Sunday 1 August 2021

ಕಡೆಯಿಲ್ಲದೀ ಭವಾಂಬುಧಿಯ ದಾಂಟುವೊಡೆ ಜಗದೊಡೆಯ ಶ್ರೀಕೃಷ್ಣನೊಬ್ಬನ ನಂಬು ಮರುಳೆ ankita vaikunta vittala

..

kruti by ಬೇಲೂರು ವೈಕುಂಠ ದಾಸರು belur vaikunta dasaru


ಕಡೆಯಿಲ್ಲದೀ ಭವಾಂಬುಧಿಯ ದಾಂಟುವೊಡೆ ಜಗ

ದೊಡೆಯ ಶ್ರೀಕೃಷ್ಣನೊಬ್ಬನ ನಂಬು ಮರುಳೆ ಪ


ನೆಲೆಯಾದುದಿಲ್ಲ ತಾಯುದರ ಬಾಲತ್ವವಿದು

ನೆಲೆಯಾದುದಿಲ್ಲ ಜವ್ವನವೆಂಬುದೂ

ನೆಲೆಯಾದುದಿಲ್ಲ ಜರೆಯು ಚಕ್ಷುರಾಜಿಗಳು

ನೆಲೆಯಾಗಬಲ್ಲದೆ ಒಡಲು ನಿನಗೆ ಮರುಳೆ 1


ಹುಟ್ಟಿದನಳಿದನೇಕೆ ಜೀವ ನಿಜ ಜನನಿಯಲಿ

ಹೊಟ್ಟೆಯಲಿ ಹೊತ್ತು ಹೆತ್ತುದಕೈಸಲೆ

ಕೊಟ್ಟುಕೊಂಡುದಕೆ ಪಡೆದಿತ್ತು ಸುತರೆಂದೆನಿಸಿ

ನೆಟ್ಟನೈದುವರು ನಿನಗೇನಹರು ಮರುಳೆ 2


ನೀನಳಿದ ಬಳಿದ ಸತಿಸುತರಿಗೇನ್ಹೇಳುವೆ

ಏನಹರು ನಿನಗವರು ಮೃತವಾದ ಬಳಿಕಾ

ದೀನನಹೆ ಬಯಲಮಮತೆಗಳೆಂದು ತಿಳಿದುಕೊ

ನೀನೆತ್ತಲವರೆತ್ತಲಿಹರವರು ಮರುಳೆ 3


ಮಗನಾವ ತಂದೆಯಾವನು ಜೀವ ಜೀವರಿಗೆ

ಮಗನು ತಂದೆಯು ಕರ್ಮವಾಸನೆಗಳಾ

ಬಗೆಯಿಂದಲೀಶ್ವರನು ಜೀವಕೋಟಿಗಳ ಸೃಜಿಸೆ

ಜಗದೊಳಾಡುವರು ನಿನಗೇನಹರು ಮರುಳೆ 4


ಅತಿಭಕ್ತನೆಂದು ವೈಕುಂಠ ವೇಲಾಪುರದ

ಪತಿ ಅರ್ಜುನಗೆ ನಿರೂಪಿಸಿದರ್ಥವ

ಮತಿಗೆಟ್ಟು ಬಿಟ್ಟು ನಾನಾ ದೈವದಡಿಗಳಿಗಾ

ನತನಾಗಿ ಸಂಸಾರಿಯ[ಹೆ] ಇದೇಕೆ ಮರುಳೆ 5

***


 

No comments:

Post a Comment