Monday 2 August 2021

ಎಂದಿಗು ಕಾಂಬುವೆನೋ ಶ್ರೀನಿವಾಸ ಬಂಧನ ಬಿಡಿಸು ಶ್ರೀಶಾ ಇಂದಿರೇಶಾ ankita kalimardhanakrishna

 ಎಂದಿಗು ಕಾಂಬುವೆನೋ ಶ್ರೀನಿವಾಸ

ಬಂಧನ ಬಿಡಿಸು ಶ್ರೀಶಾ ಇಂದಿರೇಶಾ ಪ.


ಇಂದು ಈ ಭವದಲ್ಲಿ ನೊಂದು ನೊಂದೆನೊ ದೇವಾ

ಗೋವಿಂದಾ ಪಾಲಿಸಬೇಕಯ್ಯಾ ಗೋಗಳರಾಯ ಅ.ಪ.


ಇಂದಿರೇಶನೆ ನಿನ್ನ ಒಂದಿನಾದಿ ನಾನು ದೈನ್ಯದಿ ಭಜಿಸದೆ

ಬ್ಯಾಸರದೇ ಮಂದಮತಿಯು ನಾನು

ಸುಂದರ ಮೂರುತಿ ನೀನು

ಯನ್ನ ಹೃದಯ ಮಂದಿರದಲ್ಲಿ ಸಂದರುಶನ ಕೊಡೊ ಇಲ್ಲಿ 1


ಸದೋಷಿಯು ನಾನು ದೋಷರಹಿತ ನೀನು

ಶೇಷಶಯನ ನಿಮ್ಮ ನಾಮವೇ ಭೂಷಣ

ಸ್ವರಮಣನೀ ನಿನ್ನ ಸ್ಮರಣೆಯಾ ಮಾಡದೆ

ಹಾಳು ಮಾತುಗಳಿಂದ ಹೊತ್ತುಗಳದೆ ಮುಕುಂದಾ 2


ಮತ್ಗ್ಯಾದ್ಯನಂತವತಾರ ನೀನು ತುಚ್ಛದೈತ್ಯಸ ಸಂಹಾರ

ಇಚ್ಛಾದಿಂದಲಿ ನೀನು ಸುರರಿಗಾಧಾರ

ಕಾಳಿಯಮರ್ದನ ಕೃಷ್ಣಧೀರ ಗಂಭೀರಾಸುತಸುಕುಮಾರಾ 3

****


No comments:

Post a Comment