Tuesday 1 June 2021

ಸೃಷ್ಟಿ ಸ್ಥಿತಿ ಕಾರಣಕೆ ಕರ್ತನಾದ ಶ್ರೀ ವಿಷ್ಣುವಿಗೆ ಜಯ ಮಂಗಳಂ ankita hanumesha vittala

 (ಮಂಗಳ ಪದ)

ಸೃಷ್ಟಿ ಸ್ಥಿತಿ ಕಾರಣಕೆ ಕರ್ತನಾದ ಶ್ರೀ ವಿಷ್ಣುವಿಗೆ ಜಯ ಮಂಗಳಂ ಪ


ಮಚ್ಛ ಕಚ್ಛಪ ವರಾಹಾದಿ ಅವತಾರ

ಸ್ವೇಚ್ಛೆಯಾದರಿಸಿದವಗೆ ನೆಚ್ಚಿ ನೆನೆಯುವರು ಮನದಿಸ್ಟೆಪೂರಿಸುವ ಶ್ರೀ

ಅಚ್ಯುತಗೆ ಜಯ ಮಂಗಳಂ ಹರಿಗೆ 1


ಸಿರಿ ಬ್ರಹ್ಮವಾಯು ಮೊದಲಾದ ಸನಕಾದ್ಯರಿಂ

ಸ್ತೋತ್ರಗೊಳ್ವಗೆ ಮಂಗಳಂ

ನಾರದ ಶುಕಾದಿ ಮುನಿಗಳು ಪಠಿಸುವ ಪುರಾಣ

ಪುರುಷೋತ್ತಮಗೆ ಮಂಗಳಂ ಹರಿಗೆ 2

****


No comments:

Post a Comment