Tuesday 1 June 2021

ಜಯ ಮಂಗಳಂ ಸತ್ಯಧೀರತೀರ್ಥರಿಗೆ ankita hanumesha vittala satyadheera teertha stutih

 ಜಯ ಮಂಗಳಂ ಸತ್ಯಧೀರತೀರ್ಥರಿಗೆ

ಶುಭಮಂಗಳಂ ಯತೀ ಗುಣಮಣಿಗೆ ಪ


ಜಗದುದರಧರನಾದ ಜಗವ ಸೃಷ್ಟಿಸಿದಂಥ

ಜಗವ ಪಾಲಿಸುವ ಶ್ರೀ ಜಗದೀಶನಾ

ತ್ರಿಗುಣಮಾನಿಯಳಿಂದ ಬಗೆ ಬಗೆಯ ಸ್ತುತಿಗೋಳ್ವ

ರಘುವರನ ದಿವ್ಯ ಚರಣಗಳ ಸೇವಿಪಗೆ 1


ಜಗದೀಶನಾಜ್ಞೆಯಿಂ ಜಗಕೆ ಗುರುವೆನಿಸಿ ನಾ-

ಲ್ಮೊಗನೈಯ್ಯ ಸರ್ವಪರಿಹಾರನೆನಿಸಿದವಗೆ

ಜಗದೊಳಿರುವ ಅಜ್ಞ ಜನರುಗಳಿಗೆ ಪಂಚಮು-

ದ್ರೆಗಳನೇ ಇತ್ತು ಪಾಪಗಳ ತರಿದವಗೆ 2


ಸತ್ಯವೀರರು ಕರಗಳೆತ್ತಿ ಉತ್ತಮಪದವ

ಇತ್ತದ್ದೆ ಪುಸಿಯೆಂದು ನುಡಿದವರ ಮುಖಕೆ

ಮೃತ್ತಿಕೆಯನು ಹಚ್ಚಿ ಹತ್ತುಯಂಟೋ ರೂಪ ಸ-

ರ್ವೋತ್ತಮನ ಪೂಜಿಸಿದ ಸತ್ಯಧೀರರಿಗೆ 3


ಪುರಕಾಶಿಯಿಂದ ರಾಮೇಶ್ವರದ ಪರಿಯಂತ

ಇರುವ ಕ್ಷೇತ್ರಗಳಲ್ಲಿಯ ಮಹಿಮೆಯಾ

ದುರುಳ ಕಲಿಯಲಿ ಕಡಿಮೆಯಾಗಬಾರದು ಮನುಜ

ಸಿರಿರಾಮನಾಶ್ರಯದಿ ಜನಿಸಿ ಬಂದವಗೆ 4


ಕರುಣಾಸಾಗರನಿಗೆ ಕರೆದಲ್ಲಿ ಬರುವಗೆ

ಶರಣುಬಂದವರ ಪರಿಪಾಲಿಸುವಗೆ

ವರಗುರು ಮಧ್ವರಾಯರ ಪೀಠಪಾತ್ರಗೆ

ಧೀರ ಹನುಮೇಶವಿಠಲ 5

****


No comments:

Post a Comment