Friday 24 September 2021

ಯಾರೂ ಸಂಗಡ ಬಾಹೋರಿಲ್ಲ ನಾರಾಯಣ purandara vittala YAARU SANGADA BAAHORILLA NARAYANA



ರಾಗ ರೇಗುಪ್ತಿ ಅಟತಾಳ (raga, taala may differ in audio)

ಯಾರೂ ಸಂಗಡ ಬಾಹೋರಿಲ್ಲ
ನಾರಾಯಣನ ನಾಮ ನೆರೆಬಾಹೋದಲ್ಲದೆ ||

ಹೊತ್ತು ನವಮಾಸ ಪರ್ಯಂತವು ಗರ್ಭದಲಿ
ಹೆತ್ತು ಬಲು ನೋವು ಬೇನೆಗಳಿಂದಲಿ
ತುತ್ತು ಬುತ್ತಿಯ ಕೊಟ್ಟು ಸಲಹಿದಂಥಾ ತಾಯಿ
ಅತ್ತು ಕಳಹುವಳಲ್ಲದೆ ನೆರೆ ಬಹಳೆ ||

ದೇವವಿಪ್ರರು ಅಗ್ನಿಸಾಕ್ಷಿಯಿಂದಲಿ ತನ್ನ
ಭಾವಶುದ್ಧದಿ ಧಾರೆಯೆರೆಸಿಕೊಂಡ
ದೇವಿ ತನ್ಸತಿ ತಲೆಗೆ ಕೈಯಿಟ್ಟುಕೊಂಡು ಇ-
ನ್ನಾವ ಗತಿಯೋ ಎಂದು ಅಳುತುಳಿವಳಲ್ಲದೆ ||

ಮತ್ತೆ ಪ್ರಾಣರು ತನುವ ಬಿಟ್ಟು ಹೋಗುವಾಗ
ಎತ್ತಿವನ ಹೊರಗೊಯ್ದು ಹಾಕೆಂಬರು
ಎತ್ತಿದ ಕಸಕಿಂತ ಕಡೆಯಾಯಿತೀ ದೇಹ
ವಿತ್ತವೆಷ್ಟಿದ್ದರು ಫಲವಿಲ್ಲ ಪ್ರಾಣಿ ||

ಪುತ್ರಮಿತ್ರರು ಸಕಲಬಂಧುಗಳು ಸತಿಯರು
ಹತ್ತಿರದೊಳ್ ನಿಂತು ನೋಡುವರಲ್ಲದೆ
ಮೃತ್ಯುದೇವಿಯು ಬಂದು ಪ್ರಾಣವನು ಸೆಳೆವಾಗ
ಜಾತ್ರೆ ಜನರಷ್ಟಿದ್ದು ಏನು ಮಾಡುವರು ||

ಯಮನ ದೂತರು ಬಂದು ಪಾಶವನು ತಗಲ್ಹಾಕಿ
ಮಮತೆಯಿಲ್ಲದೆ ಪ್ರಾಣ ಎಳೆಯುತಿರಲು
ವಿಮುಖನಾಗಿ ತಾನು ವ್ಯಥೆಯಿಂದ ಪೋಪಾಗ
ಕಮಲಾಕ್ಷ ಪುರಂದರವಿಠಲ ನೀನಲ್ಲದೆ ||
*********

ಯಾರೂ ಸಂಗಡ ಬಾಹೋರಿಲ್ಲ ನಾರಾಯಣ ನಿಮ್ಮ ನಾಮವೊಂದಲ್ಲದೆ ಪ.

ಹೊತ್ತು ನವಮಾಸ ಪರಿಯಂತರವು ಗರ್ಭದಲಿಹೆತ್ತು ಬಲು ನೋವು ಬೇನೆಗಳಿಂದಲಿತುತ್ತು ಬುತ್ತಿಯ ಕೊಟ್ಟು ಸಲಹಿದಂಥ ತಾಯಿಅತ್ತು ಕಳುಹುವಳಲ್ಲದೆ ನೆರೆಬಾಹಳೆ 1

ದೇವವಿಪ್ರರು ಅಗ್ನಿಸಾಕ್ಷಿಯಿಂದಲಿ ತನ್ನಭಾವಶುದ್ಧಿಯಲಿ ಧಾರೆಯೆರಿಸಿಕೊಂಡದೇವಿ ತನ್ನ ತಲೆಗೆ ಕೈಯಿಟ್ಟುಕೊಂಡು ಇನ್ನಾವ ಗತಿಯೆಂದೆನುತ ಗೋಳಿಡುವಳಲ್ಲದೆ 2

ಮತ್ತೆ ಪ್ರಾಣನು ತನುವ ಬಿಟ್ಟು ಹೋಗುವಾಗಎತ್ತಿವನ ಹೊರಗೊಯ್ಧ ಹಾಕೆಂಬರುಎತ್ತಿದ ಕಸಕಿಂತ ಕಡೆಯಾಯಿತೀ ದೇಹವಿತ್ತವೆಷ್ಟಿದ್ದರೂ ಫಲವಿಲ್ಲ ಹರಿಯೆ 3

ಪುತ್ರಮಿತ್ರರು ಸಕಲ ಬಂಧು ಬಳಗಗಳೆಲ್ಲಹತ್ತಿರ ನಿಂತು ನೋಡುವರಲ್ಲದೆಮೃತ್ಯುದೇವಿಯ ಬಂದು ಅಸುಗಳನು ಸೆಳೆವಾಗಮತ್ತೆ ತನ್ನವರಿದ್ದು ಏನು ಮಾಡುವರು 4

ಯಮನ ದೂತರು ಬಂದು ಪಾಶಂಗಳನೆ ಎಸೆದುಮಮತೆಯಿಲ್ಲದೆ ಪ್ರಾಣ ಎಳೆಯುತಿರಲುವಿಮುಖನಾಗಿ ತಾನು ವ್ಯಥೆಯಿಂದ ಪೋಪಾಗಕಮಲಾಕ್ಷ ಪುರಂದರವಿಠಲ ನೀನಲ್ಲದೆ 5
********

No comments:

Post a Comment