Monday 2 August 2021

ಯಾಕೆನ್ನನಿಲ್ಲಿಗೆ ಎಳೆ ತಂದ್ಯೊ ಹರಿ ತಪ್ಪೇನನೆಸಿಗಿದೆನೊ ankita gopalakrishna vittala

ಯಾಕೆನ್ನನಿಲ್ಲಿಗೆ ಎಳೆ ತಂದ್ಯೊ ಹರಿ ತಪ್ಪೇನನೆಸಿಗಿದೆನೊ ಪ.

ಜೋಕೆಯಿಂದಲಿ ಎನ್ನ ಕಾಯಬೇಕಲ್ಲದೆ

ನೂಕಿದರೆನ್ನನು ಸಾಕುವರ್ಯಾರೊ ದೊರಿ ಅ.ಪ.

ಯಾರಿಗೇನೆಸಗಿದೆ ಆರ ನಾ ದೂಷಿಸಿದೆ

ಆರ ನಾ ನಿಂದಿಸಿದೆನೊ

ಆರ ನಾ ವಂಚಿಸಿದೆ ಆರನು ನಾನಹಂ

ಕಾರದಿ ನೋಡಿದೆನೊ ಈ ರೀತಿ ನೊಂದೆನು 1

ಪದದಿಂದ ಚ್ಯುತಿಪೊಂದಿ ವಿಧಿ ಬರಹದೊಳಿನ್ನು

ವಿಧಿಪಿತ ನಿನ್ನ ಕಾಣಲಿಲ್ಲ

ಮದಗರ್ವ ಬಿಡಿಸೆನ್ನ ಸದಮಲ ಹೃದಯದಿ

ಪದ ಪದುಮವ ತೋರಿ ಉದ್ಧರಿಸೆನ್ನನು 2

ಸೃಷ್ಟಿಕರ್ತನೆ ಕೇಳೊ ಕಷ್ಟವಪಡಲಾರೆ

ದೃಷ್ಟಿಲಿ ನೋಡಿ ಕಾಯೊ

ಎಷ್ಟು ಬೇಡಲೊ ನಾನು ಬೆಟ್ಟದೊಡೆಯ ಹರಿ

ವೃಷ್ಣೀಶ ಗೋಪಾಲಕೃಷ್ಣವಿಠ್ಠಲ ದೊರಿ3

****


No comments:

Post a Comment