Wednesday 23 June 2021

ಹ್ಯಾಗೆ ಮುಕ್ತಿಯಾಗುವುದು ಕೂಗಿದರೇನು ಫಲ ankita gururama vittala

 ಶ್ರೀ ಗುರುರಾಮವಿಠಲ ದಾಸರ ರಚನೆ 

ಹ್ಯಾಗೆ ಮುಕ್ತಿಯಾಗುವುದು ಕೂಗಿದರೇನು ಫಲ   


ಯೋಗವರಿತು ತನ್ನಲಿರುವ ನಾಗಶಯ್ಯನನ ನೋಡದೆ  ಅ.ಪ


ಗುರುಸೇವೆ ಮಾಡಲಿಲ್ಲ ಗುರುತು ತಿಳಿಯಲಿಲ್ಲ

ಅರಿತೆವೆಂದು ಹಾರಾಡುವ ಅಹಂಕಾರಿಗಳಿಗೆ 

1

ವೇದಶಾಸ್ತ್ರ ಓದಲಿಲ್ಲ ವಾದವಿಲ್ಲಿ ಸಲ್ಲ

ಬೋಧೆ ಮನಸಿಗಂಟಲಿಲ್ಲ ಬುದ್ಧಿಶೂನ್ಯರಿಗೆಲ್ಲ 

2

ಜೀವರಕ್ಷಣ ತಿಳಿಯದೆ ದೇವರನ್ನು ನಂಬದೆ

ನಾವು ನಮ್ಮದೆಂಬುದು ಬಿಡದೆ ಸಾವ ಕುನ್ನಿಗಳಿಗೆ 

3

ಬಾಯಿಮಾತಿಲಿಂದಲೇನು ಮಾಯವಾದಗಳೇನು

ನ್ಯಾಯಮಾರ್ಗವರಿತವನು ಕಾಯದಾಸೆಮಾಡನು 

4

ಗುರುರಾಮವಿಠ್ಠಲನ ಸ್ಮರಣೆಯ ಮಾಡದೆ

ಗರುವದಿ ಮೆರೆಯುವ ದುರುಳ ನರರಿಗೆ 

5

No comments:

Post a Comment