Wednesday 16 October 2019

ಎಲ್ಲಿ ಭಯಗಳು ಹರಿಯ ಭಕುತರಿಗೆ ಇಲ್ಲ ankita vijaya vittala

ಎಲ್ಲಿ ಭಯಗಳು ಹರಿಯ ಭಕುತರಿಗೆ ಇಲ್ಲ
ಇಲ್ಲವೋ ಕಾಣೋ ಎಂದಿಗಾದರು ಮರುಳೆ

ಹುಲಿ ಇಲಿಯಾಗುವುದು ತೋಳ ಕೋಳ್ಯಾಗುವುದು |
ಕಲಿ ಬಂದು ಹಿತ್ತಲನ್ನೀಗ ಬಳಿವ
ಖಳ ಮಹಾಚೋರ ಚೊಚ್ಚಿಲಗೌಡಿ ಮಗನಾಹ
ಜಲಜಾಕ್ಷನ ಕೃಪೆಯ ಪಡೆದ ದಾಸರಿಗೆ ||1||

ಕರಡಿ ಕರುವಾಗುವುದು ಉರಿ ಮಂಜು ಆಗುವುದು |
ಕರಿ ನಾಯಿಯಾಗುವುದು ಕಂಡವರಿಗೆ |
ಭರದಿಂದ ಸುರಿವ ಮಳೆ ನಿಲ್ಲೆನಲು ನಿಲ್ಲುವುದು |
ನರಹರಿಯ ನಾಮಗಳ ನಂಬಿ ಭಜಿಪರಿಗೆ ||2||

ಫಣಿ ಸರಿವೆಯಾಗುವುದು ದಣುವಾಗುತಿಹ ಮಾರ್ಗ |
ಕ್ಷಣದೊಳಗೆ ಪೋದಂತೆ ಕಾಣಿಸುವುದು |
ಘನ ಪಾಷಾಣಗಳು ತೃಣಸಮವು ಎನಿಸುವುವು |
ವನಜಾಕ್ಷನ ಕೃಪೆಯ ಪಡೆದ ದಾಸರಿಗೆ ||3||

ಕ್ಷುಧೆ ತೃಷೆಯಾಗುದು ಕ್ಷುದ್ರ ಸಂಗವಾಗದು |
ಪದೆಪದೆಗೆ ರೋಗಗಳು ಬೆನ್ನಟ್ಟವು |
ಉದಯಾಸ್ತಮಾನಗಳೆಂಬ ಭಯ ಸುಳಿಯದು |
ಪದಮನಾಭನ ಕೃಪೆಯ ಪಡೆದ ದಾಸರಿಗೆ ||4||

ಬಾರವು ಭಯಗಳು ಬಂದರೂ ನಿಲ್ಲವು |
ಹಾರಿ ಹೋಗುವುವು ದಶ ದಿಕ್ಕುಗಳಿಗೆ |
ಘೋರ ದುರಿತಾರಿ ಶ್ರೀ ವಿಜಯವಿಠ್ಠಲನಂಘ್ರಿ |
ಸೇರಿದ ಜನರಿಗೆ ಇನಿತು ಭಯವುಂಟೆ||5||
********

ವಿಜಯದಾಸ
ಯೆಲ್ಲಿ ಭಯಗಳು ಹರಿಯ ಭಕುತರಿಗೆ ಇಲ್ಲಾ |
ಇಲ್ಲವೋ ಕಾಣೋ ಯೆಂದಿಗಾದರು ಮರುಳೆ ಪ

ಹುಲಿ ಇಲಿಯಾಗುವದು ತೋಳ ಕೋಳ್ಯಾಗುವುದು |
ಕಲಿ ಬಂದು ಹಿತ್ತಿಲನ್ನೀಗ ಬಳಿವಾ ||
ಮೂಲ ಮಹಾಚೋರ ಚೊಚ್ಚಿಲ ಗೌಡಿಮಗನಾವಾ |
ಜಲಜಾಕ್ಷನ ಕೃಪೆಯ ಪಡೆದ ದಾಸರಿಗೆ 1

ಕರಡಿ ಕರು ಆಗುವದು ಉರಿ ಮಂಜು ಆಗುವದು |
ಕರಿ ನಾಯಿ ಆಗುವದು ಕಂಡವರಿಗೆ ||
ಭರದಿಂದ ಸುರಿವ ಮಳೆ ನಿಲ್ಲೆನಲು ನಿಲುವದು |
ನರಹರಿಯ ನಾಮಗಳ ನಂಬಿ ಪಠಿಪರಿಗೆ 2

ಘಣಿ ಸರವೆ ಆಗುವದು ದಣುವಾಗುತಿಹ ಮಾರ್ಗ
ಕ್ಷಣದೊಳಗೆ ಪೋದಂತೆ ಕಾಣಿಸುವದು ||
ಘನ ಪಾಷಾಣಗಳು ತೃಣ ಸಮವು ಯೆನಿಸುವವು
ವನಜಾಕ್ಷನ ಕೃಪೆಯ ಪಡದ ದಾಸರಿಗೆ 3

ಕ್ಷುಧೆ ತೃಷೆಯಾಗದು ಕ್ಷುದ್ರ ಸಂಗ ಬಾರದು |
ಪದೇ ಪದೆಗೆ ರೋಗಗಳು ಬೆನ್ನಟ್ಟವು ||
ಉದಯಾಸ್ತಮಾನವೆಂಬೋ ಭಯವು ಸುಳಿಯದು |
ಪದುಮನಾಭನ ಕೃಪೆಯ ಪಡೆದ ದಾಸರಿಗೆ4

ಬಾರವು ಭಯಗಳು ಬಂದರು ನಿಲ್ಲವು |
ಹಾರಿ ಹೋಗುವವು ದಶದಿಶಗಳಿಗೆ ||
ಘೋರ ದುರಿತಾರಿ ಶ್ರೀ ವಿಜಯವಿಠಲನಂಘ್ರಿ |

ಸೇರಿದಾ ಜನರಿಗೆ ಇನಿತಾಹುದುಂಟೇ 5
********

No comments:

Post a Comment