಮಿ
ಕಾಸು ಒಬ್ಬರಿಗಿಲ್ಲ ಲೇಸು ತೋರದಲೇ
ದೇಶಕೊಬ್ಬರು ಪೋದರೋ ಪೊಟ್ಟಿಗೆ
ಕೂಸುಗಳ ಮಾರುತ್ತ ಲುಂಡರೋ ಆ ಜನರ
ಕ್ಲೇಶಪಡೆಸದಲೆ  ಪೊರೆಯೊ ಕರುಣದಲಿ
ವಾಸುದೇವ ವಿಠಲ ಸ್ವಾಮಿ
********


No comments:

Post a Comment