Saturday 1 May 2021

ಅಭಿನವ ಜನಾರ್ದನ ವಿಠಲ ಯೆನ್ನ ankita janardhana vittala abhinava janardhana vittala stutih

ಶ್ರೀ ಗುರುಗೋಪಾಲದಾಸರ ಶಿಷ್ಯರಾದ ಶ್ರೀ ಜನಾರ್ದನವಿಠಲರು ಶ್ರೀ ಪ್ರೇಮದಾಸರಿಗೆ " ಹೇವಳ೦ಬಿ ನಾಮ ಸಂವತ್ಸರ ವೈಶಾಖ ಶುದ್ಧ ದ್ವಿತೀಯ ಶುಕ್ರವಾರದಂದು " ಅಭಿನವ ಜನಾರ್ದನ ವಿಠಲ " ಎಂಬ ಅಂಕಿತದೊಂದಿಗೆ ದಾಸ ದೀಕ್ಷೆ ಕೊಟ್ಟರು. ಆ ಅಂಕಿತ ಪದ ಹೀಗಿದೆ...

ರಾಗ : ಕಾಂಬೋಧಿ     ತಾಳ : ಝ೦ಪೆ


ಅಭಿನವ ಜನಾರ್ದನ ವಿಠಲ ಯೆನ್ನ ।

ಗಭೀರ ವಚನವ ಲಾಲಿಸೈಯ್ಯಾ ಗಮನಕದಿ ವೇಗ ।। ಪಲ್ಲವಿ ।।


ಒಡಿಯ ನೀನಹುದೆಂದು ಅಡಿಗಡಿಗೆ ಚರಣಗಳ ।

ಬಿಡದೆ ನಂಬಿಕೊಂಡು ಪೊಡವಿಯೊಳಗೆ ।

ನಡತಿವಂತರ ಕೂಡ ಬಿಡದೆ ಆಡುವ ನರಗ ।

ಪಡಿನಾಮ ಅಮೃತವನೇ ಪಾಲಿಸಿ ರಕ್ಷಿಪುದು ।। ಚರಣ ।।


ಅಪರಾಧವೆಣಿಸದಲೇ ಅಪವರ್ಗದಾ ಜನರ ।

ನಿಪುಣರನ ಮಾಡುವಾ ನೀತಿವಂತಾ ।

ಕಪಟ ಕುಚೇಷ್ಟಗಳ ಪ್ರಕಟ ಬಾಹ್ಯಾಂತರದಿ ।

ವಪುವಿಲಿದ್ದದು ಕಳೆದು ಉಪಜೀವ್ಯ ನೀನಾಗಿ ।। ಚರಣ ।।

ಶ್ರೀ ಗುರು ಗೋಪಾಲ ದಾಸರಾಯರ ಪಾದ ।

ಜಾಗುರೂಕದಿ೦ದ ಭಜಿಸಿ ಜಗದಿ ।

ಯೋಗನೆಸಗಲಿ ಮನಕೆ ಯೋಗೀಶ ಭಕ್ತಿಯಲಿ ।

ಭಾಗೀರಥಿ ಪಿತ ಜನಾರ್ದನವಿಠಲೈಯ್ಯಾ ।। ಚರಣ ।।

*****


No comments:

Post a Comment