Monday 2 August 2021

ಬೆಳಗಿರೆ ಆರುತಿಯ ಶ್ರೀ ತುಳಸಿಗೆ ankita karpara narahari

ಬೆಳಗಿರೆ ಆರುತಿಯ ಶ್ರೀ ತುಳಸಿಗೆ ಪ


ಬೆಳಗಿರೆ ಆರುತಿ ತುಳಸಿದೇವಿಗೆ ನಿತ್ಯ

ಲಲನೆಯರೆಲ್ಲ ಮಂಗಳವೆಂದು ಪಾಡುತ ಅ.ಪ


ಸುಧೆಯ ಕಲಶದೊಳು ಮಧುವೈರಿನಯನದ

ಮುದ ಜಲಬೀಳಲು ಉದುಭವಿಸಿದಳೆಂದು 1


ದರುಶನ ಮಾತ್ರದಿ ದುರಿತಗಳೋಡಿಸಿ

ಸ್ಥಿರವಾದ ಸೌಭಾಗ್ಯ ಕರುಣಿಸುವಳೆಂದು 2


ಇಳೆಯೊಳು ಕಾರ್ಪರ ನಿಲಯ ಶ್ರೀನರಹರಿ

ಒಲುಮೆಯ ಪಡೆದ ಶ್ರೀ ತುಳಸಿದೇವಿಗೆ ಬೇಗ3

****


No comments:

Post a Comment