Tuesday 7 December 2021

ಹರಿಯೆಂದು ಮನದಲ್ಲಿ ಮರೆದೊಮ್ಮೆ ನೆನೆದರೆ purandara vittala HARIYENDU MANADALI MAREDOMME NENEDARE



ಪುರಂದರದಾಸರು

ಹರಿಯೆಂದು ಮನದಲ್ಲಿ ಮರೆದೊಮ್ಮೆ ನೆನೆದರೆ
ದುರಿತ ಪರ್ವತಗಳ ಖಂಡಿಪುದು ವಜ್ರದಂತೆ ||ಪ||

ಮೇರುಸುವರ್ಣ ದಾನವ ಮಾಡಲು ನಿತ್ಯ
ನೂರು ಕನ್ಯಾದಾನವ ಮಾಡಲು
ಧಾರಿಣಿಯೆಲ್ಲವ ಧಾರೆಯನೆರೆಯಲು
ನಾರಾಯಣ ಸ್ಮರಣೆಗೆ ಸರಿಯಹುದೆ ||

ಹತ್ತುಲಕ್ಷ ಗೋದಾನ ಮಾಡಲು ಪುಣ್ಯ-
ವ್ರತಗಳ ಅನುದಿನ ಆಚರಿಸಲು
ಶತಕೋಟಿ ಯಜ್ಞವ ಮಾಡಲು ಲಕ್ಷ್ಮೀ-
ಪತಿ ನಾಮಸ್ಮರಣೆಗೆ ಸರಿಯೆನ್ನಬಹುದೆ ||

ಗಂಗೆ ಕಾಳಿಂದಿ ಗೋದಾವರಿ ಕಾವೇರಿ
ತುಂಗಭದ್ರೆಯಲಿ ಸ್ನಾನವ ಮಾಡಲು
ಮಂಗಳ ಮೂರುತಿ ಪುರಂದರವಿಟ್ಠಲ
ರಂಗನ ಸ್ಮರಣೆಗೆ ಸರಿಯೆನ್ನಬಹುದೆ ||
***
ರಾಗ ಬಿಲಹರಿ ತ್ರಿಪುಟ ತಾಳ (raga tala may differ in audio)

ಹರಿಯೆಂದು ಮನದಲ್ಲಿ ಮರೆದೊಮ್ಮೆ ನೆನೆದರೆ |
ದುರಿತಪರ್ವತ ಖಂಡಿಪುದು ವಜ್ರದಂತೆ ಪ.

ಮೇರು ಸುವರ್ಣದಾನವ ಮಾಡಲು ಪುಣ್ಯ |ನೂರು ಕನ್ಯಾದಾನವ ಮಾಡಲು ||ಧಾರಿಣಿಯೆಲ್ಲವ ಧಾರೆಯ ನೆರೆಯಲು ||ನಾರಾಯಣ ಸ್ಮರಣೆಗೆ ಸರಿಬಹುದೆ ? 1

ಹತ್ತುಲಕ್ಷ ಗೋದಾನ ಮಾಡಲು ಪುಣ್ಯ - |ವ್ರತಗಳಅನುದಿನ ಆಚರಿಸಲು ||ಶತಕೋಟಿ ಯಜÕನ ಮಾಡಲು ಲಕ್ಷ್ಮೀ - |ಪತಿನಾಮ ಸ್ಮರಣೆಗೆ ಸರಿಯೆನ್ನಬಹುದೆ 2

ಗಂಗೆ ಕಾಳಿಂದಿ ಗೋದಾವರಿ ಕಾವೇರಿ |ತುಂಗಭದ್ರೆಯಲಿ ಸ್ನಾನವ ಮಾಡೆ ||ಮಂಗಳಮೂರುತಿ ಪುರಂದರವಿಠಲ |ರಂಗನ ಸ್ಮರಣೆಗೆ ಸರಿಯೆನ್ನಬಹುದೆ ? 3
**********

No comments:

Post a Comment