Sunday 1 August 2021

ಉದಯ ಕಾಲದೊಳೆದ್ದು ಮುದದಿಂದ ಶ್ರೀ ತುಳಸಿ ankita gopalakrishna vittala

ಉದಯ ಕಾಲದೊಳೆದ್ದು ಮುದದಿಂದ ಶ್ರೀ ತುಳಸಿ

ಪದುಮನಾಭನÀ ಸತಿ ಉದ್ಧರಿಸೆನ್ನನೆಂದು

ಉದಕವೆರೆದು ನಮಸ್ಕರಿಸಿ ವಂದಿಸುತಲಿ

ಸುಧೆಯ ಸುರರಿಗಿತ್ತ ಧನ್ವಂತರಿ ನಯನದಿ

ಉದಿಸಿದೆ ಆನಂದ ಅಶ್ರುಗಳಿಂದಲಿ

ಮದಗರ್ವ ಬಿಡಿಸೆನ್ನ ಶುದ್ಧಿಯನ್ನೆ ಮಾಡಿ

ಹೃದಯದಿ ಹರಿಯ ತೋರಿ ರಕ್ಷಿಸೆಂದೆನಲು

ಸದ್ದಿಲ್ಲದೆ ಪೊರೆವ ಗೋಪಾಲಕೃಷ್ಣವಿಠ್ಠಲ

****

 

No comments:

Post a Comment