Sunday 1 August 2021

ವಿಧಿನಿಷೇಧವು ನಿನ್ನ ಸ್ಮರಣೆ ವಿಸ್ಮರಣೆಯಲ್ಲದಲರಿಯರೇನೊಂದು ಹರಿಭಕ್ತರು ankita lakshmikanta

 ..


kruti by ಲಕ್ಷ್ಮೀನಾರಯಣರಾಯರು Lakshminarayanaru 


ವಿಧಿ ನಿಷೇಧವು ನಿನ್ನ ಸ್ಮರಣೆ ವಿಸ್ಮರಣೆಯ-

ಲ್ಲದಲರಿಯರೇನೊಂದು ಹರಿಭಕ್ತರು ಪ


ಮಿಂದದ್ದೆ ಗಂಗಾದಿ ತೀರ್ಥಗಳು ಸಾಧುಗಳು

ಬಂದದ್ದೆ ಪುಣ್ಯ ಕಾಲವುಗಳು ಅವರು

ನಿಂದದ್ದೆ ಗಯ ವಾರಣಾಸಿ ಕುರುಕ್ಷೇತ್ರಗಳು

ಬಂದು ಪೋಗಲು ಅದುವೆ ರಾಜಬೀದಿ 1


ಕಂಡು ಕಂಡದ್ದೆಲ್ಲ ಕಮಲನಾಭನ ಮೂರ್ತಿ

ಮಂಡಿಸಿದ ಶಯನ ದಂಡಪ್ರಣಾಮ

ತಂಡತಂಡದ ಕ್ರಿಯೆಗಳೆಲ್ಲ ಹರಿ ಪೂಜೆಗಳು

ಮಂಡೆ ಬಾಗಿಸಿ ಸಮಿಪ ಶರಣ ಜನಕೆ 2


ನಡೆವ ನಡೆಯೆಲ್ಲ ಲಕ್ಷ ಪ್ರದಕ್ಷಿಣೆ ಮತ್ತೆ

ನುಡಿವ ನುಡಿಯೆಲ್ಲ ಗಾಯಿತ್ರಿ ಮಂತ್ರ

ಒಡೆಯ ಶ್ರೀಕಾಂತನ್ನ ಅಡಿಗಡಿಗೆ ಸ್ಮರಿಸುತಿಹ

ದೃಢ ಪ್ರಜ್ಞರೇಂಗೈಯ್ಯಲದುವೆ ಮರ್ಯಾದೆ 3

***


No comments:

Post a Comment