Tuesday 8 December 2020

ಹರಿಕಥಾಮೃತಸಾರ ಸಂಧಿ 10 ankita jagannatha vittala ಸರ್ವಪ್ರತೀಕ ಸಂಧಿ HARIKATHAMRUTASARA SANDHI 10 SARVAPRATEEKA SANDHI

 


Audio by Mrs. Nandini Sripad


ರಚನೆ : ಶ್ರೀ ಜಗನ್ನಾಥ ದಾಸರು 
for saahitya click   ಹರಿಕಥಾಮೃತಸಾರ ಸಂಧಿ 1 to 32  


 ಸರ್ವಪ್ರತೀಕ (ಸರ್ವಸಮರ್ಪಣ) ಸಂಧಿ 10
"ಆವ ಪರಬೊಮ್ಮನತಿವಿಮಲಾಂಗಾವ ಬದ್ಧರು " ,
ಶ್ರೀಜಗನ್ನಾಥದಾಸಾರ್ಯ ವಿರಚಿತ ಹರಿಕಥಾಮೃತಸಾರ , 
ರಾಗ ಬೃಂದಾವನಸಾರಂಗ

ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ
ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು||

ಆವ ಪರಬೊಮ್ಮನ ಅತಿವಿಮಲ ಅಂಗಾವ ಬದ್ಧರು ಎಂದೆನಿಪ
ರಾಜೀವಭವ ಮೊದಲಾದ ಅಮರರು ಅನುದಿನದಿ ಹರಿಪದವ ಸೇವಿಪರಿಗೆ
ಅನುಕೂಲರಲ್ಲದೆ ತಾವು ಇವರನು ಕೆಡಿಸಬಲ್ಲರೆ
ಶ್ರೀವಿಲಾಸಾಸ್ಪದನ ದಾಸರಿಗೆ ಉಂಟೆ ಅಪಜಯವು||1||

ಶ್ರೀದನ ಅಂಘ್ರಿ ಸರೋಜಯುಗಳ ಏಕಾದಶ ಸ್ಥಾನ ಆತ್ಮದೊಳಗಿಟ್ಟು
ಆದರದಿ ಸಂತುತಿಸಿ ಹಿಗ್ಗುವರಿಗೆ ಈ ನವಗ್ರಹವು
ಆದಿತೇಯರು ಸಂತತಾಧಿ ವ್ಯಾಧಿಗಳ ಪರಿಹರಿಸುತ ಅವರನ
ಕಾದುಕೊಂಡಿಹರು ಎಲ್ಲರೊಂದಾಗಿ ಈಶನ ಆಜ್ಞೆಯಲಿ||2||

ಮೇದಿನಿಯ ಮೇಲುಳ್ಳ ಗೋಷ್ಪಾದ ಉದಕಗಳು ಎಲ್ಲ ಆಮಲ ತೀರ್ಥವು
ಪಾದಪಾದ್ರಿ ಧರಾತಳವೆ ಸುಕ್ಷೇತ್ರ ಜೀವಗಣ ಶ್ರೀದನ ಪ್ರತಿಮೆಗಳು
ಅವರುಂಬ ಓದನವೇ ನೈವೇದ್ಯ
ನಿತ್ಯದಿ ಹಾದಿ ನಡೆವುದೇ ನರ್ತನಗಳು ಎಂದರಿತವನೆ ಯೋಗಿ||3||

ಸರ್ವ ದೇಶವು ಪುಣ್ಯ ದೇಶವು ಸರ್ವ ಕಾಲವು ಪರ್ವ ಕಾಲವು
ಸರ್ವ ಜೀವರು ದಾನ ಪಾತ್ರರು ಮೂರು ಲೋಕದೊಳು
ಸರ್ವ ಮಾತುಗಳು ಎಲ್ಲ ಮಂತ್ರವು ಸರ್ವ ಕೆಲಸಗಳು ಎಲ್ಲ ಪೂಜೆಯು
ಶರ್ವ ವಂದ್ಯನ ವಿಮಲ ಮೂರ್ತಿ ಧ್ಯಾನವುಳ್ಳವಗೆ||4||

ದೇವಖಾತ ತಟಾಕವಾಪಿ ಸರೋವರಗಳ ಅಭಿಮಾನಿ ಸುರರು
ಕಳೇವರದೊಳಗಿಹ ರೋಮ ಕೂಪಗಳೊಳಗೆ ತುಂಬಿಹರು
ಆ ವಿಯತ್ಗಂಗಾದಿ ನದಿಗಳು ಭಾವಿಸುವುದು ಎಪ್ಪತ್ತೆರಡೆನಿಪ ಸಾವಿರ
ಸುನಾಡಿಗಳೊಳಗೆ ಪ್ರವಹಿಸುತಲಿಹವು ಎಂದು||5||

ಮೂರು ಕೋಟಿಯ ಮೇಲೆ ಶೋಭಿಪ ಈರು ಅಧಿಕ ಎಪ್ಪತ್ತು ಸಾವಿರ
ಮಾರುತ ಅಂತರ್ಯಾಮಿ ಮಾಧವ ಪ್ರತಿ ದಿವಸದಲ್ಲಿ ತಾ ರಮಿಸುತಿಹನೆಂದು
ತಿಳಿದಿಹ ಸೂರಿಗಳು ದೇವತೆಗಳು
ಅವರ ಶರೀರವೇ ಸುಕ್ಷೇತ್ರ ಅವರ ಅರ್ಚನೆಯೇ ಹರಿಪೂಜೆ||6||

ಶ್ರೀವರನಿಗೆ ಅಭಿಷೇಕವೆಂದರಿದು ಈ ವಸುಂಧರೆಯೊಳಗೆ ಬಲ್ಲವರು
ಆವ ಜಲದಲಿ ಮಿಂದರೆಯು ಗಂಗಾದಿ ತೀರ್ಥಗಳು ತಾ ಒಲಿದು ಬಂದಲ್ಲಿ
ನೆಲೆಗೊಂಡು ಈವರು ಅಖಿಳಾರ್ಥಗಳನು
ಅರಿಯದ ಜೀವರು ಅಮರ ತರಂಗಿಣಿಯನು ಐದಿದರು ಫಲವೇನು||7||

ನದನದಿಗಳು ಇಳೆಯೊಳಗೆ ಪರಿವವು ಉದಧಿ ಪರಿಯಂತರದಿ
ತರುವಾಯದಲಿ ರಮಿಸುವವು ಅಲ್ಲಿ ತನ್ಮಯವಾಗಿ ತೋರದಲೆ
ವಿಧಿ ನಿಷೇಧಗಳು ಆಚರಿಸುವರು ಬುಧರು
ಭಗವದ್ರೂಪ ಸರ್ವತ್ರದಲಿ ಚಿಂತನೆ ಬರಲು ತ್ಯಜಿಸುವರು ಅಖಿಳ ಕರ್ಮಗಳ||8||

ಕಲಿಯೆ ಮೊದಲಾದ ಅಖಿಳ ದಾನವರೊಳಗೆ
ಬ್ರಹ್ಮ ಭವಾದಿ ದೇವರ್ಕಳು ನಿಯಾಮಕರಾಗಿ ಹರಿಯಾಜ್ಞೆಯಲಿ
ಅವರವರ ಕಲುಷ ಕರ್ಮವ ಮಾಡಿ ಮಾಡಿಸಿ
ಜಲರುಹೇಕ್ಷಣಗೆ ಅರ್ಪಿಸುತ ನಿಶ್ಚಲ ಸುಭಕ್ತಿ ಜ್ಞಾನ ಪೂರ್ಣರು ಸುಖಿಪರು ಅವರೊಳಗೆ||9||

ಆವ ಜೀವರೊಳಿದ್ದರೇನು? ಇನ್ನಾವ ಕರ್ಮವ ಮಾಡಲೇನು?
ಇನ್ನಾವ ಗುಣ ರೂಪಗಳ ಉಪಾಸನೆ ಮಾಡಲೇನವರು?
ಕಾವನಯ್ಯನ ಪರಮ ಕಾರುಣ್ಯ ಅವಲೋಕನ ಬಲದಿ ಚರಿಸುವ
ದೇವತೆಗಳನು ಮುಟ್ಟಲು ಆಪವೆ ಪಾಪ ಕರ್ಮಗಳು||10||

ಪತಿಯೊಡನೆ ಮನಬಂದ ತೆರದಲಿ ಪ್ರತಿ ದಿವಸದಲಿ ರಮಿಸಿ ಮೋದಿಸಿ
ಸುತರ ಪಡೆದು ಇಳೆಯೊಳು ಜಿತ ಇಂದ್ರಿಯಳು ಎಂದು ಕರೆಸುವಳು
ಕೃತಿ ಪತಿ ಕಥಾಮೃತ ಸುಭೋಜನ ರತ ಮಹಾತ್ಮರಿಗೆ
ಇತರ ದೋಷ ಪ್ರತತಿಗಳು ಸಂಬಂಧಿಸುವವೇನು ಅಚ್ಯುತನ ದಾಸರಿಗೆ||11||

ಸೂಸಿಬಹ ನದಿಯೊಳಗೆ ತನ್ನ ಸಹಾಸ ತೋರುವೆನೆನುತ
ಜಲಕೆದುರು ಈಸಿದರೆ ಕೈಸೋತು ಮುಳುಗುವ
ಹರಿಯ ಬಿಟ್ಟವನು ಕ್ಲೇಶವೈದುವ ಅನಾದಿಯಲಿ ಸಾರ್ವೇಶ ಕ್ಲುಪ್ತಿಯ ಮಾಡಿದುದ ಬಿಟ್ಟು
ಆಶೆಯಿಂದಲಿ ಅನ್ಯರ ಆರಾಧಿಸುವ ಮಾನವನು||12||

ನಾನು ನನ್ನದು ಎಂಬ ಜಡಮತಿ ಮಾನವನು ದಿನದಿನದಿ ಮಾಡುವ
ಸ್ನಾನ ಜಪ ದೇವಾರ್ಚನೆಯೇ ಮೊದಲಾದ ಕರ್ಮಗಳ
ದಾನವರು ಸೆಳೆದೊಯ್ವರಲ್ಲದೆ ಶ್ರೀನಿವಾಸನು ಸ್ವೀಕರಿಸ
ಮದ್ದಾನೆ ಪಕ್ವ ಕಪಿತ್ಥ ಫಲ ಭಕ್ಷಿಸಿದ ವೋಲಹುದು||13||

ಧಾತ್ರಿಯೊಳಗುಳ್ಳ ಅಖಿಳ ತೀರ್ಥಕ್ಷೇತ್ರ ಚರಿಸಿದರೇನು
ಪಾತ್ರಾಪಾತ್ರವರಿತು ಅನ್ನಾದಿ ದಾನವ ಮಾಡಿ ಫಲವೇನು
ಗಾತ್ರ ನಿರ್ಮಲನಾಗಿ ಮಂತ್ರ ಸ್ತೋತ್ರ ಪಠಿಸಿದರು ಏನು
ಹರಿ ಸರ್ವತ್ರಗತನು ಎಂದರಿಯದೆ ತಾ ಕರ್ತೃ ಎಂಬುವನು||14||

ಕಂಡ ನೀರೊಳು ಮುಳುಗಿ ದೇಹವ ದಂಡಿಸಿದ ಫಲವೇನು
ದಂಡ ಕಮಂಡಲoಗಳ ಧರಿಸಿ ಯತಿಯೆಂದೆನಿಸಿ ಫಲವೇನು
ಅಂಡಜಾಧಿಪನು ಅಂಸಗನ ಪದ ಪುಂಡರೀಕದಿ ಮನವಹರ್ನಿಶಿ
ಬಂಡುಣಿಯವೋಲ್ ಇರಿಸಿ ಸುಖಪಡದೆ ಇಪ್ಪ ಮಾನವನು||15||

ವೇದ ಶಾಸ್ತ್ರ ಪುರಾಣ ಕಥೆಗಳ ಓದಿ ಪೇಳಿದರೇನು
ಸಕಲ ನಿಷೇಧ ಕರ್ಮಗಳ ತೊರೆದು ಸತ್ಕರ್ಮಗಳ ಮಾಡಿ ಏನು
ಓದನಂಗಳ ಜರಿದು ಶ್ವಾಸ ನಿರೋಧಗೈಸಿದರೇನು
ಕಾಮ ಕ್ರೋಧವ ಅಳಿಯದೆ ನಾನು ನನ್ನದೆಂಬ ಮಾನವನು||16||

ಏನು ಕೇಳಿದರೇನು ನೋಡಿದರೇನು ಓದಿದರೇನು
ಪೇಳಿದರೇನು ಪಾಡಿದರೇನು ಮಾಡಿದರೇನು ದಿನದಿನದಿ
ಶ್ರೀನಿವಾಸನ ಜನ್ಮ ಕರ್ಮ ಸದಾ ಅನುರಾಗದಿ ನೆನೆದು
ತತ್ತತ್ ಸ್ಥಾನದಲಿ ತದ್ರೂಪ ತನ್ನಾಮಕನ ಸ್ಮರಿಸದವ||17||

ಬುದ್ಧಿ ವಿದ್ಯಾಬಲದಿ ಪೇಳಿದ ಅಶುದ್ಧ ಕಾವ್ಯವು ಇದಲ್ಲ
ತತ್ವ ಸುಪದ್ಧತಿಗಳನು ತಿಳಿದ ಮಾನವನು ಅಲ್ಲ ಬುಧರಿಂದ
ಮಧ್ವ ವಲ್ಲಭ ತಾನೇ ಹೃದಯದೊಳು ಇದ್ದು ನುಡಿದಂದದಲಿ ನುಡಿದೆನು
ಅಪದ್ಧಗಳ ನೋಡದಲೆ ಕಿವಿಗೊಟ್ಟು ಆಲಿಪುದು ಬುಧರು||18||

ಕಬ್ಬಿನೊಳಗಿಹ ರಸ ವಿದಂತಿಗೆ ಅಬ್ಬು ಬಲ್ಲುದೆ
ಭಾಗ್ಯ ಯೌವನ ಮಬ್ಬಿನಲಿ ಮೈ ಮರೆದವಗೆ ಹರಿ ಸುಚರಿತಾಮೃತವು ಲಭ್ಯವಾಗದು
ಹರಿಪದಾಬ್ಜದಿ ಹಬ್ಬಿದ ಅತಿ ಸದ್ಭಕ್ತಿ ರಸ
ಉಂಡು ಉಬ್ಬಿ ಕೊಬ್ಬಿ ಸುಖಾಬ್ಧಿಯೊಳಗೆ ಆಡುವವಗೆ ಅಲ್ಲದಲೆ||19||

ಖಗವರಧ್ವಜನ ಅಂಘ್ರಿ ಭಕುತಿಯ ಬಗೆಯನು ಅರಿಯದ ಮಾನವರಿಗಿದು
ಒಗಟಿನಂದದಿ ತೋರುತಿಪ್ಪದು ಎಲ್ಲ ಕಾಲದಲಿ
ತ್ರಿಗುಣ ವರ್ಜಿತನ ಅಮಲ ಗುಣಗಳ ಪೊಗಳಿ ಹಿಗ್ಗುವ ಭಾಗವತರಿಗೆ
ಮಿಗೆ ಭಕುತಿ ವಿಜ್ಞಾನ ಸುಖವಿತ್ತು ಅವರ ರಕ್ಷಿಪುದು||20||

ಪರಮ ತತ್ವ ರಹಸ್ಯವು ಇದು ಭೂಸುರರು ಕೇಳುವುದು ಸಾದರದಿ
ನಿಷ್ಠುರಿಗಳಿಗೆ ಮೂಢರಿಗೆ ಪಂಡಿತ ಮಾನಿ ಪಿಶುನರಿಗೆ
ಅರಸಿಕರಿಗೆ ಇದು ಪೇಳ್ವುದಲ್ಲ ಅನವರತ ಭಗವತ್ಪಾದ
ಯುಗಳ ಅಂಬುರುಹ ಮಧುಕರನು ಎನಿಸುವವರಿಗೆ ಇದನು ಅರುಪು ಮೋದದಲಿ||21||

ಲೋಕವಾರ್ತೆಯಿ ದಲ್ಲ ಪರಲೋ ಕೈಕನಾಥನ ವಾರ್ತೆ ಕೇಳ್ವರೆ |
ಕಾಕು ಮನುಜರಿ ಗಿದು ಸಮರ್ಪಕ ವಾಗಿ ಸೊಗಸುವುದೆ ||
ಕೋಕನದ ಪರಿ ಮಳವು ಷಟ್ಪದ ಸ್ವೀಕರಿಸುವಂ ದದಲಿ
ಜಲಚರ ಭೇಕ ಬಲ್ಲದೆ ಇದರ ರಸ ಹರಿ ಭಕ್ತಗಲ್ಲದಲೆ||22||

ಸ್ವಪ್ರಯೋಜನರಹಿತ ಸಕಲೇಷ್ಟ ಪ್ರದಾಯಕ ಸರ್ವಗುಣ ಪೂರ್ಣ ಪ್ರಮೇಯ
ಜರಾಮರಣ ವರ್ಜಿತ ವಿಗತ ಕ್ಲೇಶ ವಿಪ್ರತಮ ವಿಶ್ವಾತ್ಮ
ಘ್ರುಣಿ ಸೂರ್ಯ ಪ್ರಕಾಶ ಅನಂತ ಮಹಿಮ
ಘೃತ ಪ್ರತೀಕ ಆರಾಧಿತ ಅಂಘ್ರಿ ಸರೋಜ ಸುರರಾಜ||23||

ವನಚರ ಅದ್ರಿ ಧರಾ ಧರನೆ ಜಯ ಮನುಜ ಮೃಗವರ ವೇಷ ಜಯ
ವಾಮನ ತ್ರಿವಿಕ್ರಮ ದೇವ ಜಯ ಭೃಗು ರಾಮ ಭೂಮ ಜಯ
ಜನಕಜಾ ವಲ್ಲಭನೆ ಜಯ ರುಗ್ಮಿಣಿ ಮನೋರಥ ಸಿದ್ಧಿದಾಯಕ
ಜಿನ ವಿಮೋಹಕ ಕಲಿವಿದಾರಣ ಜಯ ಜಯಾರಮಣ||24||

ಸಚ್ಚಿದಾನಂದಾತ್ಮ ಬ್ರಹ್ಮ ಕರಾರ್ಚಿತ ಅಂಘ್ರಿ ಸರೋಜ
ಸುಮನಸ ಪ್ರೋಚ್ಚ ಸನ್ಮಂಗಳದ ಮಧ್ವ ಅಂತಃಕರಣರೂಢ
ಅಚ್ಯುತ ಜಗನ್ನಾಥ ವಿಠಲ ನಿಚ್ಚ ನೆಚ್ಚಿದ ಜನರ ಬಿಡ
ಕಾಡ್ಗಿಚ್ಚನು ಉಂಡು ಅರಣ್ಯದೊಳು ಗೋ ಗೋಪರನು ಕಾಯ್ದ||25||
********

harikathAmRutasAra gurugaLa karuNadindApanitu kELuve
parama BagavadBaktaru idanAdaradi kELuvudu||

Ava parabommana ativimala angAva baddharu endenipa
rAjIvaBava modalAda amararu anudinadi haripadava sEviparige
anukUlarallade tAvu ivaranu keDisaballare
SrIvilAsAspadana dAsarige unTe apajayavu||1||

SrIdana anGri sarOjayugaLa EkAdaSa sthAna AtmadoLagiTTu
Adaradi santutisi higguvarige I navagrahavu
AditEyaru santatAdhi vyAdhigaLa pariharisuta avarana
kAdukonDiharu ellarondAgi ISana Aj~jeyali||2||

mEdiniya mEluLLa gOShpAda udakagaLu ella Amala tIrthavu
pAdapAdri dharAtaLave sukShEtra jIvagaNa SrIdana pratimegaLu
avaruMba OdanavE naivEdya
nityadi hAdi naDevudE nartanagaLu endaritavane yOgi||3||

sarva dESavu puNya dESavu sarva kAlavu parva kAlavu
sarva jIvaru dAna pAtraru mUru lOkadoLu
sarva mAtugaLu ella mantravu sarva kelasagaLu ella pUjeyu
Sarva vandyana vimala mUrti dhyAnavuLLavage||4||

dEvaKAta taTAkavApi sarOvaragaLa aBimAni suraru
kaLEvaradoLagiha rOma kUpagaLoLage tuMbiharu
A viyatgangAdi nadigaLu BAvisuvudu eppatteraDenipa sAvira
sunADigaLoLage pravahisutalihavu endu||5||

mUru kOTiya mEle SOBipa Iru adhika eppattu sAvira
mAruta antaryAmi mAdhava prati divasadalli tA ramisutihanendu
tiLidiha sUrigaLu dEvategaLu
avara SarIravE sukShEtra avara arcaneyE haripUje||6||

SrIvaranige aBiShEkavendaridu I vasundhareyoLage ballavaru
Ava jaladali miMdareyu gangAdi tIrthagaLu tA olidu bandalli
nelegonDu Ivaru aKiLArthagaLanu
ariyada jIvaru amara tarangiNiyanu aididaru PalavEnu||7||

nadanadigaLu iLeyoLage parivavu udadhi pariyantaradi
taruvAyadali ramisuvavu alli tanmayavAgi tOradale
vidhi niShEdhagaLu Acarisuvaru budharu
BagavadrUpa sarvatradali cintane baralu tyajisuvaru aKiLa karmagaLa||8||

kaliye modalAda aKiLa dAnavaroLage
brahma BavAdi dEvarkaLu niyAmakarAgi hariyAj~jeyali
avaravara kaluSha karmava mADi mADisi
jalaruhEkShaNage arpisuta niScala suBakti j~jAna pUrNaru suKiparu avaroLage||9||

Ava jIvaroLiddarEnu? innAva karmava mADalEnu?
innAva guNa rUpagaLa upAsane mADalEnavaru?
kAvanayyana parama kAruNya avalOkana baladi carisuva
dEvategaLanu muTTalu Apave pApa karmagaLu||10||

patiyoDane manabanda teradali prati divasadali ramisi mOdisi
sutara paDedu iLeyoLu jita indriyaLu endu karesuvaLu
kRuti pati kathAmRuta suBOjana rata mahAtmarige
itara dOSha pratatigaLu saMbaMdhisuvavEnu acyutana dAsarige||11||

sUsibaha nadiyoLage tanna sahAsa tOruvenenuta
jalakeduru Isidare kaisOtu muLuguva
hariya biTTavanu klESavaiduva anAdiyali sArvESa kluptiya mADiduda biTTu
ASeyindali anyara ArAdhisuva mAnavanu||12||

nAnu nannadu eMba jaDamati mAnavanu dinadinadi mADuva
snAna japa dEvArcaneyE modalAda karmagaLa
dAnavaru seLedoyvarallade SrInivAsanu svIkarisa
maddAne pakva kapittha Pala BakShisida vOlahudu||13||

dhAtriyoLaguLLa aKiLa tIrthakShEtra carisidarEnu
pAtrApAtravaritu annAdi dAnava mADi PalavEnu
gAtra nirmalanAgi mantra stOtra paThisidaru Enu
hari sarvatragatanu eMdariyade tA kartRu eMbuvanu||14||

kanDa nIroLu muLugi dEhava danDisida PalavEnu
danDa kamanDalaogaLa dharisi yatiyendenisi PalavEnu
anDajAdhipanu aMsagana pada punDarIkadi manavaharniSi
banDuNiyavOl irisi suKapaDade ippa mAnavanu||15||

vEda SAstra purANa kathegaLa Odi pELidarEnu
sakala niShEdha karmagaLa toredu satkarmagaLa mADi Enu
OdanangaLa jaridu SvAsa nirOdhagaisidarEnu
kAma krOdhava aLiyade nAnu nannadeMba mAnavanu||16||

Enu kELidarEnu nODidarEnu OdidarEnu
pELidarEnu pADidarEnu mADidarEnu dinadinadi
SrInivAsana janma karma sadA anurAgadi nenedu
tattat sthAnadali tadrUpa tannAmakana smarisadava||17||

buddhi vidyAbaladi pELida aSuddha kAvyavu idalla
tatva supaddhatigaLanu tiLida mAnavanu alla budharinda
madhva vallaBa tAnE hRudayadoLu iddu nuDidaMdadali nuDidenu
apaddhagaLa nODadale kivigoTTu Alipudu budharu||18||

kabbinoLagiha rasa vidantige abbu ballude
BAgya yauvana mabbinali mai maredavage hari sucaritAmRutavu laByavAgadu
haripadAbjadi habbida ati sadBakti rasa
uMDu ubbi kobbi suKAbdhiyoLage ADuvavage alladale||19||

Kagavaradhvajana anGri Bakutiya bageyanu ariyada mAnavarigidu
ogaTinandadi tOrutippadu ella kAladali
triguNa varjitana amala guNagaLa pogaLi higguva BAgavatarige
mige Bakuti vij~jAna suKavittu avara rakShipudu||20||

parama tatva rahasyavu idu BUsuraru kELuvudu sAdaradi
niShThurigaLige mUDharige panDita mAni piSunarige
arasikarige idu pELvudalla anavarata BagavatpAda
yugaLa aMburuha madhukaranu enisuvavarige idanu arupu mOdadali||21||

lOkavArteyi dalla paralO kaikanAthana vArte kELvare |
kAku manujari gidu samarpaka vAgi sogasuvude ||
kOkanada pari maLavu ShaTpada svIkarisuvaM dadali
jalacara BEka ballade idara rasa hari Baktagalladale||22||

svaprayOjanarahita sakalEShTa pradAyaka sarvaguNa pUrNa pramEya
jarAmaraNa varjita vigata klESa vipratama viSvAtma
GruNi sUrya prakASa ananta mahima
GRuta pratIka ArAdhita anGri sarOja surarAja||23||

vanacara adri dharA dharane jaya manuja mRugavara vESha jaya
vAmana trivikrama dEva jaya BRugu rAma BUma jaya
janakajA vallaBane jaya rugmiNi manOratha siddhidAyaka
jina vimOhaka kalividAraNa jaya jayAramaNa||24||

saccidAnandAtma brahma karArcita anGri sarOja
sumanasa prOcca sanmangaLada madhva antaHkaraNarUDha
acyuta jagannAtha viThala nicca neccida janara biDa
kADgiccanu unDu araNyadoLu gO gOparanu kAyda||25||
************

ಸರ್ವಪ್ರತೀಕ ಸಂಧಿ -10

ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ/
ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು//

ಆವ ಪರಬೊಮ್ಮನ ಅತಿವಿಮಲ ಅಂಗಾವ ಬದ್ಧರು ಎಂದೆನಿಪ
ರಾಜೀವಭವ ಮೊದಲಾದ ಅಮರರು ಅನುದಿನದಿ ಹರಿಪದವ ಸೇವಿಪರಿಗೆ
ಅನುಕೂಲರಲ್ಲದೆ ತಾವು ಇವರನು ಕೆಡಿಸಬಲ್ಲರೆ
ಶ್ರೀವಿಲಾಸಾಸ್ಪದನ ದಾಸರಿಗೆ ಉಂಟೆ ಅಪಜಯವು//1//

ಶ್ರೀದನ ಅಂಘ್ರಿ ಸರೋಜಯುಗಳ ಏಕಾದಶ ಸ್ಥಾನ ಆತ್ಮದೊಳಗಿಟ್ಟು
ಆದರದಿ ಸಂತುತಿಸಿ ಹಿಗ್ಗುವರಿಗೆ ಈ ನವಗ್ರಹವು
ಆದಿತೇಯರು ಸಂತತಾಧಿ ವ್ಯಾಧಿಗಳ ಪರಿಹರಿಸುತ ಅವರನ
ಕಾದುಕೊಂಡಿಹರು ಎಲ್ಲರೊಂದಾಗಿ ಈಶನ ಆಜ್ಞೆಯಲಿ//2//

ಮೇದಿನಿಯ ಮೇಲುಳ್ಳ ಗೋಷ್ಪಾದ ಉದಕಗಳು ಎಲ್ಲ ಆಮಲ ತೀರ್ಥವು
ಪಾದಪಾದ್ರಿ ಧರಾತಳವೆ ಸುಕ್ಷೇತ್ರ ಜೀವಗಣ ಶ್ರೀದನ ಪ್ರತಿಮೆಗಳು
ಅವರುಂಬ ಓದನವೇ ನೈವೇದ್ಯ
ನಿತ್ಯದಿ ಹಾದಿ ನಡೆವುದೇ ನರ್ತನಗಳು ಎಂದರಿತವನೆ ಯೋಗಿ//3//

ಸರ್ವ ದೇಶವು ಪುಣ್ಯ ದೇಶವು ಸರ್ವ ಕಾಲವು ಪರ್ವ ಕಾಲವು
ಸರ್ವ ಜೀವರು ದಾನ ಪಾತ್ರರು ಮೂರು ಲೋಕದೊಳು
ಸರ್ವ ಮಾತುಗಳು ಎಲ್ಲ ಮಂತ್ರವು ಸರ್ವ ಕೆಲಸಗಳು ಎಲ್ಲ ಪೂಜೆಯು
ಶರ್ವ ವಂದ್ಯನ ವಿಮಲ ಮೂರ್ತಿ ಧ್ಯಾನವುಳ್ಳವಗೆ//4//

ದೇವಖಾತ ತಟಾಕವಾಪಿ ಸರೋವರಗಳ ಅಭಿಮಾನಿ ಸುರರು
ಕಳೇವರದೊಳಗಿಹ ರೋಮ ಕೂಪಗಳೊಳಗೆ ತುಂಬಿಹರು
ಆ ವಿಯತ್ಗಂಗಾದಿ ನದಿಗಳು ಭಾವಿಸುವುದು ಎಪ್ಪತ್ತೆರಡೆನಿಪ ಸಾವಿರ
ಸುನಾಡಿಗಳೊಳಗೆ ಪ್ರವಹಿಸುತಲಿಹವು ಎಂದು//5//

ಮೂರು ಕೋಟಿಯ ಮೇಲೆ ಶೋಭಿಪ ಈರು ಅಧಿಕ ಎಪ್ಪತ್ತು ಸಾವಿರ
ಮಾರುತ ಅಂತರ್ಯಾಮಿ ಮಾಧವ ಪ್ರತಿ ದಿವಸದಲ್ಲಿ ತಾ ರಮಿಸುತಿಹನೆಂದು
ತಿಳಿದಿಹ ಸೂರಿಗಳು ದೇವತೆಗಳು
ಅವರ ಶರೀರವೇ ಸುಕ್ಷೇತ್ರ ಅವರ ಅರ್ಚನೆಯೇ ಹರಿಪೂಜೆ//6//

ಶ್ರೀವರನಿಗೆ ಅಭಿಷೇಕವೆಂದರಿದು ಈ ವಸುಂಧರೆಯೊಳಗೆ ಬಲ್ಲವರು
ಆವ ಜಲದಲಿ ಮಿಂದರೆಯು ಗಂಗಾದಿ ತೀರ್ಥಗಳು ತಾ ಒಲಿದು ಬಂದಲ್ಲಿ
ನೆಲೆಗೊಂಡು ಈವರು ಅಖಿಳಾರ್ಥಗಳನು
ಅರಿಯದ ಜೀವರು ಅಮರ ತರಂಗಿಣಿಯನು ಐದಿದರು ಫಲವೇನು//7//
ನದನದಿಗಳು ಇಳೆಯೊಳಗೆ ಪರಿವವು ಉದಧಿ ಪರಿಯಂತರದಿ
ತರುವಾಯದಲಿ ರಮಿಸುವವು ಅಲ್ಲಿ ತನ್ಮಯವಾಗಿ ತೋರದಲೆ
ವಿಧಿ ನಿಷೇಧಗಳು ಆಚರಿಸುವರು ಬುಧರು
ಭಗವದ್ರೂಪ ಸರ್ವತ್ರದಲಿ ಚಿಂತನೆ ಬರಲು ತ್ಯಜಿಸುವರು ಅಖಿಳ ಕರ್ಮಗಳ//8//

ಕಲಿಯೆ ಮೊದಲಾದ ಅಖಿಳ ದಾನವರೊಳಗೆ
ಬ್ರಹ್ಮ ಭವಾದಿ ದೇವರ್ಕಳು ನಿಯಾಮಕರಾಗಿ ಹರಿಯಾಜ್ಞೆಯಲಿ
ಅವರವರ ಕಲುಷ ಕರ್ಮವ ಮಾಡಿ ಮಾಡಿಸಿ
ಜಲರುಹೇಕ್ಷಣಗೆ ಅರ್ಪಿಸುತ ನಿಶ್ಚಲ ಸುಭಕ್ತಿ ಜ್ಞಾನ ಪೂರ್ಣರು ಸುಖಿಪರು ಅವರೊಳಗೆ//9//
ಆವ ಜೀವರೊಳಿದ್ದರೇನು? ಇನ್ನಾವ ಕರ್ಮವ ಮಾಡಲೇನು?
ಇನ್ನಾವ ಗುಣ ರೂಪಗಳ ಉಪಾಸನೆ ಮಾಡಲೇನವರು?
ಕಾವನಯ್ಯನ ಪರಮ ಕಾರುಣ್ಯ ಅವಲೋಕನ ಬಲದಿ ಚರಿಸುವ
ದೇವತೆಗಳನು ಮುಟ್ಟಲು ಆಪವೆ ಪಾಪ ಕರ್ಮಗಳು//10//

ಪತಿಯೊಡನೆ ಮನಬಂದ ತೆರದಲಿ ಪ್ರತಿ ದಿವಸದಲಿ ರಮಿಸಿ ಮೋದಿಸಿ
ಸುತರ ಪಡೆದು ಇಳೆಯೊಳು ಜಿತ ಇಂದ್ರಿಯಳು ಎಂದು ಕರೆಸುವಳು
ಕೃತಿ ಪತಿ ಕಥಾಮೃತ ಸುಭೋಜನ ರತ ಮಹಾತ್ಮರಿಗೆ
ಇತರ ದೋಷ ಪ್ರತತಿಗಳು ಸಂಬಂಧಿಸುವವೇನು ಅಚ್ಯುತನ ದಾಸರಿಗೆ//11//

ಸೂಸಿಬಹ ನದಿಯೊಳಗೆ ತನ್ನ ಸಹಾಸ ತೋರುವೆನೆನುತ
ಜಲಕೆದುರು ಈಸಿದರೆ ಕೈಸೋತು ಮುಳುಗುವ
ಹರಿಯ ಬಿಟ್ಟವನು ಕ್ಲೇಶವೈದುವ ಅನಾದಿಯಲಿ ಸಾರ್ವೇಶ ಕ್ಲುಪ್ತಿಯ ಮಾಡಿದುದ ಬಿಟ್ಟು
ಆಶೆಯಿಂದಲಿ ಅನ್ಯರ ಆರಾಧಿಸುವ ಮಾನವನು//12//

ನಾನು ನನ್ನದು ಎಂಬ ಜಡಮತಿ ಮಾನವನು ದಿನದಿನದಿ ಮಾಡುವ
ಸ್ನಾನ ಜಪ ದೇವಾರ್ಚನೆಯೇ ಮೊದಲಾದ ಕರ್ಮಗಳ
ದಾನವರು ಸೆಳೆದೊಯ್ವರಲ್ಲದೆ ಶ್ರೀನಿವಾಸನು ಸ್ವೀಕರಿಸ
ಮದ್ದಾನೆ ಪಕ್ವ ಕಪಿತ್ಥ ಫಲ ಭಕ್ಷಿಸಿದ ವೋಲಹುದು//13//

ಧಾತ್ರಿಯೊಳಗುಳ್ಳ ಅಖಿಳ ತೀರ್ಥಕ್ಷೇತ್ರ ಚರಿಸಿದರೇನು
ಪಾತ್ರಾಪಾತ್ರವರಿತು ಅನ್ನಾದಿ ದಾನವ ಮಾಡಿ ಫಲವೇನು
ಗಾತ್ರ ನಿರ್ಮಲನಾಗಿ ಮಂತ್ರ ಸ್ತೋತ್ರ ಪಠಿಸಿದರು ಏನು
ಹರಿ ಸರ್ವತ್ರಗತನು ಎಂದರಿಯದೆ ತಾ ಕರ್ತೃ ಎಂಬುವನು//14//

ಕಂಡ ನೀರೊಳು ಮುಳುಗಿ ದೇಹವ ದಂಡಿಸಿದ ಫಲವೇನು
ದಂಡ ಕಮಂಡಲoಗಳ ಧರಿಸಿ ಯತಿಯೆಂದೆನಿಸಿ ಫಲವೇನು
ಅಂಡಜಾಧಿಪನು ಅಂಸಗನ ಪದ ಪುಂಡರೀಕದಿ ಮನವಹರ್ನಿಶಿ
ಬಂಡುಣಿಯವೋಲ್ ಇರಿಸಿ ಸುಖಪಡದೆ ಇಪ್ಪ ಮಾನವನು//15//

ವೇದ ಶಾಸ್ತ್ರ ಪುರಾಣ ಕಥೆಗಳ ಓದಿ ಪೇಳಿದರೇನು
ಸಕಲ ನಿಷೇಧ ಕರ್ಮಗಳ ತೊರೆದು ಸತ್ಕರ್ಮಗಳ ಮಾಡಿ ಏನು
ಓದನಂಗಳ ಜರಿದು ಶ್ವಾಸ ನಿರೋಧಗೈಸಿದರೇನು
ಕಾಮ ಕ್ರೋಧವ ಅಳಿಯದೆ ನಾನು ನನ್ನದೆಂಬ ಮಾನವನು//16//

ಏನು ಕೇಳಿದರೇನು ನೋಡಿದರೇನು ಓದಿದರೇನು
ಪೇಳಿದರೇನು ಪಾಡಿದರೇನು ಮಾಡಿದರೇನು ದಿನದಿನದಿ
ಶ್ರೀನಿವಾಸನ ಜನ್ಮ ಕರ್ಮ ಸದಾ ಅನುರಾಗದಿ ನೆನೆದು
ತತ್ತತ್ ಸ್ಥಾನದಲಿ ತದ್ರೂಪ ತನ್ನಾಮಕನ ಸ್ಮರಿಸದವ//17//

ಬುದ್ಧಿ ವಿದ್ಯಾಬಲದಿ ಪೇಳಿದ ಅಶುದ್ಧ ಕಾವ್ಯವು ಇದಲ್ಲ
ತತ್ವ ಸುಪದ್ಧತಿಗಳನು ತಿಳಿದ ಮಾನವನು ಅಲ್ಲ ಬುಧರಿಂದ
ಮಧ್ವ ವಲ್ಲಭ ತಾನೇ ಹೃದಯದೊಳು ಇದ್ದು ನುಡಿದಂದದಲಿ ನುಡಿದೆನು
ಅಪದ್ಧಗಳ ನೋಡದಲೆ ಕಿವಿಗೊಟ್ಟು ಆಲಿಪುದು ಬುಧರು//18//

ಕಬ್ಬಿನೊಳಗಿಹ ರಸ ವಿದಂತಿಗೆ ಅಬ್ಬು ಬಲ್ಲುದೆ
ಭಾಗ್ಯ ಯೌವನ ಮಬ್ಬಿನಲಿ ಮೈ ಮರೆದವಗೆ ಹರಿ ಸುಚರಿತಾಮೃತವು ಲಭ್ಯವಾಗದು
ಹರಿಪದಾಬ್ಜದಿ ಹಬ್ಬಿದ ಅತಿ ಸದ್ಭಕ್ತಿ ರಸ
ಉಂಡು ಉಬ್ಬಿ ಕೊಬ್ಬಿ ಸುಖಾಬ್ಧಿಯೊಳಗೆ ಆಡುವವಗೆ ಅಲ್ಲದಲೆ//19//

ಖಗವರಧ್ವಜನ ಅಂಘ್ರಿ ಭಕುತಿಯ ಬಗೆಯನು ಅರಿಯದ ಮಾನವರಿಗಿದು
ಒಗಟಿನಂದದಿ ತೋರುತಿಪ್ಪದು ಎಲ್ಲ ಕಾಲದಲಿ
ತ್ರಿಗುಣ ವರ್ಜಿತನ ಅಮಲ ಗುಣಗಳ ಪೊಗಳಿ ಹಿಗ್ಗುವ ಭಾಗವತರಿಗೆ
ಮಿಗೆ ಭಕುತಿ ವಿಜ್ಞಾನ ಸುಖವಿತ್ತು ಅವರ ರಕ್ಷಿಪುದು//20//

ಪರಮ ತತ್ವ ರಹಸ್ಯವು ಇದು ಭೂಸುರರು ಕೇಳುವುದು ಸಾದರದಿ
ನಿಷ್ಠುರಿಗಳಿಗೆ ಮೂಢರಿಗೆ ಪಂಡಿತ ಮಾನಿ ಪಿಶುನರಿಗೆ
ಅರಸಿಕರಿಗೆ ಇದು ಪೇಳ್ವುದಲ್ಲ ಅನವರತ ಭಗವತ್ಪಾದ
ಯುಗಳ ಅಂಬುರುಹ ಮಧುಕರನು ಎನಿಸುವವರಿಗೆ ಇದನು ಅರುಪು ಮೋದದಲಿ//21//

ಲೋಕವಾರ್ತೆಯು ಇದಲ್ಲ ಪರ ಲೋಕೈಕನಾಥನ ವಾರ್ತೆ ಕೇಳ್ವರೆ
ಕಾಕುಮನುಜರಿಗೆ ಪರಿಮಳವು ಷಟ್ಪದ ಸ್ವೀಕರಿಸುವಂದದಲಿ
ಜಲಚರ ಭೇಕ ಬಲ್ಲುದೆ? ಇದರ ರಸ ಹರಿ ಭಕುತಗಲ್ಲದಲೆ//22//

ಸ್ವಪ್ರಯೋಜನರಹಿತ ಸಕಲೇಷ್ಟ ಪ್ರದಾಯಕ ಸರ್ವಗುಣ ಪೂರ್ಣ ಪ್ರಮೇಯ
ಜರಾಮರಣ ವರ್ಜಿತ ವಿಗತ ಕ್ಲೇಶ ವಿಪ್ರತಮ ವಿಶ್ವಾತ್ಮ
ಘ್ರುಣಿ ಸೂರ್ಯ ಪ್ರಕಾಶ ಅನಂತ ಮಹಿಮ
ಘೃತ ಪ್ರತೀಕ ಆರಾಧಿತ ಅಂಘ್ರಿ ಸರೋಜ ಸುರರಾಜ//23//

ವನಚರ ಅದ್ರಿ ಧರಾ ಧರನೆ ಜಯ ಮನುಜ ಮೃಗವರ ವೇಷ ಜಯ
ವಾಮನ ತ್ರಿವಿಕ್ರಮ ದೇವ ಜಯ ಭೃಗು ರಾಮ ಭೂಮ ಜಯ
ಜನಕಜಾ ವಲ್ಲಭನೆ ಜಯ ರುಗ್ಮಿಣಿ ಮನೋರಥ ಸಿದ್ಧಿದಾಯಕ
ಜಿನ ವಿಮೋಹಕ ಕಲಿವಿದಾರಣ ಜಯ ಜಯಾರಮಣ//24//

ಸಚ್ಚಿದಾನಂದಾತ್ಮ ಬ್ರಹ್ಮ ಕರಾರ್ಚಿತ ಅಂಘ್ರಿ ಸರೋಜ
ಸುಮನಸ ಪ್ರೋಚ್ಚ ಸನ್ಮಂಗಳದ ಮಧ್ವ ಅಂತಃಕರಣರೂಢ
ಅಚ್ಯುತ ಜಗನ್ನಾಥ ವಿಠಲ ನಿಚ್ಚ ನೆಚ್ಚಿದ ಜನರ ಬಿಡ
ಕಾಡ್ಗಿಚ್ಚನು ಉಂಡು ಅರಣ್ಯದೊಳು ಗೋ ಗೋಪರನು ಕಾಯ್ದ//25//
//ಇತಿ ಶ್ರೀ ಸರ್ವಪ್ರತೀಕ ಸಂಧಿ ಸಂಪೂರ್ಣಂ//
**********
*******  

No comments:

Post a Comment