Monday 2 August 2021

ನೋಡಬಲ್ಲಿರೆ ದಿವ್ಯ ಉಡುಪಿ ಕ್ಷೇತ್ರ ನಾಡಿನೊಳಗಲ್ಲಿ ankita gopalakrishna vittala

ನೋಡಬಲ್ಲಿರೆ ದಿವ್ಯ ಉಡುಪಿ ಕ್ಷೇತ್ರ

ನಾಡಿನೊಳಗಲ್ಲಿ ಪೋದವನೆ ಸತ್ಪಾತ್ರ ಪ.


ಶ್ರೇಷ್ಠ ಸದ್ಗುರು ಚರಣ ಕಮಲಗಳಿಗಭಿನಮಿಸಿ

ಅಷ್ಟು ದೇವತೆಗಳಿಗೆ ಅಭಿವಂದಿಸಿ

ಮುಟ್ಟಿ ಹಿರಿಯರ ಚರಣ ಮಹದಾಜ್ಞೆ ಸ್ವೀಕರಿಸಿ

ಪಟ್ಟ ಬ್ರಹ್ಮನ ಪದಕೆ ಸಿರಿಹರಿಗೆ ಎರಗಿ 1

ಎಷ್ಟು ಜನ್ಮದ ಫಲವೊ ಈ ಯಾತ್ರೆ ಕೈಕೊಳಲು

ಶ್ರೇಷ್ಠ ಶ್ರೀ ಮಧ್ವಮುನಿ ಮತದಿ ಜನಿಸಿ

ದಿಟ್ಟ ವೈಷ್ಣವರಾದ ಭಕ್ತಸಂಗವ ಕೂಡಿ

ಬಿಟ್ಟು ಮನ ಕಲ್ಮಷಗಳೆಲ್ಲ ಮುಂದೋಡಿ2

ಭರತಖಂಡದಿ ಪುಟ್ಟಿ ವಾಯುಮತ ಪೊಂದಿದಕೆ

ಹರುಷದಲಿ ಈ ಯಾತ್ರೆ ಗೈದಲ್ಲದೆ

ಹರಿದು ಪೋಗದು ಜೀವದe್ಞÁನದಂಧತೆಯು

ಪರಮ ಸುe್ಞÁನದಾತನ ನೋಡಬನ್ನಿ 3

ಮಧ್ವರಾಯರ ಕರುಣ ಮುದ್ದು ಕೃಷ್ಣನ ಕತೆಯು

ಸದ್ವೈಷ್ಣವರ ಸಂಗ ಸನ್ಮೋದ ಲಾಭ

ಹೃದ್ವನಜದಲಿಪ್ಪ ಹರಿಯ ಕಾಣಲು ಮಾರ್ಗ

ಗೆದ್ದು ಭವದಬ್ಧಿ ದಾಟುವಿರಿ ನೀವಿನ್ನು 4

ಶ್ರೀ ಪತಿಯು ಬಾಲರೂಪದಿ ಇಲ್ಲಿ ನೆಲಸಿಹನು

ಗೋಪಿಕಾಜನಪ್ರಿಯ ಗೋಪಿಬಾಲ

ಗೋಪಾಲಕೃಷ್ಣವಿಠ್ಠಲನ ನೋಡುವ ಪುಣ್ಯ

ಈ ಪರಮ ಪುರುಷನೇ ತಂದಿತ್ತನೆಂದೂ 5

****


No comments:

Post a Comment