Thursday 5 August 2021

ಹ್ಯಾಂಗಾದರು ಎನ್ನ ನೀ ರಕ್ಷಿಸ ಬೇಕೋ ಸಾಗರಶಯನ ಕೃಷ್ಣಾ ankita narahari P

 ..

kruti by pradyumna teertha ಪ್ರದ್ಯುಮ್ನತೀರ್ಥರು


ಹ್ಯಾಂಗಾದರು ಎನ್ನ ನೀ ರಕ್ಷಿಸ ಬೇಕೋ

ಸಾಗರಶಯನ ಕೃಷ್ಣಾ ಪ


ಭಾಗವತರ ಸಂಗ ಬೇಗದಿಂದಲಿ ಇತ್ತು

ಹೋಗಲಾಡಿಸು ಭವವ ಶ್ರೀ ಕೃಷ್ಣ ಅ.ಪ


ಬಾಲೇರ ಸಲುವಾಗಿ ಕೀಳು ಜನರಲ್ಲಿ

ಶೀಲ ಜರಿದು ಯಾಚಿಸಿ

ಕಾಳಿ ಮರ್ಧನ ನಿನ್ನ ಒಲುಮೆಯ ಪಡೆಯದೆ

ಕಾಲ ಬಲಿಗೆ ಸಿಕ್ಕೆನೊ ಶ್ರೀ ಕೃಷ್ಣ 1

ಅಂಗಜನಾಟಕೆ ಹಗಲಿರುಳೆನ್ನದೆ ಪರ

ಅಂಗನೆರ ಕೂಡಿ

ಮಂಗಳಮಹಿಮ ತುರಂಗ ವದನ ದೇವ

ಭಂಗಕ್ಕೆ ಗುರಿಯಾದೆನೊ ಶ್ರೀ ಕೃಷ್ಣ 2

ದುರುಳರ ಸಂಗವನೆಲ್ಲ ಜರಿದು ಶ್ರೀ ನರಹರೆ

ಕಾರುಣ್ಯದಲಿ ಭಕ್ತನ

ಅರಿಷಟ್ಕರನೆ ಕೊಂದು ಕರಿವರದನೆ ಘೋರ

ನರಕಕ್ಕೆ ಭಯ ತಪ್ಪಿಸೋ ಶ್ರೀಕೃಷ್ಣ 3

***


No comments:

Post a Comment