Tuesday 1 June 2021

ಆಸೆತ ಬಿಡು ಮನವೆ ನಿನ್ನ ದುರಾಸೆಯ ಬಿಡು ಮನವೆ ankita venkatakrishna

 by yadugiriyamma

ಸಾಮಾಜಿಕ ಕೀರ್ತನೆಗಳು

ಆಸೆತ ಬಿಡು ಮನವೆ ನಿನ್ನ ದುರಾಸೆಯ ಬಿಡು ಮನವೆ ಪ

ಆಸೆಯ ಬಿಟ್ಟು ಶ್ರೀವಾಸುದೇವನ ಪಾದ
ಘಾಸಿಯಾಗದೆ ನಂಬು ಲೇಸಾಗುವುದು ನಿನಗೆ ಅ.ಪ

ಕಾಮಕ್ರೋಧಗಳ ಬಿಟ್ಟು ಮೋಹಮದಡಂಭ ಅಸೂಯೆಸುಟ್ಟು
ಎಮ್ಮದು ತಮ್ಮದು ಎಂಬ ಭ್ರಾಂತಿಯ ಬಿಟ್ಟು
[ನಮ್ಮ] ವನಜನಾಭನ ಪಾದದೊಳಗೆ ನೀ ಮನವಿಟ್ಟು 1

ಪರದ್ರೋಹ ಪರನಿಂದನೆಯನು ಮಾಡಿ ಪಾತಕಿಯಾಗದೆ
ಬರಿದೆ ನವರತ್ನ ರಜತ ಸುವರ್ಣ ಧನಧಾನ್ಯದಾಶೆಯ ಬಿಟ್ಟು
ನಿರಾಶೆಯೊಳಿರು ನೀನು 2

ಹಾನಿವೃದ್ಧಿ ಯಶೋಲಾಭಗಳೆಲ್ಲ ಸ್ವಾಮಿಯಧೀನವಲ್ಲದೆ
ನೀನು ಯೋಚನೆಯನ್ನು ಮಾಡಿಯೆ ಫನವೇನು
ಶ್ರೀನಿವಾಸನ ಪಾದ ನೇಮದಿಂದಲೆ ನಂಬು 3
****

No comments:

Post a Comment